Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*
  • *ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*
  • *ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*
  • ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 
  • *ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*
  • *ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*
  • *ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*
  • *ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*
  • *ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*
  • *ಗೋಣಿಕೊಪ್ಪ : ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ರಾಮನವಮಿ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಅಬಾಕಸ್ ತರಬೇತಿ ಆರಂಭ : ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಪ್ರೋತ್ಸಾಹ ಅಗತ್ಯ : ಟಿ.ಆರ್.ಶರವಣಕುಮಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಅಬಾಕಸ್ ತರಬೇತಿ ಆರಂಭ : ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಪ್ರೋತ್ಸಾಹ ಅಗತ್ಯ : ಟಿ.ಆರ್.ಶರವಣಕುಮಾರ್*

ಜುಲೈ 4, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಜು.4 NEWS DESK : ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು (ಕೂಡ್ಲೂರು) ಪ್ರೌಢಶಾಲೆಯಲ್ಲಿ ಶಾಲೆಯ ರಾಮಾನುಜನ್ ಗಣಿತ ಸಂಘದ ಆಶ್ರಯದಲ್ಲಿ ಕುಶಾಲನಗರ ಬ್ರೈನ್ ಅಕಾಡೆಮಿ ವತಿಯಿಂದ ಮಕ್ಕಳಿಗೆ ಆರಂಭಿಸಲಾದ ಅಬಾಕಸ್ ಕಲಿಕಾ ತರಬೇತಿಗೆ ಕುಶಾಲನಗರ
ಕೈಗಾರಿಕೋದ್ಯಮಿಗಳ ಮತ್ತು ವೃತ್ತಿನಿರತರ ಸಹಕಾರ ಸಂಘದ ಅಧ್ಯಕ್ಷ ಟಿ.ಆರ್.ಶರವಣಕುಮಾರ್ ಚಾಲನೆ ನೀಡಿದರು.
ಅಬಾಕಸ್ ತರಬೇತಿ ಪಡೆಯಲಿರುವ ಶಾಲೆಯ 100 ಮಕ್ಕಳಿಗೆ ಕುಶಾಲನಗರ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿನಿರತರ ಸಹಕಾರ ಸಂಘದ ವತಿಯಿಂದ ಸಾಧನಾ ಸಲಕರಣೆ ಮತ್ತು ಅಭ್ಯಾಸ ಮಾರ್ಗದರ್ಶಿ ಪುಸ್ತಕಗಳನ್ನು ವಿತರಿಸಲಾಯಿತು.
ವಿದ್ಯಾರ್ಥಿಗಳಿಗೆ ಅಬಾಕಸ್ ಕಲಿಕೆಯ ಸಾಧನ ಸಲಕರಣೆ ವಿತರಿಸಿ ಮಾತನಾಡಿದ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿನಿರತರ ಸಹಕಾರ ಸಂಘದ
ಅಧ್ಯಕ್ಷ ಟಿ.ಆರ್.ಶರವಣಕುಮಾರ್, ಬುದ್ಧಿಮತ್ತೆಯ ಅಬಾಕಸ್ ಕಲಿಕೆಯು ಮಕ್ಕಳಲ್ಲಿ ಏಕಾಗ್ರತೆ, ಕ್ರಿಯಾಶೀಲತೆಯೊಂದಿಗೆ ಸೃಜನಶೀಲತೆ ಬೆಳೆಸುವ ಮೂಲಕ ಅವರ ಬುದ್ಧಿಶಕ್ತಿಯನ್ನು ಉದ್ದೀಪನಗೊಳಿಸಲು ತುಂಬಾ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಅಬಾಕಸ್ ಕಲಿಕೆಯ ತರಬೇತಿಯನ್ನು ಸದುಪಯೋಗಪಡಿಸಿಕೊಂಡು ತಮ್ಮ ಜ್ಞಾನಾಭಿವೃದ್ಧಿ ವೃದ್ಧಿಸಿಕೊಳ್ಳಬೇಕು ಎಂದರು.
