Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಷ್ಟ್ರೀಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆಯಾದ ಕೊಡಗು ವಿದ್ಯಾಲಯದ ಬಾಲಕಿಯರ ತಂಡ*
  • *ಸಂಪಾಜೆ: ಪ್ರಪಂಚಕ್ಕೆ ತಾಯಿ, ಮಗುವಿಗೆ ತಾಯಿಯೇ ಪ್ರಪಂಚ : ಜಯಲಕ್ಷ್ಮಿ ಅಭಿಮತ*
  • *ಸುಂಟಿಕೊಪ್ಪದಲ್ಲಿ ಕರವೇ ಸ್ವಾಭಿಮಾನಿ ಸೇನೆ ಹೋಬಳಿ ಘಟಕ ಉದ್ಘಾಟನೆ; ಹೊಸ ಸದಸ್ಯರ ಸೇರ್ಪಡೆ ಬಳಿಕ ಮಾದಾಪುರ ರಸ್ತೆಯ ಗುಂಡಿ ಮುಚ್ಚಿ ಸಮಾಜಮುಖಿ ಕಾರ್ಯ*
  • *ಕ.ಸಾ.ಪ. ವತಿಯಿಂದ ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆ.ಟಿ. ಸುಬ್ಬರಾವ್ ದತ್ತಿ ಕಾರ್ಯಕ್ರಮ; ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರ: ಉ.ರಾ. ನಾಗೇಶ್*
  • *ಪ್ರಮುಖ ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಕೊಡಗು : ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಮಡಿಕೇರಿಯಲ್ಲಿ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗಣ್ಯರಿಂದ ಗೌರವ ನಮನ*
  • *ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ :  ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾಧಿಕಾರಿ ಸೋಮಖಶೇಖರ್*
  • *ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲೆಯ ತ್ರೋಬಾಲ್ ತಂಡ ರನ್ನರ್ಸ್*
  • ಸೋಮವಾರಪೇಟೆ ಹೋಮ್‌ಸ್ಟೇ ಅಸೋಸಿಯೇಷನ್‌ನಿಂದ ಕಾಸರಗೋಡು–ಕಣ್ಣೂರು ಅಧ್ಯಯನ ಪ್ರವಾಸ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ “ನಾವು ಮನುಜರು” ವಿನೂತನ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ “ನಾವು ಮನುಜರು” ವಿನೂತನ ಕಾರ್ಯಕ್ರಮ*

