ಮಡಿಕೇರಿ ಜೂ.12 NEWS DESK : ಸೋಮವಾರಪೇಟೆ ಬಸವೇಶ್ವರ ರಸ್ತೆಯ ನಿವಾಸಿಗಳಾದ ಶಾರದ ಮತ್ತು ಎ.ಪಿ.ಶಂಕರಪ್ಪ ಅವರು 3.50 ಲಕ್ಷ ರೂ. ವೆಚ್ಚದಲ್ಲಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಿಕೊಟ್ಟ ಹಿನ್ನೆಲೆಯಲ್ಲಿ, ಶ್ರೀಗಂಧ ಹಾಲ್ನಲ್ಲಿ ನಡೆದ ಲಯನ್ಸ್ ಕಾರ್ಯಕ್ರಮದಲ್ಲಿ ಇಬ್ಬರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಜಿಲ್ಲಾ ಗವರ್ನರ್ ಡಾ. ಮೆಲ್ವಿನ್ ಡಿಸೋಜಾ, ಲಯನ್ಸ್ ಅಧ್ಯಕ್ಷ ಎ.ಎಸ್.ಮಹೇಶ್, ಪದಾಧಿಕಾರಿಗಳಾದ ಕೆ.ಡಿ.ವೀರಪ್ಪ, ರೋಹಿತ್, ಕೆ.ಎಂ. ಜಗದೀಶ್, ಲಿಯೋ ಜಿಲ್ಲಾಧ್ಯಕ್ಷೆ ರಂಜಿತಾ ಶೆಟ್ಟಿ, ಅಧ್ಯಕ್ಷೆ ಪ್ರತೀಕ್ಷ ಇದ್ದರು.









