ಮಡಿಕೇರಿ ಜೂ.14 NEWS DESK : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಜೂ.23 ರಂದು ನಗರದಲ್ಲಿ ಸಾರ್ವಜನಿಕರಿಗಾಗಿ ‘ಪ್ರಕೃತಿ-ಪರಿಸರ’ ವಿಷಯದ ಕುರಿತು ಜಿಲ್ಲಾ ಮಟ್ಟದ ಕವಿಗೋಷ್ಠಿ ಆಯೋಜಿಸಲಾಗಿದೆ ಎಂದು ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಬ್ಬಿರ ಸರಸ್ವತಿ ತಿಳಿಸಿದ್ದಾರೆ..
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10.30 ಗಂಟೆಗೆ ನಗರದ ಭಾರತೀಯ ವಿದ್ಯಾಭವನದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಸಾಹಿತಿ ಕಿಗ್ಗಾಲು ಗಿರೀಶ್ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು.
ಕವಿಗೋಷ್ಠಿಯಲ್ಲಿ ಆಯ್ಕೆಯಾದ ಮೊದಲ ಮೂರು ಅತ್ಯುತ್ತಮ ಕವನಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಮತ್ತು ಭಾಗವಹಿಸಿದ ಎಲ್ಲಾ ಕವಿ, ಕವಯತ್ರಿಗಳಿಗೆ ಪ್ರಶಂಸನಾ ಪತ್ರ ನೀಡಲಾಗುವುದೆಂದು ಎಂದು ಬಬ್ಬಿರ ಸರಸ್ವತಿ ಹೇಳಿದರು.
ಮಕ್ಕಳ ಕವನಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಮೊದಲು ನೋಂದಾಯಿತ 30 ಕವನಗಳಿಗೆ ಕಾರ್ಯಕ್ರಮದಲ್ಲಿ ವಾಚನ ಮಾಡಲು ಅವಕಾಶ ಕಲ್ಪಿಸಲಾಗುವುದು. ಆಸಕ್ತ ಕವಿಗಳು ಜೂ.22ರ ಒಳಗೆ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ನೋಂದಾವಣಿಗಾಗಿ ಮೊ.ಸಂ 9483645664, 9743353597 ಸಂಪರ್ಕಿಸಬಹುದಾಗಿದೆ ಎಂದರು.
ಅಖಿಲ ಭಾರತೀಯ ಸಾಹಿತ್ಯ ಪರಿಷದ್ 1966ರಲ್ಲಿ ಅಸ್ತಿತ್ವಕ್ಕೆ ಬಂದ ಸಂಸ್ಥೆಯಾಗಿದ್ದು, ರಾಜ್ಯವಾರು ಎಲ್ಲಾ ಭಾಷೆಗಳನ್ನು ಒಳಗೊಂಡು ಸಾಹಿತ್ಯ ಪರವಾಗಿ ಕಾರ್ಯನಿರ್ವಹಿಸುತ್ತಿದೆ. ಕೋವಿಡ್ ಸಂದರ್ಭದಲ್ಲೂ ಆನ್ಲೈನ್ ಮೂಲಕ ಸಾಹಿತ್ಯಕ್ಕೆ ಸಂಬಂಧಪಟ್ಟ ಕಾರ್ಯಕ್ರಮಗಳನ್ನು ನಡೆಸುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಸಿ.ಎಸ್.ಸುರೇಶ್, ಜಿಲ್ಲಾ ಸಹಕಾರ್ಯದರ್ಶಿ ಚಂದನ್ ನಂದರಬೆಟ್ಟು, ಮಕ್ಕಳ ಪ್ರಕಾರ ಪ್ರಮುಖ್ ಹೇಮಂತ್ ಪಾರೇರ, ಗೌರವಾಧ್ಯಕ್ಷರಾದ ಕಸ್ತೂರಿ ಗೊವಿಂದಮ್ಮಯ್ಯ ಹಾಗೂ ಮಾಧ್ಯಮ ಪ್ರಮುಖ್ ವಿನೋದ್ ಮೂಡಗದ್ದೆ ಉಪಸ್ಥಿತರಿದ್ದರು. 









