Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
  • *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
  • *ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*
  • *ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *
  • *ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
  • *ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*
  • *ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*
  • *ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದಲಿತ ಸಂಘರ್ಷ ಸಮಿತಿಯಿಂದ ಸಂಧ್ಯಾಕಾಲದ ಬಂಧುಗಳಿಗೆ ಬಟ್ಟೆ ವಿತರಣೆ : ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸಿರುವುದು ಸರಿಯಲ್ಲ : ಡಾ.ಬಿ.ಸಿ.ನವೀನ್ ಕುಮಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ದಲಿತ ಸಂಘರ್ಷ ಸಮಿತಿಯಿಂದ ಸಂಧ್ಯಾಕಾಲದ ಬಂಧುಗಳಿಗೆ ಬಟ್ಟೆ ವಿತರಣೆ : ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸಿರುವುದು ಸರಿಯಲ್ಲ : ಡಾ.ಬಿ.ಸಿ.ನವೀನ್ ಕುಮಾರ್*

ಜೂನ್ 28, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.28 NEWS DESK : ಇಡೀ ಮನುಕುಲದ ಮಹಾನ್ ಶಕ್ತಿಯಾಗಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಇತ್ತೀಚಿನ ಸಾಮಾಜಿಕ ಮತ್ತು ಜಾತಿ ವ್ಯವಸ್ಥೆಯು ಒಂದು ಸಮುದಾಯಕ್ಕೆ ಸೀಮಿತಗೊಳಿಸಿರುವುದು ಸರಿಯಲ್ಲ ಎಂದು ಮಡಿಕೇರಿಯ ಆರ್.ಆರ್.ಆಸ್ಪತ್ರೆಯ ಮಕ್ಕಳ ತಜ್ಞ ಡಾ.ಬಿ.ಸಿ.ನವೀನ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆಯ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಗರಸಭೆಯ ಪೌರಕಾರ್ಮಿಕರಿಗೆ ಸ್ವೆಟರ್ ಹಾಗೂ ಶ್ರೀ ಶಕ್ತಿ ವೃದ್ಧಾಶ್ರಮದ ಸಂಧ್ಯಾಕಾಲದ ಬಂಧುಗಳಿಗೆ ಬಟ್ಟೆ ವಿತರಣೆ ಮಾಡಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ.ಬಿ.ಸಿ.ನವೀನ್ ಕುಮಾರ್, ಡಾ.