
ಮಡಿಕೇರಿ ಜೂ.20 NEWS DESK : ವಿರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸುವ ಸಭೆಯು ಜೂ.21 ರಂದು ಬೆಳಗ್ಗೆ 11.30 ರಿಂದ 12.30 ಗಂಟೆವರೆಗೆ ವಿರಾಜಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ಮಡಿಕೇರಿ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಹಾಗೆಯೇ ಗೋಣಿಕೊಪ್ಪಲು ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಿಸಲು ಸಭೆಯು ಜೂನ್, 21 ರಂದು ಮಧ್ಯಾಹ್ನ 2.30 ರಿಂದ 3.30 ಗಂಟೆಯವರೆಗೆ ಗೋಣಿಕೊಪ್ಪಲು ಉಪವಿಭಾಗ ಕಚೇರಿ ಆವರಣದಲ್ಲಿ ಮಡಿಕೇರಿ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ವಿರಾಜಪೇಟೆ ಮತ್ತು ಗೋಣಿಕೊಪ್ಪಲು ವ್ಯಾಪ್ತಿಯ ಸಾರ್ವಜನಿಕರು/ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಇಇ ಅನಿತಾಬಾಯಿ ಕೋರಿದ್ದಾರೆ.