ತಮ್ಮ ಸಹಕಾರ ಸಂಘದ ವತಿಯಿಂದ ಹಸಿರು ಯೋಜನೆಯಡಿ ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಲಿನ ಶಾಲಾ- ಕಾಲೇಜುಗಳಲ್ಲಿ 700 ಅರಣ್ಯ ಸಸಿಗಳನ್ನು ನೆಟ್ಟು ಬೆಳೆಸಲಾಗುತ್ತಿದೆ. ಹಾಗೆಯೇ, ಮುಂದಿನ ದಿನಗಳಲ್ಲಿ ಕೂಡ ಈ ಶಾಲೆ ಸೇರಿದಂತೆ ವಿವಿಧ ಶಾಲಾ ಕಾಲೇಜುಗಳಲ್ಲಿ ಕಂಪ್ಯೂಟರ್ ಶಿಕ್ಷಣಕ್ಕೆ ಸುಸಜ್ಜಿತ ಕಂಪ್ಯೂಟರ್ ಪ್ರಯೋಗಾಲಯವನ್ನು ಆರಂಭಿಸುವ ಯೋಜನೆ ರೂಪಿಸಲಾಗಿದೆ ಎಂದು ಶರವಣಕುಮಾರ್ ತಿಳಿಸಿದರು.
ಪ್ರತಿಯೊಬ್ಬರೂ ಸರ್ಕಾರಿ ಶಾಲೆಗಳ ಪ್ರಗತಿಯೊಂದಿಗೆ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಈ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಶೈಕ್ಷಣಿಕ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರ ಪರಿಶ್ರಮದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಗಳಿಸಿರುವುದಕ್ಕೆ ಸಹಕಾರ ಸಂಘದ ವತಿಯಿಂದ ಅಭಿನಂದಿಸಲಾಗುವುದು. ಬರುವ ಶೈಕ್ಷಣಿಕ ವರ್ಷದಲ್ಲೂ ಕೂಡ ಈ ಶಾಲೆಗೆ ಶೇ.100 ಫಲಿತಾಂಶ ಗಳಿಸಲು ಪರಿಶ್ರಮ ಹಾಕಬೇಕು ಎಂದು ಮನವಿ ಮಾಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಗ್ರಾಮಾಂತರ ಶಾಲೆಯ ಮಕ್ಕಳಿಗೆ ಅಬಾಕಸ್ ಕಲಿಕಾ ತರಬೇತಿಗೆ
ಪೂರಕವಾಗಿ ಕೈಗಾರಿಕೋದ್ಯಮಿಗಳ ಸಹಕಾರ ಸಂಘದ ವತಿಯಿಂದ ಮಕ್ಕಳಿಗೆ ಸಾಧನಾ  ಸಲಕರಣೆಗಳನ್ನು ನೀಡುವ ಮೂಲಕ ನಮ್ಮ ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು.
ಈ ಸಹಕಾರ ಸಂಘದ ವತಿಯಿಂದ ತಮ್ಮ ಶಾಲೆ ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ವಿವಿಧ ಸಾಮಾಜಿಕ ಸೇವಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದು ಶ್ಲಾಘನೀಯವಾದುದು ಎಂದರು.
ಅಬಾಕಸ್ ಕಲಿಕಾ ತರಬೇತಿಯ ಮಹತ್ವ ಕುರಿತು ಮಾತನಾಡಿದ ಕುಶಾಲನಗರ ಸ್ಮಾರ್ಟ್ ಬ್ರೈನ್ ಅಬಾಕಸ್ ಅಕಾಡೆಮಿಯ ಮುಖ್ಯಸ್ಥ ಕುಸುಮ ಆರ್.ರಾಜ್, ಇದು ಮಿದುಳಿನ ಅಭಿವೃದ್ಧಿ, ತಾರ್ಕಿಕ ಚಿಂತನೆ ಮತ್ತು ಸಂಖ್ಯಾತ್ಮಕ ಸಂಸ್ಕರಣಾ ಸಾಮರ್ಥ್ಯಗಳನ್ನು ಬಲಪಡಿಸುತ್ತದೆ. ಇದರ ಜತೆಗೆ
ಅವರಲ್ಲಿ ವಿವಿಧ ಕಲಿಕೆಯ ಅರಿವಿನ ಸಾಮರ್ಥ್ಯಗಳನ್ನು ಉತ್ತೇಜಿಸುತ್ತದೆ ಎಂದರು.
ಈ ಶಾಲೆಯಲ್ಲಿ ಮಕ್ಕಳ ಅಬಾಕಸ್ ಕಲಿಕಾ ತರಬೇತಿಗೆ ಕೈಗಾರಿಕೋದ್ಯಮಿಗಳ ಸಂಘವು ನೀಡುತ್ತಿರುವ ಪ್ರೋತ್ಸಾಹ ಶ್ಲಾಘನೀಯವಾದುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ.ಸಿ ಅಧ್ಯಕ್ಷ ಎ.ಎಂ.ಜವರಯ್ಯ ಮಾತನಾಡಿ, ವಿದ್ಯಾರ್ಥಿಗಳು ಅಬಾಕಸ್ ತರಬೇತಿಯ ಸದುಪಯೋಗಪಡಿಸಿಕೊಂಡು ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದರು.