ಆಗಷ್ಟ್ 7, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಆ.7 NEWS DESK : ಶಾಲಾ ಮಕ್ಕಳ ಮನದಲ್ಲಿ ಸಾಮರಸ್ಯದ ಮೊಹರು ಬೆಳೆಸಲು ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಾವು ಮನುಜರು ವಿನೂತನ ಕಾರ್ಯಕ್ರಮ ನಡೆಯಿತು. ಶಾಲೆಯ ಎಸ್.ಡಿ.ಎಂ.ಸಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ( ಎನ್ನೆಸ್ಸೆಸ್) ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾವು ಮನುಜರು ಕಾರ್ಯಕ್ರಮದ ಉದ್ದೇಶ ಹಾಗೂ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿ ಪ್ರತಿಜ್ಞಾ ವಿಧಿ ಬೋಧಿಸಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್,
ಮಕ್ಕಳಲ್ಲಿ ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ, ಪರಿಸರ ಪ್ರಜ್ಞೆ, ಮೌಢ್ಯಗಳ ನಿವಾರಣೆ ಬಗ್ಗೆ ಜಾಗೃತಿ ಸೇರಿದಂತೆ ಸಾಂವಿಧಾನಿಕ ಮೌಲ್ಯಗಳನ್ನು ಬೆಳೆಸಲು ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಮೂಲಕ ಶಾಲೆಗಳಲ್ಲಿ ಪ್ರಸಕ್ತ ಸಾಲಿನಿಂದ “ನಾವು ಮನುಜರು” ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. ಇದರಿಂದ ಮಕ್ಕಳಲ್ಲಿ ಸಾಮಾಜಿಕ ಸಾಮರಸ್ಯ, ಸಹಬಾಳ್ವೆ, ಸಾಂವಿಧಾನಿಕ ಮೌಲ್ಯ ಬೆಳೆಸಲು ಸಾಧ್ಯ ಎಂದರು.
ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ, ಪರಿಸರ ಪ್ರಜ್ಞೆ, ಮೂಢನಂಬಿಕೆಗಳ ನಿರ್ಮೂಲನೆ ಮತ್ತು ಮೂಢನಂಬಿಕೆಗಳ ಸಮನ್ವಯತೆ ಮತ್ತು ವಿಜ್ಞಾನದ ಬಗ್ಗೆ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಭಾಗವಾಗಿದೆ. ಇದರಿಂದ ಮಕ್ಕಳಲ್ಲಿ ಭಾವನಾತ್ಮಕ ಚಟುವಟಿಕೆಗಳ ಮೂಲಕ ರಾಷ್ಟ್ರೀಯ ಭಾವೈಕ್ಯತೆ ಹಾಗೂ ಸೇವಾ ಮನೋಭಾವ ಬೆಳೆಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. ನಿತ್ಯ ಜೀವನದಲ್ಲಿ ವಿಜ್ಞಾನದ ಬಗ್ಗೆ ಅರಿವು ಮೂಡಿಸಲು ಮನೆಮದ್ದು, ವಿಜ್ಞಾನ ಪ್ರಯೋಗಾಲಯ ಬಳಸಿ ನಡೆಸುವ ಪ್ರಯೋಗಗಳು, ವಿದ್ಯಾರ್ಥಿಗಳಲ್ಲಿ ಕುತೂಹಲ ಮೂಡಿಸುವ ಚಟುವಟಿಕೆಗಳನ್ನು ರೂಪಿಸಿ ಪ್ರಶ್ನಿಸುವ ಮನೋಭಾವ ಬೆಳೆಸುವ ಪ್ರಯತ್ನಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ಪ್ರೇಮಕುಮಾರ್ ತಿಳಿಸಿದರು. ನಾವು ಮನುಜರು ಕಾರ್ಯಕ್ರಮದ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದ ರಂಗಭೂಮಿ ನಿರ್ದೇಶಕ ಟಿ.ಭರಮಣ್ಣ ಬೆಟ್ಟಗೇರಿ ಮಾತನಾಡಿ, ನಾವು ಮನುಜರು ಕಾರ್ಯಕ್ರಮವು ಶಾಲಾ ಮಕ್ಕಳ ಮನದಲ್ಲಿ ಸಾಮರಸ್ಯದ ಮೊಹರು ಒತ್ತಲು ಸಹಕಾರಿಯಾಗಿದೆ ಎಂದರು. ನಾವು ಮನುಜರು ಕಾರ್ಯಕ್ರಮದಡಿ ಸಾಮರಸ್ಯ ಬೆಳೆಸಲು ಸ್ಥಳೀಯ ಮತ್ತು ರಾಷ್ಟ್ರೀಯ ಹಬ್ಬಗಳು, ಆಟಗಳು, ಕ್ರೀಡೆಗಳು ಇತ್ಯಾದಿಗಳನ್ನು ಆಧರಿಸಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸಾಮರಸ್ಯ ಬೆಳೆಸಲು ಮತ್ತು ಅದರ ಮಹತ್ವದ ಬಗ್ಗೆ ಚರ್ಚೆ, ಸಂವಾದ ನಡೆಸುವ ಮಹತ್ವದ ಕಾರ್ಯಕ್ರಮ ಇದಾಗಿದೆ ಎಂದು ಹೇಳಿದರು. ದೇಶದ ಸಮಾಜ ಸುಧಾರಕರು, ಕ್ರಾಂತಿಗಳ ಮಾಹಿತಿ ಒದಗಿಸುವುದು, ಸಮೀಪದ ಐತಿಹಾಸಿಕ ಸ್ಥಳಗಳಿಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಸ್ವತಂತ್ರವಾಗಿ ಯೋಚಿಸುವ ಸಾಮರ್ಥ್ಯ, ವೈಚಾರಿಕತೆ ಮತ್ತು ಪ್ರತಿ ಸಮಸ್ಯೆಯ ಸಾಧಕ–ಬಾಧಕಗಳನ್ನು ಅರ್ಥಮಾಡಿಕೊಳ್ಳುವ ಗುರಿಯನ್ನು ಹೊಂದಿದೆ. ಇದು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಎಂದು ಭರಮಣ್ಣ ತಿಳಿಸಿದರು. ಶಾಲೆಯ ಎಸ್ ಡಿ ಎಂ ಸಿ.ಅಧ್ಯಕ್ಷ ಎ.ಎಂ.ಜವರಯ್ಯ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಎಂ.ಸಿ.ಸದಸ್ಯರಾದ ಕೆ.ಪಿ.ರೇವಣ್ಣ, ಕೆಂಪು.ಎಸ್.ರಾಜಾಚಾರಿ, ಶಿಕ್ಷಕರಾದ ಕೆ.ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಬಿ.ಡಿ.ರಮ್ಯ, ಬಿ.ಎನ್.ಸುಜಾತ, ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ ಇದ್ದರು. ಪೋಷಕ ಪರಿಷತ್ತಿನ ಸದಸ್ಯರು ಹಾಗೂ ವಿದ್ಯಾರ್ಥಿ– ಪೋಷಕರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾಷ್ಟ್ರೀಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆಯಾದ ಕೊಡಗು ವಿದ್ಯಾಲಯದ ಬಾಲಕಿಯರ ತಂಡ*

