Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರೋಟರಿ ವುಡ್ಸ್ ನಿಂದ ಕಾಗಿ೯ಲ್ ವಿಜಯ್ ದಿನಾಚರಣೆ : ಮಾಜಿ ಸೈನಿಕರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರೋಟರಿ ವುಡ್ಸ್ ನಿಂದ ಕಾಗಿ೯ಲ್ ವಿಜಯ್ ದಿನಾಚರಣೆ : ಮಾಜಿ ಸೈನಿಕರಿಗೆ ಸನ್ಮಾನ*

ಜುಲೈ 26, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.26 NEWS DESK : ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೖತ್ತರಾದ ನಾಲ್ವರು ಯೋಧರಿಗೆ ಸನ್ಮಾನದ ಗೌರವ ಸಲ್ಲಿಸುವ ಮೂಲಕ ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ಕಾಗಿ೯ಲ್ ವಿಜಯೋತ್ಸವ ಆಚರಿಸಲಾಯಿತು.

ನಗರದ ರೋಟರಿ ಸಭಾಂಗಣದಲ್ಲಿ ಆಯೋಜಿತ ಕಾಗಿ೯ಲ್ ವಿಜಯ ದಿನದ ಸಮಾರಂಭದಲ್ಲಿ ಮಾಜಿ ಸೇನಾಧಿಕಾರಿಗಳಾದ ಹಾನರರಿ ಕ್ಯಾಪ್ನನ್ ಜಿ.ಎಸ್.ರಾಜಾರಾಮ್, ಎನ್.ಚಂದ್ರನ್, ಸಿ.ಪ್ರಮೋದ್ ಕುಮಾರ್, ಬಾಬು ಪ್ರಸಾದ್ ರೈ ಅವರನ್ನು ರೋಟರಿ ವುಡ್ಸ್ ಅಧ್ಯಕ್ಷ ಹರೀಶ್ ಕಿಗ್ಗಾಲು, ಕಾಯ೯ದಶಿ೯ ಕಿರಣ್ ಕುಂದರ್, ವಲಯ ಸೇನಾನಿ ಅನಿತಾ ಪೂವಯ್ಯ, ಅರಣ್ಯಾಧಿಕಾರಿ ಮಯೂರ್, ರೋಟರಿ ಪ್ರಮುಖರಾದ ಬಿ,ಜಿ, ಅನಂತಶಯನ, ಅನಿಲ್ ಹೆಚ್,ಟಿ, ಎಸ್ ಎಸ್ ಸಂಪತ್ ಕುಮಾರ್, ಸನ್ಮಾನಿಸಿ ಗೌರವಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿ.ಎಸ್.ರಾಜಾರಾಮ್, ಕಾಗಿ೯ಲ್ ಪ್ರದೇಶದಲ್ಲಿ ದೇಶರಕ್ಷಣೆಗಾಗಿ ಕತ೯ವ್ಯ ಸಲ್ಲಿಸುವುದು ಜೀವನದ ಮಹೋನ್ನತ ಅನುಭವವಾಗಿದೆ, ಕಾಗಿ೯ಲ್ ಸಮರದ ಬಳಿಯ ದೇಶದ ರಕ್ಷಣಾ ಇಲಾಖೆಯು ಕಾಗಿ೯ಲ್ ಗೆ ಅಗತ್ಯವಾಗಿದ್ದ ಅತ್ಯಾಧುನಿಕ ರಕ್ಷಣಾ ಉಪಕರಣ 445 ಕಿ.ಮೀ. ವಿದ್ಯುತ್ ಬೇಲಿ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಿತ್ತು ಎಂದರಲ್ಲದೇ, ಪ್ರವಾಸಿಗರು ಜೀವನದಲ್ಲಿ ಒಮ್ಮೆಯಾದರೂ ಕಾಗಿ೯ಲ್ ಯುದ್ದ ಪ್ರದೇಶಕ್ಕೆ ತೆರಳಿ ಅಲ್ಲಿನ ಪ್ರಾಕೖತ್ತಿಕ ಸೌಂದಯ೯ದ ಜತೆಗೇ ಸೈನಿಕರ ಕಠಿಣ ಜೀವನ ಶೈಲಿ, ಪರಿಶ್ರಮ, ತ್ಯಾಗವನ್ನು ಕಾಣುವುದು ಸೂಕ್ತ , ನಾವು ಜೀವಿಸುವ ದೇಶದ ಗಡಿಯಲ್ಲಿ ಏನೇನಾುತ್ತಿದೆ ಎಂಬುದನ್ನು ತಿಳಿದುಕೊಳ್ಳಿ ಎಂದು ಸಲಹೆ ನೀಡಿದರು.

