ವಿರಾಜಪೇಟೆ ಆ.6 NEWS DESK : ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ತರಗತಿ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿ ಸಂಘಕ್ಕೆ ಚುನಾವಣೆ ಮೂಲಕ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ದ್ವಿತೀಯ ಪಿಯು ತರಗತಿಯ ಹರ್ಷ, ಜಂಟಿ ಕಾರ್ಯದರ್ಶಿಗಳಾಗಿ ಕೃತಿಕ್ ರೋಷನ್ ಹಾಗೂ ವಿ.ಎಸ್.ದೀಷ್ಮ , ಕ್ರೀಡಾ ಕಾರ್ಯದರ್ಶಿಯಾಗಿ ವಿದ್ಯಾರ್ಥಿ ಕೆ.ಎಸ್.ನಾಣಯ್ಯ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸಿ.ವಿ.ಅನನ್ಯ ಆಯ್ಕೆಯಾದರು. ಈ ಆಯ್ಕೆ ಪ್ರಕ್ರಿಯೆಯಲ್ಲಿ ಕಾಲೇಜು ಪ್ರಾಂಶುಪಾಲರಾದ ನಾಣಯ್ಯ ಹಾಗೂ ಉಪನ್ಯಾಸಕರು ಹಾಜರಿದ್ದರು.







