Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಚೆಟ್ಟಳ್ಳಿಯಲ್ಲಿ ಬೆಣ್ಣೆಹಣ್ಣು ಕ್ಷೇತ್ರೋತ್ಸವ : ಅಧಿಕ ಮೌಲ್ಯದ ಹಣ್ಣುಗಳನ್ನು ಬೆಳೆಯಿರಿ : ಡಾ.ಎಸ್.ಕೆ.ಸಿಂಗ್ ಸಲಹೆ*
Uncategorized

*ಚೆಟ್ಟಳ್ಳಿಯಲ್ಲಿ ಬೆಣ್ಣೆಹಣ್ಣು ಕ್ಷೇತ್ರೋತ್ಸವ : ಅಧಿಕ ಮೌಲ್ಯದ ಹಣ್ಣುಗಳನ್ನು ಬೆಳೆಯಿರಿ : ಡಾ.ಎಸ್.ಕೆ.ಸಿಂಗ್ ಸಲಹೆ*

June 16, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜೂ.16 NEWS DESK : ಭಾರತ ಮುಂದಿನ 15 ವರ್ಷಗಳಲ್ಲಿ ಫುಡ್ ಹಬ್ ಆಗಿ ಬದಲಾಗುವ ಎಲ್ಲಾ ಸಾಧ್ಯತೆಗಳಿರುವುದರಿಂದ ಅಧಿಕ ಮೌಲ್ಯವಿರುವ ಹಣ್ಣುಗಳನ್ನು ಬೆಳೆಯಲು ಬೆಳೆಗಾರರು ಮುಂದಾಗಬೇಕು. ಆ ಮೂಲಕ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳಬಹುದು ಎಂದು ನವದೆಹಲಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದ ಮಹಾ ನಿರ್ದೇಶಕ ಡಾ.ಎಸ್.ಕೆ.ಸಿಂಗ್ ತಿಳಿಸಿದ್ದಾರೆ. ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದಲ್ಲಿ ನಡೆದ ಬೆಣ್ಣೆಹಣ್ಣು ಕ್ಷೇತ್ರೋತ್ಸವ ಹಾಗೂ ವೈವಿಧ್ಯತೆ ಮೇಳದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿದೇಶಿ ತೋಟಗಾರಿಕಾ ಬೆಳೆಗಾರರ ಅಭಿವೃದ್ಧಿ ಸಂಘವನ್ನು ಆರಂಭಿಸಲಾಗಿದ್ದು, ಬೆಳೆಗಾರರು ಸಂಘದಲ್ಲಿ ಸೇರ್ಪಡೆಗೊಳ್ಳುವ ಮೂಲಕ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ರೈತರು ನೇರವಾಗಿ ಹಣ್ಣಿನ ಗಿಡಗಳನ್ನು ಖರೀದಿ ಮಾಡಿದರೆ ಹೆಚ್ಚು ವೆಚ್ಚವಾಗುತ್ತದೆ. ಸಂಘದ ಮೂಲಕ ಎಲ್ಲರೂ ಒಗ್ಗೂಡಿ ಖರೀದಿಸಿದಾಗ ವೆಚ್ಚ ಕಡಿಮೆಯಾಗಲಿದೆ. ಅಲ್ಲದೆ ಇದರಿಂದ ಇತರೆ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು. ಕೊಡಗು ಸೇರಿದಂತೆ ರಾಜ್ಯದ ಪ್ರಮುಖ ಆಯ್ದ ಭಾಗದಲ್ಲಿ ಆಫ್ ಸೀಸನ್ ಲಿಚ್ಚಿ, ಬಟರ್ ಫ್ರೂಟ್ ಸೇರಿದಂತೆ ಅಧಿಕ ಮೌಲ್ಯದ ಹಣ್ಣುಗಳನ್ನು ಬೆಳೆಯಬಹುದಾಗಿದೆ. ಹೆಚ್ಚು ಬೇಡಿಕೆ ಇರುವ ಹಣ್ಣುಗಳನ್ನು ಬೆಳೆಯಲು ರೈತರು ಉತ್ಸುಕತೆ ತೋರಬೇಕೆಂದು ಸಲಹೆ ನೀಡಿದರು. ಭಾರತ ಸರ್ಕಾರದ ತೋಟಗಾರಿಕಾ ಸಮಗ್ರ ಅಭಿವೃದ್ಧಿ ಮಿಷನ್ ನ ನಿರ್ದೇಶಕ ಕೆ.ಎನ್.ವರ್ಮ ಮಾತನಾಡಿ ರೈತರಿಗೆ ಉತ್ತಮ ಗುಣಮಟ್ಟದ ಹಣ್ಣಿನ ಗಿಡಗಳನ್ನು ನೀಡುವುದು ಹಾಗೂ ರೈತರ ಆದಾಯವನ್ನು ಹೆಚ್ಚಿಸಲು ಪೂರಕ ಕ್ರಮ ಕೈಗೊಳ್ಳಲಾಗುವುದು. ಎಂಐಡಿಹೆಚ್ ಯೋಜನೆಯಡಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಪ್ರಗತಿಪರ ಕೃಷಿಕ ಬೋಸ್ ಮಂದಣ್ಣ ಮಾತನಾಡಿ ಕೊಡಗು ಪ್ರತ್ಯೇಕ ರಾಜ್ಯವಾಗಿದ್ದಾಗ ಚೆಟ್ಟಳ್ಳಿ ಕೇಂದ್ರವನ್ನು ಆರಂಭಿಲಾಗಿತ್ತು. ಕೊಡಗಿನ ಕಿತ್ತಳೆ ಅಭಿವೃದ್ಧಿ ಪಡಿಸುವ ಉದ್ದೇಶ ಹೊಂದಲಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಕೊಡಗಿನ ಕಿತ್ತಳೆ ಮರೆಯಾಗಿದೆ. ಆದ್ದರಿಂದ ಚೆಟ್ಟಳ್ಳಿ ಕೇಂದ್ರದಿಂದ ಕೊಡಗಿನ ಕಿತ್ತಳೆ ಪುನಶ್ಚೇತನಕ್ಕೆ ಮೂರು ವರ್ಷಗಳ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು. ಇತ್ತೀಚಿನ ದಿನಗಳಲ್ಲಿ ಕೃಷಿಕರಿಗೆ ಮಾರುಕಟ್ಟೆ ಬಹುದೊಡ್ಡ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಚೆಟ್ಟಳ್ಳಿಯಲ್ಲಿ ವಿದೇಶಿ ತೋಟಗಾರಿಕಾ ಬೆಳೆಗಾರರು ಅಭಿವೃದ್ಧಿ ಸಂಘವನ್ನು ಆರಂಭಿಸಿದ್ದು, ಇದರ ಲಾಭವನ್ನು ಬೆಳೆಗಾರರು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಐಸಿಎಆರ್ ಹಣ್ಣಿನ ವಿಭಾಗದ ಯೋಜನಾ ಸಹ ಸಂಯೋಜಕ ಪ್ರಕಾಶ್ ಪಾಟೀಲ್ ಮಾತನಾಡಿ ಕೇಂದ್ರ ಸರ್ಕಾರ ಆತ್ಮ ನಿರ್ಭರ್ ಮೂಲಕ ಸ್ವದೇಶಿ ವಸ್ತುಗಳ ಉತ್ಪಾದನೆ ಉತ್ತೇಜಿಸುತ್ತಿದೆ. ಅದರಂತೆ ನಾವು ಇಲ್ಲಿನ ಹವಾಗುಣಕ್ಕೆ ಹೊಂದಿಕೊಳ್ಳುವ ತೋಟಗಾರಿಕಾ ಹಣ್ಣುಗಳನ್ನು ಬೆಳೆಯಬೇಕು. ಇದಕ್ಕೆ ನಮ್ಮ ಸಹಕಾರ ಇರುತ್ತದೆ ಎಂದು ತಿಳಿಸಿದರು. ಚೆಟ್ಟಳ್ಳಿ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದ ಮುಖ್ಯಸ್ಥ ರಾಜೇಂದಿರನ್ ಮಾತನಾಡಿದರು. ಹಣ್ಣು ವಿಭಾಗದ ವಿಜ್ಞಾನಿ ಡಾ. ಮುರುಳೀಧರ್ ಭಾರತದಲ್ಲಿ ಬೆಣ್ಣೆಹಣ್ಣಿನ ಕೃಷಿ, ನಿರೀಕ್ಷೆಗಳು ಹಾಗೂ ಸಮಸ್ಯೆಗಳ ಬಗ್ಗೆ ವಿಷಯ ಮಂಡಿಸಿದರು. ಕೀಟಶಾಸ್ತ್ರ ವಿಭಾಗದ ವಿಜ್ಞಾನಿ ರಾಣಿ ಬೆಣ್ಣೆಹಣ್ಣಿನಲ್ಲಿ ಪ್ರಮುಖ ಕೀಟ ಮತ್ತು ರೋಗಗಳು ಹಾಗೂ ಅವುಗಳ ನಿರ್ವಹಣೆ ಬಗ್ಗೆ ವಿವರಿಸಿದರು. ಇದೇ ಸಂದರ್ಭ ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕ ಪ್ರಾಯೋಗಿಕ ಕೇಂದ್ರದಿಂದ ಆರಂಭಿಸಲಾಗಿರುವ ವಿದೇಶಿ ತೋಟಗಾರಿಕಾ ಬೆಳೆಗಾರರ ಅಭಿವೃದ್ಧಿ ಸಂಘವನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು.

Share. Facebook Twitter Pinterest LinkedIn Tumblr Email WhatsApp
Previous Article*ಹೊಳೆ ಜಾಗ ಒತ್ತುವರಿ ವಿರುದ್ಧ ಕ್ರಮಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*
Next Article *ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು*

Related Posts

*‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*

February 10, 2026

*ಕರ್ನಾಟಕ ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ*

February 10, 2026

*ಪ್ರಸ್ತುತ ಸಮಾಜದಲ್ಲಿ ಮಕ್ಕಳಿಗೆ ಸಾತ್ವಿಕ ಶಿಕ್ಷಣ ನೀಡುವ ಜವಾಬ್ದಾರಿ ಪೋಷಕರ ಮೇಲಿದೆ : ವಿರಾಜಪೇಟೆ ಡಿವೈಎಸ್ಪಿ ಮಹೇಶ್ ಕುಮಾರ್. ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಸ್ಪೋರ್ಟ್ಸ್ ಸ್ಪೆಕ್ಟ್ರಾ 2026 ರ ಕಾರ್ಯಕ್ರಮದಲ್ಲಿ.*

February 9, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.