Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ನಿಂದ ಗ್ರಾಹಕರ ಹಕ್ಕುಗಳ ಕುರಿತು ಸಂವಾದ : ಮೂಲಹಕ್ಕುಗಳ ಬಗ್ಗೆ ಗ್ರಾಹಕರಿಗೆ ಅರಿವಿದ್ದಾಗ ಸಮಸ್ಯೆಗಳಿಗೆ ಪರಿಕಾರ ಸುಲಭಸಾಧ್ಯ : ಮುರಳೀಧರನ್*
ಇತ್ತೀಚಿನ ಸುದ್ದಿಗಳು

*ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ನಿಂದ ಗ್ರಾಹಕರ ಹಕ್ಕುಗಳ ಕುರಿತು ಸಂವಾದ : ಮೂಲಹಕ್ಕುಗಳ ಬಗ್ಗೆ ಗ್ರಾಹಕರಿಗೆ ಅರಿವಿದ್ದಾಗ ಸಮಸ್ಯೆಗಳಿಗೆ ಪರಿಕಾರ ಸುಲಭಸಾಧ್ಯ : ಮುರಳೀಧರನ್*

July 31, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜು.31 NEWS DESK : ವಿದ್ಯುತ್ ಸೇರಿದಂತೆ ಮೂಲಸೌಲಭ್ಯಗಳ ಬಗ್ಗೆ ಗ್ರಾಹಕರಿಗೆ ಸರಿಯಾದ ಜಾಗೃತಿ ಇಲ್ಲದಿರುವುದರಿಂದಲೇ ಅನೇಕ ಸಮಸ್ಯೆಗಳಿಗೆ ನಿರೀಕ್ಷಿತ ಪರಿಹಾರ ದೊರಕದಾಗಿದೆ. ತಮ್ಮ ಮೂಲ ಹಕ್ಕುಗಳ ಬಗ್ಗೆ ಗ್ರಾಹಕರು ಜಾಗೃತರಾಗಬೇಕಾದ ಅನಿವಾಯ೯ತೆ ಇಂದಿನ ಕಾಲಘಟ್ಟದಲ್ಲಿದೆ ಎಂದು ಬೆಂಗಳೂರಿನ ಗ್ರಾಹಕರ ಹಕ್ಕುಗಳ ಶಿಕ್ಷಣ ಮತ್ತು ಜಾಗೃತಿ ಟ್ರಸ್ಟ್ ಸ್ಥಾಪಕಾಧ್ಯಕ್ಷ ವೈ.ಜಿ.ಮುರಳೀಧರನ್ ಕರೆ ನೀಡಿದ್ದಾರೆ.
ನಗರದಲ್ಲಿ ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜಿತ ಗ್ರಾಹಕರ ಹಕ್ಕುಗಳ ಕುರಿತ ಸಂವಾದ ಕಾಯ೯ಕ್ರಮದಲ್ಲಿ ಮಾತನಾಡಿದ ಅವರು, ವಿದ್ಯುತ್, ಆಹಾರಪದಾಥ೯ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಅದನ್ನು ಬಳಸುವ ಗ್ರಾಹಕರಿಗೆ ತಮ್ಮ ಮೂಲ ಹಕ್ಕುಗಳ ಬಗ್ಗೆಯೇ ಸರಿಯಾದ ತಿಳುವಳಿಕೆ ಇಲ್ಲದಾಗಿದೆ. ಇದರಿಂದಾಗಿಯೇ ಸಮಸ್ಯೆಗಳು ಪರಿಹಾರ ಕಾಣುವ ಬದಲಿಗೆ ಮತ್ತಷ್ಟು ಹೆಚ್ಚಾಗುತ್ತಿದೆ, ಗ್ರಾಹಕರು  ಜಾಗೃತರಾದಾಗ ಮಾತ್ರ ಅನೇಕ ಸಮಸ್ಯೆಗಳು ಸಮಾಜದಲ್ಲಿ ಪರಿಹಾರವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಪರಿಸರ ಸಂರಕ್ಷಣೆ ಹಾಗೂ ಅಭಿವೖದ್ದಿ ಯೋಜನೆಗಳಲ್ಲಿ ಸಮನ್ವಯ ಇದ್ದಾಗ ಯಾವುದೇ ಸಮಸ್ಯೆಯಾಗುವುದಿಲ್ಲ,  ದೇಶದಲ್ಲಿ ಅಭಿವೃದ್ಧಿ ಯೋಜನೆಗಳು ಪರಿಸರ ಸಮತೋಲನದೊಂದಿಗೆ ಜಾರಿಯಾದಾಗ ದೇಶದ ಪ್ರಗತಿಯೂ ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟ ಮುರಳೀಧರ್,  ವಿದ್ಯುತ್ ರಂಗದಲ್ಲಿ ನಗರ ಪ್ರದೇಶಗಳ ಪೈಕಿ ಬಿಲ್ ಸಮಸ್ಯೆ ಕಂಡುಬರುತ್ತಿದ್ದರೆ, ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯದ ಸಮಸ್ಯೆ ಎದುರಿಸುತ್ತಿದ್ದೇವೆ, ಗ್ರಾಹಕ ತನಗೆ ಬರುವ ಬಿಲ್ ನ್ನು ಸರಿಯಾಗಿ ತಿಳಿದುಕೊಳ್ಳದೇ ಇರುವುದರಿಂದಾಗಿ ಅನೇಕ ಗ್ರಾಹಕರು ಸಮಸ್ಯೆ ಎದುರಿಸುವಂತಾಗಿದೆ, ವಿದ್ಯುತ್ ನಿಯಂತ್ರಣಗಳೇನು, ಗ್ರಾಹಕರಿಗೆ ಇರುವ ಹಕ್ಕುಗಳೇನು ಎಂಬುದನ್ನು ಸ್ಥಳೀಯವಾಗಿ ಸಂಘಸಂಸ್ಥೆಗಳ ಮೂಲಕ ಜನರಿಗೆ ತಿಳಿಸಬೇಕಾದ ಅಗತ್ಯ ಇಂದಿನ ಕಾಲಘಟ್ಟದಲ್ಲಿದೆ ಎಂದೂ ಮುರಳೀಧರನ್  ಹೇಳಿದರು.
