Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಅಜೀರ್ಣ ನಿವಾರಣೆಗೆ ಆಹಾರೌಷಧಿಗಳು*
ರೋಗ ಮುಕ್ತ

*ಅಜೀರ್ಣ ನಿವಾರಣೆಗೆ ಆಹಾರೌಷಧಿಗಳು*

July 12, 20242 Mins Read
Share
Facebook Twitter LinkedIn Pinterest WhatsApp Email

(NEWS DESK) ಅಜೀರ್ಣ ಸಾಮಾನ್ಯವಾಗಿ ಎಲ್ಲರಲ್ಲಿಯೂ ಕಂಡು ಬರುವ ತೊಂದರೆಯಾಗಿದೆ. ಎಲ್ಲರನ್ನೂ ಒಂದಲ್ಲ ಒಂದು ದಿನ ಈ ತೊಂದರೆ ಕಾಡಿಸಿಯೇ ಕಾಡಿಸಿರುತ್ತದೆ. ಪ್ರಾರಂಭದಲ್ಲಿ ಇದು ಅತ್ಯಂತ ಸರಳವಾಗಿ ಕಾಣಿಸಿದರೂ, ಸತತ ಕಾಡುವ ಅಜೀರ್ಣ, ಹೊಟ್ಟಯುಬ್ಬರ, ಹೈಪರ್ ಎಸಿಡಿಟಿ, ಮಲಬದ್ಧತೆ, ಗ್ಯಾಸ್ ಟ್ರಬಲ್ ಮುಂತಾದ ತೊಂದರೆಗಳಿಗೆ ನಾಂದಿಯಾಗಬಹುದು.

ಪ್ರತಿನಿತ್ಯ ಒಂದು ಅಥವಾ ಎರಡು ಬಾರಿ ಖಾಲಿ ಹೊಟ್ಟ್ಟೆಯಲ್ಲಿ ತಂಪು ಪಟ್ಟಿಯನ್ನು 20 ನಿಮಿಷಗಳಕಾಲ ಹಾಕಿಕೊಳ್ಳಬೇಕು. (ತಣ್ಣಿರಿನಲ್ಲಿ ನೆನೆಸಿದ ಬಟ್ಟೆಯನ್ನು ಎರಡು ಮೂರು ಸುತ್ತ ಹೊಟ್ಟ್ಟೆಗೆ ಕಟ್ಟಿ ಹೊರಗಿನಿಂದ ಒಣ ಉಲ್ಲನ್ ಬಟ್ಟೆಯನ್ನು ಸುತ್ತಬೇಕು.)

ಆಯಸ್ಕಾಂತದ ಮೇಲೆ ಗಾಜಿನ ಬಾಟ್ಲಿಯಲ್ಲಿ ನೀರನ್ನು ಇಟ್ಟು ಉತ್ತರ ಹಾಗೂ ದಕ್ಷಿಣ ಧ್ರ್ರುವಗಳಲ್ಲಿ ಬೇರೆ ಬೇರೆಯಾಗಿ ಛಾರ್ಜ ಆದ ನೀರನ್ನು ಸಮ ಪ್ರಮಾಣದಲ್ಲಿ ಸೇರಿಸಿ ಪ್ರತಿನಿತ್ಯ ಮೂರು ಬಾರಿ ಒಂದೊಂದು ಗ್ಲಾಸ್‍ನಂತೆ ಸೇವಿಸಬೇಕು. (ಪ್ರಕೃತಿ ಚಿಕಿತ್ಸಕರ ಸಲಹೆ ಪಡೆದು ಈ ಚಿಕಿತ್ಸೆ ತೆಗೆದುಕೊಳ್ಳುವುದು ಉತ್ತಮ)

ಮುಂಜಾನೆ ಎದ್ದ ಕೂಡಲೇ ಮೂರರಿಂದ ನಾಲ್ಕು ಲೋಟ ಶುದ್ಧವಾದ ನೀರನ್ನು ಸೇವಿಸುವುದರಿಂದ ಅಜೀರ್ಣ ನಿವಾರಣೆಯಾಗುತ್ತದೆ.

ವಾರದಲ್ಲಿ ಒಂದು ಬಾರಿ ಮುಂಜಾನೆ 8-10 ಲೋಟ ಉಗುರು ಬೆಚ್ಚಗಿನ ನೀರಿಗೆ ಸ್ವಲ್ಪ ಉಪ್ಪು ಹಾಕಿ ಗಟಗಟನೆ ಕುಡಿದು ಬೆರಳನ್ನು ಗಂಟಲಿಗೆ ಹಾಕಿ ಸಪ್ರಯತ್ಮದಿಂದ ವಾಂತಿ ಮಾಡಬೇಕು. ಇದರಿಂದ ಶೇಖರಣೆಗೊಂಡ ಹೆಚ್ಚಿನ ಆಮ್ಲ ಹೊರ ಹೋಗಿ ಜೀರ್ಣಕೋಶದ ಆರೋಗ್ಯ ವರ್ಧಿಸುತ್ತದೆ. ಇದನ್ನು ಯೋಗಶಾಸ್ತ್ರದಲ್ಲಿ ವಮನ ಧೌತಿ ಎನ್ನುತ್ತಾರೆ. ಏರು ರಕ್ತದೊತ್ತಡ ಇರುವವರು ಉಪ್ಪನ್ನು ಹಾಕದೇ ನೀರನ್ನು ಉಪಯೋಗಿಸಬೇಕು. ಮೊದಲಬಾರಿ ಅಭ್ಯಾಸ ಮಾಡುವಾಗ ಪ್ರಕೃತಿ ಚಿಕಿತ್ಸಾ ವೈದ್ಯರ ಮಾರ್ಗದರ್ಶನದಲ್ಲಿ ಮಾಡುವದು ಒಳಿತು.

