Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ತುರ್ತಾಗಿ ವಿಶೇಷ ಪ್ಯಾಕೇಜ್ ಘೋಷಿಸಲು ವಿರಾಜಪೇಟೆ ಬಿಜೆಪಿ ಒತ್ತಾಯ*
ಇತ್ತೀಚಿನ ಸುದ್ದಿಗಳು

*ತುರ್ತಾಗಿ ವಿಶೇಷ ಪ್ಯಾಕೇಜ್ ಘೋಷಿಸಲು ವಿರಾಜಪೇಟೆ ಬಿಜೆಪಿ ಒತ್ತಾಯ*

August 1, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಆ.1 NEWS DESK : ಕಳೆದ ಒಂದು ತಿಂಗಳಿನಿಂದ ಸುರಿಯುತ್ತಿರುವ ಗಾಳಿ ಸಹಿತ ಮಹಾಮಳೆಗೆ ಕೊಡಗು ಜಿಲ್ಲೆ ನಲುಗಿ ಹೋಗಿದ್ದು, ಅಪಾರ ನಷ್ಟ ಅನುಭವಿಸಿದೆ. ರಾಜ್ಯ ಸರ್ಕಾರ ತಕ್ಷಣ ಮಳೆಹಾನಿ ಪರಿಹಾರವಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಭಾರತೀಯ ಜನತಾ ಪಾರ್ಟಿಯ ವಿರಾಜಪೇಟೆ ಮಂಡಲ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಬಿಜೆಪಿಯ ವಿರಾಜಪೇಟೆ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅಧಿಕ ಮಳೆಯಿಂದ ಬೆಳೆ ಮತ್ತು ಮನೆಗಳು ವ್ಯಾಪಕವಾಗಿ ಹಾನಿಗೀಡಾಗಿದ್ದು, ಸರ್ಕಾರ ತುರ್ತು ಪರಿಹಾರ ಘೋಷಿಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯ ವಿವಿಧೆಡೆ ನೂರಾರು ಬಡವರ ಮನೆಗಳು ನೆಲಸಮವಾಗಿವೆ. ಅನೇಕ ಮನೆಗಳು ವಾಸಕ್ಕೆ ಯೋಗ್ಯವಿಲ್ಲದಂತೆ ಹಾನಿಗೀಡಾಗಿವೆ. ಹಲವು ಕುಟುಂಬಗಳು ಆಶ್ರಯವಿಲ್ಲದೆ ಅತಂತ್ರ ಪರಿಸ್ಥಿತಿಯಲ್ಲಿವೆ. ಆದರೆ ಸರ್ಕಾರ ಇಲ್ಲಿಯವರೆಗೆ ಎಷ್ಟು ಹಾನಿಗೆ ಎಷ್ಟು ಪ್ರಮಾಣದ ಪರಿಹಾರ ಎನ್ನುವುದನ್ನು ಘೋಷಿಸಿಲ್ಲ. ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ಮನೆ ಸಂಪೂರ್ಣ ಹಾನಿಯಾದರೆ 5ಲಕ್ಷ ರೂ. ಪರಿಹಾರ ನೀಡುತ್ತಿತ್ತು. ಈಗಿನ ಕಾಂಗ್ರೆಸ್ ಸರ್ಕಾರ ಶೇ.70 ಕ್ಕಿಂತ ಹೆಚ್ಚು ಹಾನಿಗೀಡಾದ ಮನೆಗಳಿಗೆ 5ಲಕ್ಷ, ಶೇ.40 ಕ್ಕಿಂತ ಹೆಚ್ಚು ಹಾನಿಗೀಡಾದ ಮನೆಗಳಿಗೆ 3ಲಕ್ಷ ರೂ. ನೀಡಬೇಕು. ವಿಶೇಷ ಅಧಿಕಾರಿಗಳ ತಂಡವನ್ನು ರಚಿಸಿ ಮನೆಹಾನಿಯ ಸಮಗ್ರ ವರದಿಯನ್ನು ತಯಾರಿಸಬೇಕು. ಮನೆ ಕಳೆದುಕೊಂಡವರಿಗೆ ತುರ್ತಾಗಿ ಮೊದಲ ಹಂತದಲ್ಲಿ ರೂ.50ಸಾವಿರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ದೇಶ ಮತ್ತು ರಾಜ್ಯಕ್ಕೆ ಆರ್ಥಿಕ ಬಲ ನೀಡುತ್ತಿರುವ ಕೊಡಗಿನ ಕಾಫಿ ಬೆಳೆ ಅತಿವೃಷ್ಟಿಯಿಂದ ಸಂಪೂರ್ಣವಾಗಿ ನೆಲಕಚ್ಚಿದೆ. ಕಾಫಿ ಕಾಯಿ ಕೊಳೆತು ಉದುರುತ್ತಿದೆ. ಅನೇಕ ಭಾಗಗಳಲ್ಲಿ ಕಾಫಿ ತೋಟಗಳು ಜಲಾವೃತಗೊಂಡು ನಷ್ಟ ಉಂಟಾಗಿದೆ. ಮುಂದಿನ ವರ್ಷ ಶೇ.25 ರಷ್ಟು ಫಸಲು ಕೂಡ ಕೈಸೇರುವ ಭರವಸೆ ಬೆಳೆಗಾರರಿಗೆ ಇಲ್ಲದಾಗಿದೆ. ಬೆಳೆನಷ್ಟದಿಂದ ಬೆಳೆಗಾರರು ಮಾತ್ರವಲ್ಲದೆ ಕಾರ್ಮಿಕ ಹಾಗೂ ವರ್ತಕ ವರ್ಗ ಕೂಡ ಸಂಕಷ್ಟಕ್ಕೆ ಸಿಲುಕಲಿದೆ. ಕಾಫಿ ಮಾತ್ರವಲ್ಲದೆ ಕಾಳು ಮೆಣಸು, ಏಲಕ್ಕಿ, ಅಡಿಕೆ ಮತ್ತು ಭತ್ತದ ಕೃಷಿಗೂ ಹಾನಿಯಾಗಿದೆ. ಜಿಲ್ಲೆಯ ಕೃಷಿಕರು ಉಪಕಸುಬಾಗಿ ಹಸುಗಳ ಸಾಕಾಣಿಕೆಯಲ್ಲಿ ತೊಡಗಿದ್ದಾರೆ. ಆದರೆ ಇತ್ತೀಚೆಗೆ ಭಾರೀ ಮಳೆಯಿಂದ ವಿದ್ಯುತ್ ತಂತಿಗಳು ಬಿದ್ದು, ವಿದ್ಯುತ್ ಸ್ಪರ್ಷದಿಂದ ಹತ್ತಾರು ಹಸುಗಳು ಮೃತಪಟ್ಟಿವೆ. ಅಲ್ಲದೆ ಹುಲಿ ದಾಳಿಗೂ ಹಸುಗಳು ಬಲಿಯಾಗಿವೆ. ಈ ಎಲ್ಲಾ ಕಾರಣಗಳಿಂದ ಕೃಷಿಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಆದ್ದರಿಂದ ಸರ್ಕಾರ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಬೆಳೆ ನಷ್ಟ ಮತ್ತು ಜಾನುವಾರುಗಳ ಸಾವಿನ ಬಗ್ಗೆ ಅಧ್ಯಯನ ನಡೆಸಬೇಕು. ಸೂಕ್ತ ಪರಿಹಾರ ಘೋಷಿಸುವುದರೊಂದಿಗೆ ಬೆಳೆಗಾರರ ಸಾಲಮನ್ನಾ ಮಾಡಬೇಕು ಎಂದು ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ.
ಅತಿ ಮಳೆಯಿಂದ ಮನೆಹಾನಿ ಮತ್ತು ಬೆಳೆನಷ್ಟದೊಂದಿಗೆ ಜಿಲ್ಲೆಯ ಅನೇಕ ರಸ್ತೆಗಳು, ಸೇತುವೆಗಳು ಹಾಗೂ ವಿದ್ಯುತ್ ಮಾರ್ಗಗಳು ಕಣ್ಮರೆಯಾಗಿವೆ. ಇವುಗಳೆಲ್ಲವನ್ನು ಪುನರ್ ನಿರ್ಮಿಸುವ ಅಗತ್ಯವಿದೆ.
::: ಕಾವೇರಿ ಋಣ :::
ಕಾವೇರಿ ನದಿಯ ಉಗಮಸ್ಥಾನ ಕೊಡಗು ಜಿಲ್ಲೆ ಪ್ರತಿವರ್ಷ ಮಳೆಗಾಲದಲ್ಲಿ ಕಷ್ಟನಷ್ಟಗಳನ್ನು ಅನುಭವಿಸಿ ರಾಜ್ಯ ಹಾಗೂ ಹೊರ ರಾಜ್ಯದ ಕೋಟ್ಯಾಂತರ ಜನರಿಗೆ ನೀರನ್ನು ಒದಗಿಸುತ್ತದೆ. ಆದರೆ ಇದಕ್ಕೆ ಪ್ರತಿಯಾಗಿ ಸರ್ಕಾರದಿಂದ ಕೊಡಗಿಗೆ ಯಾವುದೇ ನೆರವು ದೊರೆಯುತ್ತಿಲ್ಲ. ಈ ಬಾರಿ ಸುರಿದ ಉತ್ತಮ ಮಳೆಯಿಂದ ತಮಿಳುನಾಡಿನೊಂದಿಗೆ ಇದ್ದ ಕಾವೇರಿ ನೀರಿನ ಹಂಚಿಕೆಯ ಸಮಸ್ಯೆಯೂ ಪರಿಹಾರವಾಗಿದೆ. ಇದೆಲ್ಲವನ್ನು ಮನಗಂಡು ಕರ್ನಾಟಕ ಸರ್ಕಾರ ಕೊಡಗು ಜಿಲ್ಲೆಗೆ ತುರ್ತಾಗಿ ಮಳೆಹಾನಿ ಪರಿಹಾರವಾಗಿ ವಿಶೇಷ ಪ್ಯಾಕೇಜ್ ಘೋಷಿಸುವುದು ಅನಿವಾರ್ಯವಾಗಿದೆ. ಅಲ್ಲದೆ ಕಾವೇರಿ ನದಿ ನೀರಿನ ಋಣವಾಗಿ ಪ್ರತಿವರ್ಷ ಬಜೆಟ್ ನಲ್ಲಿ “ವಿಶೇಷ ಕೊಡಗು ಪ್ಯಾಕೇಜ್” ಮೀಸಲಿಡಬೇಕೆಂದು ರಾಕೇಶ್ ದೇವಯ್ಯ ಆಗ್ರಹಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಶೂಟಿಂಗ್​ನಲ್ಲಿ ಭಾರತಕ್ಕೆ ಮತ್ತೊಂದು ಪದಕ : ಕಂಚು ಗೆದ್ದ ಸ್ವಪ್ನಿಲ್​ ಕುಸಾಲೆ*
Next Article *ಆ.2 ರಂದು ಕೊಡಗಿಗೆ ನಿಖಿಲ್ ಕುಮಾರಸ್ವಾಮಿ ಭೇಟಿ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.