
ಸೋಮವಾರಪೇಟೆ ಜೂ.11 NEWS DESK : ರಕ್ತದಾನದಿಂದ ಮೂರು ಜೀವಗಳನ್ನು ಉಳಿಸುವುದರೊಂದಿಗೆ, ದಾನಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಸೋಮವಾರಪೇಟೆ ಜೆಎಂಎಫ್ಸಿಯ ಪ್ರಧಾನ ಸಿವಿಲ್ ನ್ಯಾಯಾಧೀಶ ಕೆ.ಗೋಪಾಲಕೃಷ್ಣ ಹೇಳಿದರು.
ಜೆಸಿಐ ಸೋಮವಾರಪೇಟೆ ಪುಷ್ಪಗಿರಿ, ಕೊಡಗು ಜಿಲ್ಲಾ ರಕ್ತನಿಧಿ ಘಟಕ ಮತ್ತು ಯಡೂರು ಬಿಟಿಸಿಜಿ ಸರ್ಕಾರಿ ಪಥಮ ದರ್ಜೆ ಕಾಲೇಜಿನ ಆಶಯದಲ್ಲಿ ವಿಶ್ವರಕ್ತದಾನಿಗಳ ದಿನದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಕ್ತದಾನದಿಂದ ದಾನಿಯ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗುತ್ತದೆ. ದೇಹವು ಪುನರುಜೀವಗೊಳ್ಳುತ್ತದೆ ಮತ್ತು ಹೊಸಕೋಶಗಳನ್ನು ಉತ್ಪಾದಿಸುತ್ತದೆ. ಅದನ್ನು ತಾಜಾಗೊಳಿಸುತ್ತದೆ. ರಕ್ತದಾನ ಮಾಡುವುದಕ್ಕೆ ಅವಕಾಶ ಸಿಕ್ಕಾಗ ಆರೋಗ್ಯವಂತರು ರಕ್ತದಾನ ಮಾಡಬೇಕು ಎಂದು ಹೇಳಿದರು.
ಶರೀರದಲ್ಲಿ ರಕ್ತದ ಚಲನೆಯಿಲ್ಲದೆ ಬುದಕಲು ಸಾಧ್ಯವಿಲ್ಲ. ಅಪಘಾತ, ಶಸ್ತ್ರಚಿಕಿತ್ಸೆ, ರಕ್ತಹೀನತೆ, ಸಾಂಕ್ರಾಮಿಕ ರೋಗಗಳು ತುತ್ತಾದ ಸಂದರ್ಭ ರಕ್ತದ ಅವಶ್ಯಕತೆ ಇರುತ್ತದೆ. ಸಮಯಕ್ಕೆ ಸರಿಯಾಗಿ ರಕ್ತ ಸಿಗದಿದ್ದರೆ ಜೀವಕ್ಕೆ ಆಪಾಯವಿರುತ್ತದೆ. ರಕ್ತದಾನಿಗಳೇ ಅವರ ಜೀವವನ್ನು ಉಳಿಸಬೇಕು. ರಕ್ತದಾನದ ಬಗ್ಗೆ ಜಾಗೃತಿ ಮೂಡಬೇಕು ಎಂದು ಹೇಳಿದರು.
ಕೊಡಗು ಜಿಲ್ಲಾ ರಕ್ತನಿಧಿ ಘಟಕದ ವೈದ್ಯಾಧಿಕಾರಿ ಕರುಂಬಯ್ಯ ಮಾತನಾಡಿ, ರಕ್ತಕ್ಕೆ ಪರ್ಯಾಯ ಯಾವುದು ಇಲ್ಲ. ರಕ್ತದಾನಿಗಳೇ ರಕ್ತವನ್ನು ನೀಡಬೇಕಾಗಿದೆ ಡೆಂಗ್ಯೂ, ಅಪಘಾತ, ಹೆರಿಗೆ ಸೇರಿದಂತೆ ವಿವಿಧ ಸಮಸ್ಯೆಗಳ ನಿವಾರಣೆಗೆ ರಕ್ತದ ಅವಶ್ಯಕ ಇದೆ ಎಂದರು.
