ವಿರಾಜಪೇಟೆ ಜು.19 NEWS DESK : ಪೊನ್ನಂಪೇಟೆಯ ಅರಣ್ಯ ಕಾಲೇಜಿನ ವಿದ್ಯಾರ್ಥಿಗಳು ಪಿರಿಯಾಪಟ್ಟಣ ತಾಲ್ಲೂಕು ರಾವಂದೂರುವಿನ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ವಿವಿಧ ತರಬೇತಿ ಪಡೆದರು.
ಹದಿನೈದು ದಿವಸಗಳ ಕಾಲ ಜರುಗಿದ ತರಬೇತಿ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು ಶಿವು ಸೈನಿಕ ಅಕಾಡೆಮಿ ಗೆ ಭೇಟಿ ನೀಡಿ, ಸೈನ್ಯಕ್ಕೆ ಸೇರಲು ಬೇಕಾದ ಮಾಹಿತಿಯನ್ನು ಪಡೆದುಕೊಂಡರು.
ಅಕಾಡೆಮಿ ಅಧ್ಯಕ್ಷರು ಹಾಗೂ ಮಾಜಿ ಸೈನಿಕರಾದ ಶಿವು ವಿದ್ಯಾರ್ಥಿಗಳಿಗೆ ಸೈನ್ಯಕ್ಕೆ ಸೇರಲು ಹಾಗೂ ವ್ಯಾಯಾಮ, ದೈಹಿಕ ಕಸರತ್ತು ಗಳ ಬಗ್ಗೆ ಮಾರ್ಗದರ್ಶನ ನೀಡಿದರು. ಅಲ್ಲದೇ ಪರಿಶ್ರಮ, ದೈಹಿಕ ಚಟುವಟಿಕೆ, ಮಾನಸಿಕ ಸದೃಢತೆ ಹೊಂದಲು ಬೇಕಾದ ಅಂಶಗಳನ್ನು ಉದಾಹರಣೆ ಸಮೇತ ವಿವರಿಸಿದರು. ಮಾತ್ರವಲ್ಲದೆ ಸಮಾಜದಲ್ಲಿ ಉತ್ತಮ ನಾಯಕರಾಗಿ ಹೊರಹೊಮ್ಮಿ ಎಂದು ಕಿವಿಮಾತು ಹೇಳಿದರು.
ಈ ಸಂದರ್ಭ ಪ್ರಾಧ್ಯಾಪಕರಾದ ಗಣೇಶ್ ಪ್ರಸಾದ್, ಶಿವು ಸೈನಿಕ ಅಕಾಡೆಮಿಯ ಕಾರ್ಯದರ್ಶಿ ಸ್ವಾಮಿ, ವಿದ್ಯಾರ್ಥಿ ನಾಯಕರಾದ ಪ್ರಶಾಂತ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.










