ಸೋಮವಾರಪೇಟೆ ಆ.5 NEWS DESK : ತೋಳೂರುಶೆಟ್ಟಳ್ಳಿ ಸುತ್ತಮುತ್ತಲ ಮಳೆಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭ ಸಂತ್ರಸ್ತರಿಗೆ ಧೈರ್ಯ ಹೇಳಿದ ಅವರು ತೀವ್ರ ಸಂಕಷ್ಟದಲ್ಲಿರುವ ಕೆಲವು ಕುಟುಂಬಕ್ಕೆ ಪಡಿತರ ಸಾಮಾಗ್ರಿ ವಿತರಿಸಿದರು. ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ ಹಾಗೂ ಮತ್ತಿತರ ಪ್ರಮುಖರು ಹಾಜರಿದ್ದರು.