ದಿನದಲ್ಲಿ ಮೂರು ಬಾರಿ ಮಾತ್ರ ಆಹಾರ ಸೇವಿಸುವ ಅಭ್ಯಾಸವನ್ನು ಇಟ್ಟುಕೊಳ್ಳಬೇಕು. ಹೆಚ್ಚು ಬಾರಿ ಹೆಚ್ಚೆಚ್ಚು ತಿಂದಷ್ಟು ಅಜೀರ್ಣ ಹೆಚ್ಚುತ್ತಾ ಹೋಗುತ್ತದೆ.

ವಾರದಲ್ಲಿ ಒಂದು ದಿನ ಕೇವಲ ಹಣ್ಣುಗಳು ಮತ್ತು ಹಣ್ಣಿನ ರಸವನ್ನು ಮಾತ್ರ ಸೇವಿಸಬೇಕು. ಆಹಾರದಲ್ಲಿ ಕರಿದ ತಿಂಡಿಗಳು ಮತ್ತು ಬೇಕರಿ ತಿನಿಸುಗಳನ್ನು ಸಾಧ್ಯವಾದಷ್ಟು ಕಡಿಮೆ ಮಾಡಬೇಕು. ಆಹಾರ ಸೇವಿಸುವಾಗ ಹೊಟ್ಟೆಯ ಅರ್ಧಭಾಗವನ್ನು ಘನ ಆಹಾರದಿಂದ, ಕಾಲುಭಾಗವನ್ನು ದ್ರವ ಆಹಾರದಿಂದ ತುಂಬಿಸಿ ಇನ್ನುಳಿದ ಕಾಲು ಭಾಗವನ್ನು ಖಾಲಿ ಬಿಡಬೇಕು.

ಊಟದ ಮಧ್ಯೆ ನೀರನ್ನು ಕುಡಿಯಬಾರದು. ಒಂದು ಲೋಟ ಮಜ್ಜಿಗೆ ತೆಗೆದುಕೊಳ್ಳಬಹುದು. ಊಟಕ್ಕೆ ಅರ್ಧಗಂಟೆ ಮೊದಲು ಹಾಗೂ ಒಂದು ಗಂಟೆಯ ನಂತರ ನೀರನ್ನು ಯಥೇಚ್ಛವಾಗಿ ಕುಡಿಯಬಹುದು. ಸೇವಿಸಿದ ಆಹಾರ ಪೂರ್ತಿಯಾಗಿ ಜೀರ್ಣವಾಗಲು ದೈಹಿಕ ಶ್ರಮ ಅತ್ಯಗತ್ಯ. ಪ್ರತಿದಿನ ಕನಿಷ್ಠ ಒಂದು ಗಂಟೆಯ ಯೋಗಾಭ್ಯಾಸ ರೂಢಿಸಿಕೊಳ್ಳಿ.

:: ಆಹಾರೌಷಧಿಗಳು :: 
ಪುದಿನಾ ಸೊಪ್ಪಿನಲ್ಲಿ ಚಹಾ ತಯಾರಿಸಿ ಸೇವಿಸಿದರೆ ಜೀರ್ಣಶಕ್ತಿ ಹೆಚ್ಚುತ್ತದೆ.
ಊಟದ ನಂತರ ಏಲಕ್ಕಿ ಕಾಳುಗಳನ್ನಾಗಲಿ ಇಲ್ಲವೇ ಓಮಕಾಳುಗಳನ್ನಾಗಲೀ ಸೇವಿಸುವುದರಿಂದ ಜೀರ್ಣಶಕ್ತಿ ಹೆಚ್ಚುತ್ತದೆ.
ಅಜೀರ್ಣದ ತೊಂದರೆಯಿಂದ ಬಳಲುತ್ತಿರುವವರು ನೆಲ್ಲಿಕಾಯಿ ರಸಕ್ಕೆ ಬೆಲ್ಲ ಬೆರೆಸಿ ಕುಡಿಯುವುದರಿಂದ ಸಮಸ್ಯೆ ಪರಿಹಾರವಾಗುತ್ತದೆ.
ದ್ರಾಕ್ಷಿ, ಸೇಬು, ಕಿತ್ತಳೆ, ಮಾಗಿದ ಬಾಳೆಹಣ್ಣು ಸೇವಿಸುವುದರಿಂದ ಜೀರ್ಣಶಕ್ತಿ ವೃದ್ಧಿಸುತ್ತದೆ.
ಪ್ರತಿದಿನ ಮುಂಜಾನೆ ಒಂದು ಲೋಟ ತಣ್ಣಿರಿಗೆ ಒಂದು ಚಮಚ ಜೇನು ಬೆರೆಸಿ ಸೇವಿಸುತ್ತ ಬಂದರೆ ಜೀರ್ಣಶಕ್ತಿ ವೃದ್ಧಿಸುತ್ತದೆ.
ಮೂಲಂಗಿಯನ್ನು ಚೆನ್ನಾಗಿ ತೊಳೆದು, ತುರಿದು ಅದಕ್ಕೆ ಮೊಸರು ಬೆರೆಸಿ ಸೇವಿಸುವುದರಿಂದ ಆಹಾರ ಚೆನ್ನಾಗಿ ಜೀರ್ಣವಾಗುತ್ತದೆ.
ಹಸಿ ಸೌತೆಕಾಯಿಯನ್ನು ಸಣ್ಣಗೆ ಕತ್ತರಿಸಿ ಕೋಸಂಬರಿಯ ಹಾಗೆ ಮಾಡಿ ಅದಕ್ಕೆ ಕಾಳು ಮೆಣಸಿನ ಪುಡಿ, ಕೊತ್ತಂಬರಿ ಸೊಪ್ಪು, ಕರಿಬೇವಿನ ಸೊಪ್ಪು ಹಾಕಿ ಇಂಗನ್ನು ನೀರಿನಲ್ಲಿ ನೆನೆಸಿ ಒಂದೆರಡು ಹನಿ ಬೆರೆಸಿ ಸೇವಿಸಿದರೆ ಜೀರ್ಣಶಕ್ತಿ ವರ್ಧಿಸುವುದು.
ಪ್ರತಿನಿತ್ಯ ಒಂದು ಹಿಡಿ ತುಳಸಿ ಎಲೆ ರಸವನ್ನು ಸೇವಿಸಿದರೆ ಒಳ್ಳೆಯದು.
1 ಚಮಚ ಕೊತ್ತಂಬರಿ ಬೀಜ, ಸ್ವಲ್ಪ ಶುಂಠಿಯನ್ನು ನೀರಿನಲ್ಲಿ ಕುದಿಸಿ, ಜೇನುತುಪ್ಪ ಬೆರೆಸಿ ಸೇವಿಸಿದರೆ ಅಜೀರ್ಣದಿಂದ ಉಂಟಾದ ಹೊಟ್ಟೆನೋವು ಪರಿಹಾರವಾಗುತ್ತದೆ.
ಮೆಂತ್ಯವನ್ನು ತುಪ್ಪದಲ್ಲಿ ಹುರಿದು ಅದಕ್ಕೆ ಉಪ್ಪು ಬೆರೆಸಿ ಕುಟ್ಟಿ ಪುಡಿಮಾಡಿ ಊಟದಲ್ಲಿ ಅನ್ನಕ್ಕೆ ಈ ಪುಡಿ ಸೇರಿಸಿ ಸೇವಿಸುವುದರಿಂದ ಅಜೀರ್ಣ ನಿವಾರಣೆಯಾಗುತ್ತದೆ.

ಕೃಪೆ : ವಿಕಾಸ್ ಪೀಡಿಯ

ಮೂಲ: ಡಾ|| ವೆಂಕಟ್ರಮಣ ಹೆಗಡೆ

Share. Facebook Twitter Pinterest LinkedIn Tumblr Email WhatsApp
Previous Article*ಪಂಚರಾಮ ಕ್ಷೇತ್ರಗಳಲ್ಲಿ ಒಂದಾದ ದ್ರಾಕ್ಷರಾಮ ದೇವಾಲಯ*
Next Article *ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ*

Related Posts

*ವಿಟಮಿನ್ ಬಿ12 : ಆರೋಗ್ಯಕ್ಕೆ ಮುಖ್ಯವಾದ ಪೋಷಕಾಂಶ : ಡಾ.ಕೆ.ಬಿ.ಸೂರ್ಯಕುಮಾರ್*

January 2, 2026

*ವಿಟಮಿನ್ ಡಿ3 : ಆರೋಗ್ಯಕ್ಕೆ ಅಗತ್ಯವಾದ ಸೂರ್ಯ ರಶ್ಮಿ ವಿಟಮಿನ್ : ಡಾ.ಬಿ.ಸೂರ್ಯ ಕುಮಾರ್*

December 11, 2025

*ಚಳಿಗಾಲದಲ್ಲಿ ದೇಹದ ತೂಕ ಇಳಿಸುವ ಸಿಂಪಲ್ ಟಿಪ್ಸ್*

December 9, 2025

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.