ಸಂಘದ ನಿರ್ದೇಶಕರಾದ ಎಂ.ವಿ.ನಾರಾಯಣ, ಕವಿತ ಮೋಹನ್ ಮಾತನಾಡಿ, ವಿದ್ಯಾರ್ಥಿಗಳು ಅಬಾಕಸ್ ಕಲಿಕಾ ತರಬೇತಿಯ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಸಂಘದ ನಿರ್ದೇಶಕರಾದ ಎಂ.ಎಂ.ಶಾಹಿರ್, ವಿ.ಸಿ.ಅಮೃತ್, ಕೆ.ಪಿ.ಶರತ್, ಕೆ.ಎನ್.ಸುರೇಶ್, ಕೃತಿಕ ಪೊನ್ನಪ್ಪ, ಕೀರ್ತಿ ಲಕ್ಷ್ಮಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಡಿ. ಶ್ರೀಜಿತ್, ವ್ಯವಸ್ಥಾಪಕ ಆರ್. ರಾಜು,ಸಿಬ್ಬಂದಿ ಎಂ.ಜಿ.ಬೊಳ್ಳಮ್ಮ, ದಾನಿ ಸೈಜನ್ ಪೀಟರ್, ಇತರರು ಇದ್ದರು.
ಅಬಾಕಸ್ ಕಲಿಕಾ ಅಭ್ಯಾಸದ ಸಂಪನ್ಮೂಲ ಶಿಕ್ಷಕಿ ಕಲ್ಪನ, ಕೆ.ಟಿ.ಲಾವಣ್ಯ ಇದ್ದರು.
ಅಬಾಕಸ್ ಲೆಕ್ಕ ಪ್ರದರ್ಶನದಲ್ಲಿ ತರಬೇತಿನಿರತ ವಿದ್ಯಾರ್ಥಿಗಳಾದ ಲಿಖಿತ, ಸೋನು ಮತ್ತು ಆಕಾಂಕ್ಷ ಅಬಾಕಸ್ ಕಲಿಕೆಯ ಕುರಿತು ಬಾಯ್ದೆರೆ ಲೆಕ್ಕ/ ಸಮಸ್ಯೆಗಳನ್ನು ಬಿಡಿಸಿ ಮೆಚ್ಚುಗೆ ಪಡೆದರು.
ಅಬಾಕಸ್ ತರಬೇತಿಯ ಮಹತ್ವ ಕುರಿತು ಶಾಲಾ ಗಣಿತ ಶಿಕ್ಷಕಿ ಬಿ.ಎನ್.ಸುಜಾತ ಮಾಹಿತಿ ನೀಡಿದರು. ಶಿಕ್ಷಕ ಎಂ.ಟಿ.ದಯಾನಂದ ಪ್ರಕಾಶ್ ವಂದಿಸಿದರು. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*

ಮಾರ್ಚ್ 27, 2026

*ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 27, 2026

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

*ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಮಾ.27 NEWS DESK : ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ನಾಗರಿಕರಲ್ಲಿ ಭಯಮುಕ್ತ ವಾತಾವರಣ ಮೂಡಿಸುವ ಸಲುವಾಗಿ  ನಾಪೋಕ್ಲು…

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 

ಮಾರ್ಚ್ 27, 2026

*ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*

ಮಾರ್ಚ್ 27, 2026

*ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*

ಮಾರ್ಚ್ 27, 2026

*ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*

ಮಾರ್ಚ್ 27, 2026

*ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*

ಮಾರ್ಚ್ 27, 2026

*ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*

ಮಾರ್ಚ್ 27, 2026

*ಗೋಣಿಕೊಪ್ಪ : ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ರಾಮನವಮಿ ಆಚರಣೆ*

ಮಾರ್ಚ್ 27, 2026

*ಕಣಿವೆ ಶ್ರೀ ರಾಮಲಿಂಗೇಶ್ವರನ ವೈಭವದ ಬ್ರಹ್ಮ ರಥೋತ್ಸವ*

ಮಾರ್ಚ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.