Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಲಯನ್ಸ್ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ಲಯನ್ಸ್ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ*

ಜುಲೈ 19, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಜು.19 NEWS DESK  : ಮಡಿಕೇರಿ ಲಯನ್ಸ್ ಸಂಸ್ಥೆಯ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಗರದ ಲಯನ್ಸ್ ಸಭಾಂಗಣದಲ್ಲಿ ನಡೆಯಿತು.
ನೂತನ ಅಧ್ಯಕ್ಷರಾಗಿ ನಟರಾಜು ಕೆಸ್ತೂರು ಎಂಜೆಎಫ್, ಕಾರ್ಯದರ್ಶಿ ಮದನ್ ಮಾದಯ್ಯ ಹಾಗೂ ಕೋಶಾಧಿಕಾರಿಯಾಗಿ ಸೋಮಣ್ಣ ಪಿ.ಪಿ ಎಂಜೆಎಫ್ ಅಧಿಕಾರ ಸ್ವೀಕರಿಸಿದರು. ನಿದೇಶಕರುಗಳಾಗಿ ನಿರಂಜನ್ ಎಂ.ಎ, ಮೋಹನ್ ಕುಮಾರ್ ಎಂಜೆ ಎಫ್, ಜೆ.ವಿ.ಕೋಟಿ, ಮುರುಗೇಶ್, ಚಾಮ, ಸಂತೋμï ಅಣ್ವೇಕರ್, ಗೀತಾ ಮಧುಕರ್, ಉಮೇಶ್ ನಾಯಕ್, ರಾಗ ಪ್ರಕೃತಿ, ಕನ್ನಂಡ ಕವಿತಾ, ಅನಿತಾ ಸೋಮಣ್ಣ, ಸಂಜಯ್ ಹೆಚ್.ಎಲ್ ಹಾಗೂ ನಾಗೇಂದ್ರ ಸೇರ್ಪಡೆಗೊಂಡರು.
ಲಯನ್ಸ್ ಸಂಸ್ಥೆಯ ಮಾಜಿ ರಾಜ್ಯಪಾಲ ಹಾಗೂ ಇಮಿಡಿಯೆಟ್ ಮಲ್ಟಿಪಲ್ ಕೌನ್ಸಿಲ್ ಛೇರ್ಮನ್ ಲಯನ್ ವಸಂತ್ ಕುಮಾರ್ ಶೆಟ್ಟಿ ಪಿಎಂಜೆಎಫ್ ಪದಗ್ರಹಣ ನೆರವೇರಿಸಿಕೊಟ್ಟರು.
ನಂತರ ಮಾತನಾಡಿದ ಅವರು ಲಯನ್ಸ್ ಸಂಸ್ಥೆ ವಿಶ್ವದಾದ್ಯಂತ ಹಲವು ಕಡೆ ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಲಯನ್ಸ್ ನ ಮುಖ್ಯ ಗುರಿ ಸೇವೆ ಮತ್ತು ಸಾಂಗತ್ಯವಾಗಿದೆ. ಮುಂದಿನ ಎರಡು ವರ್ಷದಲ್ಲಿ 1.5 ಮಿಲಿಯನ್ ಸದಸ್ಯತ್ವದ ಗುರಿ ಹೊಂದಿದೆ. ಮಡಿಕೇರಿ ಲಯನ್ಸ್ ಸಂಸ್ಥೆ ಕಳೆದ 59 ವರ್ಷಗಳಿಂದ ಬಡವರ ಹಾಗೂ ಸಾರ್ವಜನಿಕರ ಜನಪರ ಸೇವೆಯನ್ನು ಮಾಡಿಕೊಂಡು ಬಂದಿದೆ ಎಂದರು.
ನೂತನ ಅಧ್ಯಕ್ಷ ನಟರಾಜು ಕೆಸ್ತೂರು ಅವರು ಮಾತನಾಡಿ ಲಯನ್ಸ್ ಕುಟುಂಬದ ಸಹಕಾರದಿಂದ ನಾನು ಈ ಸ್ಥಾನಕ್ಕೆ ಬರಲು ಸಾಧ್ಯವಾಗಿದೆ. ಮುಂಬರುವ ದಿನಗಳ ಕಾರ್ಯ ಚಟುವಟಿಕೆಗಳಿಗೆ ಸರ್ವ ಸದಸ್ಯರ ಸಂಪೂರ್ಣ ಬೆಂಬಲ ಬೇಕು ಎಂದು ಮನವಿ ಮಾಡಿದರು.