ಅಂಬೇಡ್ಕರ್ ಅವರು ಶೋಷಿತ ಸಮಾಜದ ಧ್ವನಿಯಾಗಿ, ಆತ್ಮಸಾಕ್ಷಿಯನ್ನು ಜಾಗೃತಗೊಳಿಸುವ ಕೆಲಸವನ್ನು ಶಿಕ್ಷಣದ ಮೂಲಕ ಮಾಡಿದ್ದಾರೆ. ಅವರೊಬ್ಬರು ಪರಿಪೂರ್ಣ ವ್ಯಕ್ತಿತ್ವ ಹೊಂದಿರುವವರು. ಜ್ಞಾನ, ಬದ್ಧತೆ ಮತ್ತು ಸಾಮಾಜಿಕ ಕಳಕಳಿ ಹೊಂದಿರುವ ಅವರು ಕೇವಲ ಒಂದು ಜಾತಿಗೆ ಸೀಮಿತರಾಗಿಲ್ಲ ಎಂದರು. ಅಂಬೇಡ್ಕರ್ ಅವರು ಈ ಸಮಾಜದ ಶೋಷಿತ ವರ್ಗ, ಕಾರ್ಮಿಕರು, ಮಹಿಳೆಯರು, ರೈತರ ಅಭ್ಯುದಯ ಮತ್ತು ದೇಶದ ಅಭಿವೃದ್ಧಿಗಾಗಿ ಸಾಕಷ್ಟು ಕೊಡುಗೆ ನೀಡಿದ್ದಾರೆ. ಜ್ವಲಂತ ಸಮಸ್ಯೆಗಳ ಬಗ್ಗೆ ಆಳವಾಗಿ ಅಧ್ಯಯನ ನಡೆಸಿ ಅದನ್ನು ಪರಿಹಾರ ಮಾಡುವ ಮೂಲಕ ಕೋಟ್ಯಾಂತರ ಜನರಲ್ಲಿ ನೆಲೆನಿಂತಿದ್ದಾರೆ. ಅವರನ್ನು ಜಾತಿ ರಹಿತವಾಗಿ ಕಾಣಬೇಕು. ಮನುಕುಲದ ದೊಡ್ಡ ಶಕ್ತಿಯಾಗಿ ಜನರಲ್ಲಿ ಸ್ವಾಭಿಮಾನದ ಕಿಚ್ಚನ್ನು ಹಚ್ಚಿದ್ದಾರೆ. ಅಂಬೇಡ್ಕರ್ ಅವರನ್ನು ಸಾಂದರ್ಭಿಕವಾಗಿ ಬಳಸಿಕೊಳ್ಳುವ ರಾಜಕೀಯ ಪಕ್ಷಗಳು, ರಾಜಕಾರಣಿಗಳು ಎಷ್ಟರ ಮಟ್ಟಿಗೆ ಅವರ ವಿಚಾರಧಾರೆಗಳನ್ನು ಬಳಸಿಕೊಂಡಿದ್ದಾರೆ ಎಂದು ಪ್ರಶ್ನಿಸಿದರು. ನಾವು ಎಷ್ಟು ವರ್ಷ ಬದುಕಿದ್ದೇವೆ ಎನ್ನುವುದಕ್ಕಿಂತ ಜೀವಿತಾವಧಿಯಲ್ಲಿ ಏನು ಸಾಧನೆ ಮಾಡಿದ್ದೇವೆ ಎನ್ನುವುದು ಮುಖ್ಯವಾಗುತ್ತದೆ. ಆ ನಿಟ್ಟಿನಲ್ಲಿ ತಮ್ಮದೇ ಆದ ಹೆಜ್ಜೆ ಗುರುತು ಮೂಡಿಸಿ ಹೋಗಬೇಕೆಂಬುವುದನ್ನು ಅಂಬೇಡ್ಕರ್ ಅವರು ತೋರಿಸಿಕೊಟ್ಟಿದ್ದಾರೆ ಎಂದ ಡಾ.ನವೀನ್ ಕುಮಾರ್, 152 ದೇಶಗಳಲ್ಲಿ ಅಂಬೇಡ್ಕರ್ ಅವರ ಪ್ರತಿಮೆಯಿದೆ. ಆದರೆ ಕೊಡಗಿನಲ್ಲಿ ಇನ್ನೂ ಪ್ರತಿಮೆ ಸ್ಥಾಪನೆಯಾಗದಿರುವುದು ವಿಷಾದನೀಯ ಎಂದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಮಾತನಾಡಿ, ಡಾ.ಅಂಬೇಡ್ಕರ್ ಅವರು ಸಾಗರ ಇದ್ದಂತೆ, ಅವರ ಸಮ ಸಮಾಜದ ಕಲ್ಪನೆಯ ಕನಸನ್ನು ನನಸು ಮಾಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ತಿಳಿಸಿದರು. ಪ್ರತಿಯೊಂದು ವರ್ಗದವರ ಅಭಿವೃದ್ಧಿಯಲ್ಲೂ ಅಂಬೇಡ್ಕರ್ ಅವರ ಪಾತ್ರವಿದೆೆ. ಸಮಾಜದಲ್ಲಿ ಎಲ್ಲರಿಗೂ ಎಲ್ಲಾ ಕ್ಷೇತ್ರಗಳಲ್ಲಿ ಸಮಾನ ಅವಕಾಶ ಸಿಗಲು ಕಾರಣಕರ್ತರಾಗಿರುವ ಅವರ ಚಿಂತನೆಗಳು ಸದಾ ಜೀವಂತವಾಗಿರಲಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್, ಪೌರ ಕಾರ್ಮಿಕರು ಕಡಿಮೆ ವೇತನಕ್ಕೆ ದುಡಿಯುತ್ತಿದ್ದಾರೆ, ಆದರೆ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಿದ್ದಾರೆ. ಗಾಳಿಮಳೆಯನ್ನು ಲೆಕ್ಕಿಸದೆ ಮುಂಜಾನೆಯೇ ಎದ್ದು ನಗರವನ್ನು ಸ್ವಚ್ಛಗೊಳಿಸುವ ಕಾರ್ಮಿಕರ ಕಾರ್ಯ ಶ್ಲಾಘನೀಯ ಎಂದು ತಿಳಿಸಿದರು. ದಲಿತ ಸಂಘರ್ಷ ಸಮಿತಿ ಇತ್ತೀಚೆಗೆ ನಗರದಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿತ್ತು. ಮುಂದಿನ ದಿನಗಳಲ್ಲೂ ಈ ರೀತಿಯ ಕಾರ್ಯಕ್ರಮವನ್ನು ನಿರಂತರಗೊಳಿಸಲಾಗುವುದು, ಆ ಮೂಲಕ ಪ್ರತಿಯೊಬ್ಬರು ಶುಚಿತ್ವಕ್ಕೆ ಆದ್ಯತೆ ನೀಡುವಂತೆ ಜಾಗೃತಿ ಮೂಡಿಸಲಾಗುವುದು. ಪೌರ ಕಾರ್ಮಿಕರ ಸೇವೆಯನ್ನು ಎಲ್ಲರೂ ಪರಿಗಣಿಸಬೇಕು ಮತ್ತು ಗೌರವಿಸಬೇಕು ಎಂದರು. ಸಮಿತಿಯ ಕೊಡಗು-ಮೈಸೂರು ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ ಮಾತನಾಡಿ, ಸಂಘಟನೆ ವತಿಯಿಂದ ಸಾಮಾಜಿಕ ಕಳಕಳಿಯ ಹಲವು ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಸಾಧಕ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಸನ್ಮಾನ ಮಾಡುವ ಮೂಲಕ ಶಿಕ್ಷಣಕ್ಕೆ ಒತ್ತು ನೀಡಿ ಪ್ರೋತ್ಸಾಹಿಸಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಸಮಾಜ ಸೇವಕ ಪ್ರದೀಪ್ ಕರ್ಕೆರ, ನಗರಸಭೆಯ ಹಿರಿಯ ಪೌರಕಾರ್ಮಿಕ ರಾಮು, ವಿಕಾಸ್ ಜನಸೇವಾ ಟ್ರಸ್ಟ್ ಸದಸ್ಯೆ ಪೂವಮ್ಮ ಉಪಸ್ಥಿತರಿದ್ದರು. ಸಮಿತಿ ಸದಸ್ಯ ವೇಣುಕಿಶೋರ್ ಸ್ವಾಗತಿಸಿ, ಪ್ರೇಮ ಕೃಷ್ಣಪ್ಪ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*

ಆಗಷ್ಟ್ 23, 2026

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಆ. 22: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಕೊಡಗು ಜಿಲ್ಲಾ ಸಂಸ್ಥೆ ಹಾಗೂ ಕುಶಾಲನಗರ ಸ್ಥಳೀಯ…

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*

ಆಗಷ್ಟ್ 22, 2026

*ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *

ಆಗಷ್ಟ್ 22, 2026

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 2026

*ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*

ಆಗಷ್ಟ್ 22, 2026

*ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*

ಆಗಷ್ಟ್ 22, 2026

*ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*

ಆಗಷ್ಟ್ 22, 2026

*ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.