
ಮಡಿಕೇರಿ ಜು.30 NEWS DESK : ದಕ್ಷಿಣ ಕೊಡಗಿನಲ್ಲಿ ಗಾಳಿ ಸಹಿತ ಉತ್ತಮ ಮಳೆಯಾಗುತ್ತಿದೆ. ವಿರಾಜಪೇಟೆ ಹೋಬಳಿಯ ಬೇತ್ರಿ ಕಾವೇರಿ ನದಿಯ ಹಿನ್ನೀರಿನಲ್ಲಿ ಸಿಲುಕಿದ ಆರು ಮಂದಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ಈ ಸಂದರ್ಭ ತಹಶೀಲ್ದಾರರಾದ ರಾಮಚಂದ್ರ ಮತ್ತು ನೋಡಲ್ ಅಧಿಕಾರಿಗಳು ಹಾಜರಿದ್ದರು.