ಸನ್ಮಾನಿತರಾದ ಎನ್.ಚಂದ್ರನ್ ಮಾತನಾಡಿ, ಕಾಗಿ೯ಲ್ ವಿಜಯ ದಿವಸ್ ದಿನ ಮಾತ್ರ ಸೈನಿಕರನ್ನು ಸ್ಮರಿಸಿಕೊಳ್ಳುವಂತಾಗಬಾರದು, ಹಗಲಿರುಳು ಪರಿಶ್ರಮದಿಂದ ಗಡಿಗಳಲ್ಲಿ, ದೇಶದ ಬೇರೆ ಬೇರೆ ಕಡೆ ದೇಶಸೇವೆಯ ಕತ೯ವ್ಯ ಸಲ್ಲಿಸುತ್ತಿರುವ ಸೈನಿಕರನ್ನು ಸ್ಮರಿಸಿಕೊಂಡು ಯೋಧರನ್ನು ಗೌರವಿಸುವ ಕಾಯ೯ ಸಮಾಜಬಾಂಧವರಿಂದ ಆಗಬೇಕು ಎಂದು ಮನವಿ ಮಾಡಿದರು.

ಸನ್ಮಾನಿತರಾದ ಸಿ, ಪ್ರಮೋದ್ ಕುಮಾರ್ ಮಾತನಾಡಿ, ಕಾಗಿ೯ಲ್ ಸಮರದ ಸಂದಭ೯ ಮೊದಲ ಹಂತವಾಗಿ ಕಾಗಿ೯ಲ್ ಶಿಖರವೇರಿದ 17 ಸೈನಿಕರ ಪೈಕಿ ಕೇವಲ 7 ಸೈನಿಕರು ಮಾತ್ರ ಶಿಖರದ ತುತ್ತ ತುದಿ ತಲುಪಲು ಸಾಧ್ಯವಾಯಿತು, ಯೋಗೀಂದ್ರ ಸಿಂಗ್ ಯಾದವ್ ಎಂಬುವವರು ಗುಂಡಿನ 9 ಬುಲೆಟ್ ದೇಹದೊಳಕ್ಕೆ ನುಗ್ಗಿದರೂ ವೀರತಯಿಂದ ಕಾದಾಡಿ ಶತ್ರುಸೈನಿಕರ ಸದೆಬಡಿಯುವ ಕಾಯಾ೯ಚರಣೆಯ ಮುಂಚೂಣಿತನ ವಹಿಸಿ ಜೀವಂತವಾಗಿ ಇಂದಿಗೂ ಇದ್ದಾರೆ ಎಂದು ಸ್ಮರಿಸಿದರು, ಸಮಾಜವು ಯೋದರಿಗೆ ನೀಡುತ್ತಿರುವ ಸನ್ಮಾನವು ದೇಶದ ಎಲ್ಲಾ ಯೋಧರಿಗೆ ಸಲ್ಲುತ್ತದೆ ಎಂದೂ ಅವರು ಹೇಳಿದರು.