ನಿರ್ಗಮಿತ ಅಧ್ಯಕ್ಷ ಲಯನ್ ಮಧುಕರ್ ಶೇಟ್ ಮಾತನಾಡಿ ಕಳೆದ ಸಾಲಿನಲ್ಲಿ ನಿರೀಕ್ಷೆಗೂ ಮೀರಿ ಸೇವೆ ಮಾಡಲು ಸಾಧ್ಯವಾಗಿದೆ. ಇದಕ್ಕೆ ಅನುವು ಮಾಡಿಕೊಟ್ಟ ಪ್ರತಿಯೊಬ್ಬ ಸದಸ್ಯರಿಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು.
2023-24 ರಲ್ಲಿ ಉತ್ತಮ ಸೇವೆಗಾಗಿ ಲಯನ್ಸ್ ಜಿಲ್ಲೆ 317ಡಿ ನಿಂದ ದೊರೆತ ಪ್ರಶಸ್ತಿಯನ್ನು ಪ್ರಾಂತೀಯ ಮಾಜಿ ಅಧ್ಯಕ್ಷ ನವೀನ್ ಅಂಬೆಕಲ್ ಎಂಜೆಎಫ್ ಹಾಗೂ ಮುಖ್ಯ ಅತಿಥಿಗಳು ಸಂಸ್ಥೆಗೆ ಹಸ್ತಾಂತರಿಸಿದರು.
ವೇದಿಕೆಯಲ್ಲಿ ಲಯನ್ಸ್ ಪ್ರಾಂತೀಯ ರಾಯಭಾರಿ ಲಯನ್ ಬಿ.ವಿ.ಮೋಹನ್ ದಾಸ್ ಪಿಎಂಜೆಎಫ್, ಪ್ರಾಂತೀಯ ಅಧ್ಯಕ್ಷ ಕನ್ನಿಕ ಅಯ್ಯಪ್ಪ, ವಲಯಾಧ್ಯಕ್ಷ ಕನ್ನಂಡ ಬೊಳ್ಳಪ್ಪ, ವಲಯಾಧ್ಯಕ್ಷ ಸುಮನ್ ಬಾಲಚಂದ್ರ ಎಂಜಿಎಪ್, ಮಹದೇವಪ್ಪ ಎಂಜೆಎಫ್, ಎಂ.ಬಿ.ರವಿ ಹಾಗೂ ಕೋಶಾಧಿಕಾರಿ ಪಿ.ಪಿ.ಸೋಮಣ್ಣಎಂಜೆಎಫ್ ಉಪಸ್ಥಿತರಿದ್ದರು.
ಮಧುಕರ್ ಶೇಟ್ ಸ್ವಾಗತಿಸಿ, ಮುಖ್ಯ ಅತಿಥಿಗಳ ಪರಿಚಯವನ್ನು ಮಧುಕರ್. ಕೆ. ಅವರು ಮಾಡಿದರು. ದಾಮೋದರ್ ಅವರು ಪದಾಧಿಕಾರಿಗಳನ್ನು ಸಭೆಗೆ ಪರಿಚಯಿಸಿದರು. ಪ್ರತಿಭಾ ಮಧುಕರ್ ಪ್ರಾರ್ಥಿಸಿ ಲಯನ್ ರಂಜು ವಂದಿಸಿದರು. ಕಿಶೋರ್ ಧ್ವಜ ವಂದನೆ ಹಾಗೂ ಅನಿತಾ ಸೋಮಣ್ಣ ನೀತಿ ಸಂಹಿತೆ ಓದಿದರು.
ಇದೇ ಸಂದರ್ಭ ಲಯನ್ಸ್ ಸಂಸ್ಥೆ ವತಿಯಿಂದ ನಗರದ ಅಶ್ವಿನಿ ಆಸ್ಪತ್ರೆಗೆ 15 ಸಾವಿರ ರೂ. ಮೌಲ್ಯದ 2ವೀಲ್ ಚೇರ್ ಗಳನ್ನು ಕೊಡುಗೆಯಾಗಿ ನೀಡಿದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.