ಗ್ರಾಹಕರಿಗೆ ಸರಬರಾಜಾಗುವ ವಿದ್ಯುತ್ ನ ಗುಣಮಟ್ಟಕ್ಕೆ ಕೂಡ ಮಾನದಂಡವಿದೆ, ವಿದ್ಯುತ್ ದರ ಪರಿಷ್ಕರಿಸುವ ಮುನ್ನ ಗ್ರಾಹಕನ ಅಭಿಪ್ರಾಯವನ್ನೂ ಕೇಳಬೇಕಾಗಿದೆ,  ಆದರೆ ಎಲ್ಲಕ್ಕಿಂತ ಮುಖ್ಯವಾಗಿ ಇಂಥ ಆಗುಹೋಗುಗಳ ಬಗ್ಗೆ ಗ್ರಾಹಕ ಕೂಡ ಮೌನವಹಿಸದೇ ಜಾಗ್ರತನಾಗಿ ಪ್ರಶ್ನಿಸುವ ಅನಿವಾಯ೯ತೆ ಇಂದಿದೆ ಎಂದು ಅವರು ಹೇಳಿದರು.
ಪ್ರತೀ ತಿಂಗಳು ಪಡೆಯುವ ವಿದ್ಯುತ್ ಬಿಲ್ ನ್ನು ಎಷ್ಟು ಗ್ರಾಹಕರು ಸರಿಯಾಗಿ ಓದಿ ಮಾಹಿತಿ ತಿಳಿಯುತ್ತಾರೆ ಎಂದು ಪ್ರಶ್ನಿಸಿದ ಮುರಳೀಧರನ್ ,ಬಿಲ್ ನಲ್ಲಿ ನಮೂದಿಸಲಾಗುವ ಎಲ್ಲಾ ಅಂಶಗಳನ್ನು ಸರಿಯಾಗಿ ಓದಿ ಸೂಕ್ತವಾಗಿದೆಯೇ ಎಂದಾದ ಮೇಲೆ ಬಿಲ್ ಪಾವತಿಸಬೇಕು, ಇಲ್ಲದೇ ಹೋದಲ್ಲಿ ಬಿಲ್ ತಪ್ಪಾಗಿದ್ದರೂ ಗ್ರಾಹಕನ ಮೌನ ಭವಿಷ್ಯದಲ್ಲಿ ಸಮಸ್ಯೆಯಾಗಿ ಪರಿಣಮಿಸುತ್ತದೆ ಎಂದು ಮುರಳೀಧರನ್ ಎಚ್ಚರಿಸಿದರು.
ಕೊಡಗು ಜಿಲ್ಲಾ ಚೆಸ್ಕಾಂ ಅಧಿಕಾರಿ ಅನಿತಾಭಾಯಿ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿ, ಜಿಲ್ಲೆಯಲ್ಲಿ 13 ವಿದ್ಯುತ್ ಸಬ್ ಸ್ಚೇಷನ್ ಗಳ ಅಗತ್ಯವಿದ್ದು ಆದರೆ ಕೇವಲ 2 ಸಬ್ ಸ್ಟೇಷನ್ ಗಳು ಕಾಯ೯ನಿವ೯ಹಿಸುತ್ತಿದೆ, ಹೆಚ್ಚುವರಿ ಸಬ್ ಸ್ಟೇಷನ್ ಗಳಿಗೆ ಬೇಡಿಕೆ ಸಲ್ಲಿಸಲಾಗಿದೆ. ಇದು ಮಂಜೂರಾಗಿ ಕಾಯ೯ಪ್ರವೖತ್ತವಾದಲ್ಲಿ ಕೊಡಗಿನೆಲ್ಲಡೆ ವಿದ್ಯುತ್ ಸಮಸ್ಯೆ ಪರಿಹಾರ ಸಾಧ್ಯವಿದೆ ಎಂದರು.
ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಅಧ್ಯಕ್ಷ  ಅಪ್ಪನೆರವಂಡ ನಂದಾ ಬೆಳ್ಯಪ್ಪ ಮಾತನಾಡಿ, ಚೆಸ್ಕಾಂ  ಮತ್ತು ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ನಡುವೆ ಸೌಹಾಧ೯ತೆ ಇದ್ದಾಗ ಅನೇಕ ಸಮಸ್ಯೆಗಳು ಪರಿಹಾರವಾಗುತ್ತದೆ. ಬೆಳೆಗಾರರನ್ನು ಗಣನೆಗೆ ತೆಗೆದುಕೊಂಡು ವಿಶ್ವಾಸಯುತವಾಗಿ ಕಾಯ೯ನಿವ೯ಹಿಸಿದಾಗ ಚೆಸ್ಕಾಂಗೆ ತೋಟದೊಳಗೆ ಕೂಡ ತಂತಿ ಮಾಗ೯ ಹಾಕಲು ಸುಲಭಸಾಧ್ಯವಿದೆ ಎಂದು ಅನಿಸಿಕೆ ವ್ಯಕ್ತಪಡಿಸಿದರು.  ಭವಿಷ್ಯದಲ್ಲಿ ಕೊಡಗಿನ ಕಾಫಿ ಬೆಳೆಗಾರರೂ ಸೇರಿದಂತೆ ಕೖಷಿಕರು ಎದುರಿಸುತ್ತಿರುವ ವಿದ್ಯುತ್ ಸಮಸ್ಯೆ ಸಂಬಂಧಿತ ಶಾಸಕರ ನೇತೃತ್ವದಲ್ಲಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಪರಿಹಾರ ಕಂಡುಕೊಳ್ಳುವ ಉದ್ದೇಶವಿದೆ ಎಂದು ತಿಳಿಸಿದರು.
ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಗೌರವ ಸಲಹೆಗಾರ ಕೆ,ಕೆ,ವಿಶ್ವನಾಥ್, ವಂದಿಸಿದ ಕಾಯ೯ಕ್ರಮದಲ್ಲಿ ಅಸೋಸಿಯೇಷನ್ ಉಪಾಧ್ಯಕ್ಷ   ಅಜ್ಜೀರಂಡ ಎ.ಚಂಗಪ್ಪ, ಅಸೋಸಿಯೇಷನ್  ಕಾಯ೯ದಶಿ೯  ಚೊಟ್ಟೇರ ಕೆ.ಬೆಳ್ಯಪ್ಪ ಹಾಜರಿದ್ದರು. ಜಿಲ್ಲೆಯಾದ್ಯಂತಲಿನ ಬೆಳೆಗಾರ ಸದಸ್ಯರು ಸಂವಾದದಲ್ಲಿ ಪಾಲ್ಗೊಂಡು ಅನೇಕ ಮಾಹಿತಿಗಳನ್ನು ಗ್ರಾಹಕರ ಹಕ್ಕುಗಳ ಬಗ್ಗೆ ಪಡೆದರು.

ವಿದ್ಯುತ್ ನಿಯಂತ್ರಣ ಆಯೋಗದ ಪ್ರಯೋಜನ ಪಡೆಯಿರಿ :: 2003 ರಲ್ಲಿ ವಿದ್ಯುತ್  ಕಾಯಿದೆ ಜಾರಿಯಾದಲ್ಲಿಂದ ವಿದ್ಯುತ್ ರಂಗ ಸಾಕಷ್ಟು ಬದಲಾವಣೆ ಕಂಡಿದೆ. ಸಕಾ೯ರದ ಹಿಡಿತದಲ್ಲಿದ್ದ ವಿದ್ಯುತ್ ಉತ್ಪಾದನೆ, ಪ್ರಸರಣ, ಸರಬರಾಜು ಖಾಸಗಿ ವಲಯಕ್ಕೆ ಹೋಗಿದೆ, ವಿದ್ಯುತ್ ಕ್ಷೇತ್ರವನ್ನು ನಿಯಂತ್ರಿಸಲು ಪ್ರತ್ಯೇಕವಾದ ವಿದ್ಯುತ್ ನಿಯಂತ್ರಣ ಆಯೋಗ ರಚಿಸಲಾಗಿದೆ. ಬಳಕೆದಾರರ ಹಿತವನ್ನು ರಕ್ಷಿಸುವುದು ಈ ಯೋಗದ ಮುಖ್ಯ ಕತ೯ವ್ಯವಾಗಿದ್ದು ಆಯೋಗದ ಪ್ರಯೋಜನವನ್ನು ಗ್ರಾಹಕರು ಪಡೆದುಕೊಂಡು ವಿದ್ಯುತ್ ಸಂಬಂಧಿತ ಸಮಸ್ಯೆ ಪರಿಹರಿಸಿಕೊಳ್ಳಬಹುದು ಎಂದೂ ಮುರಳೀಧರ್ ಮಾಹಿತಿ ನೀಡಿದರು.

Share. Facebook Twitter Pinterest LinkedIn Tumblr Email WhatsApp
Previous Article*ಮೇಜರ್ ಸುಮುಖ್ ಸ್ವರೂಪ್ ಗೆ ಚಿನ್ನದ ಪದಕ*
Next Article *ಆ.4 ರಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.