
ಮಡಿಕೇರಿ ಜೂ.16 NEWS DESK : ವಿರಾಜಪೇಟೆ ತಾಲ್ಲೂಕು ಸಿದ್ದಾಪುರ ವ್ಯಾಪ್ತಿಯಲ್ಲಿ 2400 ಎಕರೆ ಜಮೀನಿನ ಬಾಬ್ತು ಭೂ ಪರಿವರ್ತನೆಯನ್ನು ಕೋರಿ ಇದುವರೆವಿಗೂ ಯಾವುದೇ ಮನವಿಗಳು ಸ್ವೀಕೃತವಾಗಿರುವುದಿಲ್ಲ ಹಾಗೂ ಸದರಿ ಜಮೀನುಗಳ ಭೂ ಪರಿವರ್ತನೆಯನ್ನು ಮಾಡಿರುವುದಿಲ್ಲ ಎಂಬ ಅಂಶವನ್ನು ಈ ಮೂಲಕ ಸ್ಪಷ್ಟೀಕರಿಸಲಾಗಿದೆ ಎಂದು ವಿರಾಜಪೇಟೆ ತಾಲ್ಲೂಕು ತಹಶೀಲ್ದಾರ್ ತಿಳಿಸಿದ್ದಾರೆ.