ಸನ್ಮಾನಿತ ಮಾಜಿ ಸೇನಾನಿ ಬಾಬು ಪ್ರಸಾದ್ ರೈ ಮಾತನಾಡಿ, ಸೈನ್ಯ ಸೇರುವುದು ತನ್ನ ತಂದೆಯ ಅಭಿನಾಶೆಯಾಗಿತ್ತು, ಹೇಗಿದ್ದರೂ ಒಂದಲ್ಲ ಒಂದು ದಿನ ಸಾಯಲೇಬೇಕಾದ ದೇಹವಿದು, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದರೆ ಹುತಾತ್ಮನಾಗುತ್ತೀಯ ಎಂದು ತಂದೆ ಪ್ರೇರಣೆ ನೀಡಿ ಸೈನ್ಯಕ್ಕೆ ಸೇರಿಸಿದ್ದರು ಎಂದರಲ್ಲದೇ,ಸೈನ್ಯದಲ್ಲಿ ಸಂಕಷ್ಟ ಎದುರಾಗುವುದೇ ಶತ್ರುಗಳು ಆಕ್ರಮಣ ಮಾಡುವ ರಾತ್ರಿವೇಳೆಯಾಗಿದ್ದು ಈ ಸಂದಭ೯ ಪ್ರತೀಯೋವ೯ ಯೋಧನೂ ಜಾಗ್ರತನಾಗಿ ದೇಶಕಾಯುತ್ತಿರುತ್ತಾನೆ ಎಂದೂ ಅವರು ಹೇಳಿದರು, ಸೈನಿಕನಾಗಿ ದೇಶಕ್ಕಾಗಿ ಕತ೯ವ್ಯ ಸಲ್ಲಿಸುವುದು ಜೀವನದಲ್ಲಿ ದೊರಕುವ ಪುಣ್ಯದ ಅವಕಾಶ ಎಂದೂ ಅವರು ಹೆಮ್ಮೆಯಿಂದ ನುಡಿದರು,

ವಲಯ ಸೇನಾನಿ ಅನಿತಾ ಪೂವಯ್ಯ ಮಾತನಾಡಿ, ನಮ್ಮ ದೇಶದ ತಿರಂಗ ಕೇವಲ ಗಾಳಿಯಿಂದ ಹಾರಾಡುತ್ತಿಲ್ಲ, ಅದರ ಹಾರಾಟದ ಹಿನ್ನಲೆಯಲ್ಲಿ ದೇಶಕ್ಕಾಗಿ ವೀರಮರಣವನ್ನಪ್ಪಿದ ಸೈನಿಕರ ಉಸಿರಿನಿಂದ ಎಂದು ಸೈನಿಕರ ಪರಾಕ್ರಮವನ್ನು ಸ್ಮರಿಸಿದರು,

ರೋಟರಿ ವುಡ್ಸ್ ಅಧ್ಯಕ್ಷ ಹರೀಶ್ ಕಿಗ್ಗಾಲು ಮಾತನಾಡಿ, ದೇಶಕ್ಕಾಗಿ ತಮ್ಮೆಲ್ಲಾ ಸುಖಸಂತೋಷ ಬದಿಗಿಟ್ಟು ಕತ೯ವ್ಯ ಸಲ್ಲಿಸುತ್ತಿರುವ ವೀರರನ್ನು ಸ್ಮರಿಸಿಕೊಳ್ಳುವುದು ಇಂದಿನ ಅಗತ್ಯವಾಗಿದ್ದು ಈ ನಿಟ್ಟಿನಲ್ಲಿ ರೋಟರಿ ವುಡ್ಸ್ ವತಿಯಿಂದ ಕಾಗಿ೯ಲ್ ವಿಜಯ ದಿನವನ್ನು ಸೈನಿಕರಿಗೆ ಸನ್ಮಾನ ಮಾಡುವ ಮೂಲಕ ಅಥ೯ಪೂಣ೯ವಾಗಿ ಆಚರಿಸಲಾಗಿದೆ ಎಂದರು.

ರೋಟರಿ ವುಡ್ಸ್ ಕಾಯ೯ದಶಿ೯ ಕಿರಣ್ ಕುಂದರ್ ವಂದಿಸಿದ ಕಾಯ೯ಕ್ರಮವನ್ನು ಕಿಗ್ಗಾಲು ರಂಜಿತ್, ರವಿಕುಮಾರ್, ಚಂದ್ರಶೇಖರ್, ಪ್ರವೀಣ್ ಕುಮಾರ್ ನಿವ೯ಹಿಸಿದರು. ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿನ ಅಮರ್ ಜವಾನ್ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ರೋಟರಿ ವುಡ್ಸ್ ವತಿಯಿಂದ ಪುಪ್ಪಾಚ೯ನೆ ಮಾಡಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.