ಕೊಡಗು ಜಿಲ್ಲಾ ರಕ್ತನಿಧಿ ಘಟಕದ ವೈದ್ಯಾಧಿಕಾರಿ ಕರುಂಬಯ್ಯ ಮಾತನಾಡಿ, ರಕ್ತಕ್ಕೆ ಪರ್ಯಾಯ ಯಾವುದು ಇಲ್ಲ. ರಕ್ತದಾನಿಗಳೇ ರಕ್ತವನ್ನು ನೀಡಬೇಕಾಗಿದೆ. ಡೆಂಗ್ಯೂ, ಅಪಘಾತ, ಹೆರಿಗೆ ಸೇರಿದಂತೆ ಅನೇಕ ಕಾರಣಗಳಿಗೆ ಜಿಲ್ಲಾಸ್ಪತ್ರೆಗೆ ಹೆಚ್ಚಿನ ರಕ್ತದ ಬೇಡಿಕೆಯಿದೆ. ಜಿಲ್ಲೆಯ ಸಂಘಸಂಸ್ಥೆಗಳು ರಕ್ತದ ಬೇಡಿಕೆಯನ್ನು ಪೂರೈಸುತ್ತಿದ್ದಾರೆ. ಅವರಿಗೆ ರಕ್ತನಿಧಿ ಘಟಕ ಚಿರರುಣಿಯಾಗಿದೆ. ರಕ್ತದ ಕೊರತೆಯಿಂದ ಯಾರು ಜೀವ ಕಳೆದುಕೊಳ್ಳಬಾರದು. ಇನ್ನು ಹೆಚ್ಚಿನ ದಾನಿಗಳು ರಕ್ತದಾನ ಮಾಡಬೇಕು ಎಂದು ಮನವಿ ಮಾಡಿದರು. ರಕ್ತದಾನದ ಬಗ್ಗೆ ಭಯ, ಮೂಡನಂಬಿಕೆ. ಕೀಳರಿಮೆ ಬೇಡ. ರಕ್ತದಾನ ಮಾಡುವುದರಿಂದ ಹೃದಯ ಸಂಬಂಧಿ ಖಾಯಿಲೆಗಳಿಂದ ಬಚವಾಗಬಹುದು. ಜೊತೆಯಲ್ಲಿ ಆರೋಗ್ಯ ವೃದ್ಧಿಸುತ್ತದೆ. ಕೊಟ್ಟ ರಕ್ತ 24 ಗಂಟೆಗಳಲ್ಲಿ ದೇಹದಲ್ಲಿ ಉತ್ಪತ್ತಿಯಾಗುತ್ತದೆ. ಆರೋಗ್ಯವಂತರು 3 ತಿಂಗಳಿಗೊಮ್ಮೆ ಯಾವುದೇ ಆತಂಕವಿಲ್ಲದೆ ರಕ್ತದಾನ ಮಾಡಬಹುದು ಎಂದು ಹೇಳಿದರು.
ಹೆಚ್ಚು ಬಾರಿ ರಕ್ತದಾನ ಮಾಡಿದ ಫೋಟೋ ಗ್ರಾಫರ್ ಸಾಲೋಮನ್ ಡೇವಿಡ್, ವಕೀಲರಾದ ಎನ್.ಆರ್.ರೂಪ ಅವರುಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಜೆಸಿಐ ಅಧ್ಯಕ್ಷ ಎಸ್.ಆರ್.ವಸಂತ್, ಬಿಟಿಸಿಜಿ ಕಾಲೇಜಿನ ಪ್ರಾಂಶುಪಾಲರಾದ ಧನಲಕ್ಷ್ಮೀ, ವಕೀಲರ ಸಂಘದ ಅಧ್ಯಕ್ಷ ಕಾಟ್ಟಮನೆ ವಿಠಲ್ಗೌಡ, ಸಹಾಯಕ ಆಡಳಿತಾಧಿಕಾರಿ ಮೀನಾಕ್ಷಿ, ಸಂಸ್ಥೆಯ ಕಾರ್ಯದರ್ಶಿ ಜಗದಾಂಭ ಇದ್ದರು. 64 ಮಂದಿ ರಕ್ತದಾನ ಮಾಡಿದರು.