ಸೆಪ್ಟೆಂಬರ್ 12, 2026

*ಸಂಪಾಜೆ: ಪ್ರಪಂಚಕ್ಕೆ ತಾಯಿ, ಮಗುವಿಗೆ ತಾಯಿಯೇ ಪ್ರಪಂಚ : ಜಯಲಕ್ಷ್ಮಿ ಅಭಿಮತ*

ಸೆಪ್ಟೆಂಬರ್ 11, 2026

*ಸುಂಟಿಕೊಪ್ಪದಲ್ಲಿ ಕರವೇ ಸ್ವಾಭಿಮಾನಿ ಸೇನೆ ಹೋಬಳಿ ಘಟಕ ಉದ್ಘಾಟನೆ; ಹೊಸ ಸದಸ್ಯರ ಸೇರ್ಪಡೆ ಬಳಿಕ ಮಾದಾಪುರ ರಸ್ತೆಯ ಗುಂಡಿ ಮುಚ್ಚಿ ಸಮಾಜಮುಖಿ ಕಾರ್ಯ*

ಸೆಪ್ಟೆಂಬರ್ 11, 2026

*ಸಂಪಾಜೆ: ಪ್ರಪಂಚಕ್ಕೆ ತಾಯಿ, ಮಗುವಿಗೆ ತಾಯಿಯೇ ಪ್ರಪಂಚ : ಜಯಲಕ್ಷ್ಮಿ ಅಭಿಮತ*

ಸೆಪ್ಟೆಂಬರ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸಂಪಾಜೆ, NEWS DESK ಸೆ.11: ಮಗುವಿನ ಭವಿಷ್ಯಕ್ಕೆ ಭೂಮಿಕೆ ಸಿದ್ಧವಾಗುವುದು ಅಮ್ಮನ ಮಡಿಲಿನಲ್ಲಿಯೇ. ಮಕ್ಕಳಿಗೆ ತಾಯಿ ನೀಡುವ ಸಮಯ ಮತ್ತು…

*ಸುಂಟಿಕೊಪ್ಪದಲ್ಲಿ ಕರವೇ ಸ್ವಾಭಿಮಾನಿ ಸೇನೆ ಹೋಬಳಿ ಘಟಕ ಉದ್ಘಾಟನೆ; ಹೊಸ ಸದಸ್ಯರ ಸೇರ್ಪಡೆ ಬಳಿಕ ಮಾದಾಪುರ ರಸ್ತೆಯ ಗುಂಡಿ ಮುಚ್ಚಿ ಸಮಾಜಮುಖಿ ಕಾರ್ಯ*

ಸೆಪ್ಟೆಂಬರ್ 11, 2026

*ಕ.ಸಾ.ಪ. ವತಿಯಿಂದ ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆ.ಟಿ. ಸುಬ್ಬರಾವ್ ದತ್ತಿ ಕಾರ್ಯಕ್ರಮ; ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರ: ಉ.ರಾ. ನಾಗೇಶ್*

ಸೆಪ್ಟೆಂಬರ್ 11, 2026

*ಪ್ರಮುಖ ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 11, 2026

*ಕೊಡಗು : ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 11, 2026

*ಮಡಿಕೇರಿಯಲ್ಲಿ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗಣ್ಯರಿಂದ ಗೌರವ ನಮನ*

ಸೆಪ್ಟೆಂಬರ್ 11, 2026

*ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ :  ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾಧಿಕಾರಿ ಸೋಮಖಶೇಖರ್*

ಸೆಪ್ಟೆಂಬರ್ 11, 2026

*ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲೆಯ ತ್ರೋಬಾಲ್ ತಂಡ ರನ್ನರ್ಸ್*

ಸೆಪ್ಟೆಂಬರ್ 11, 2026

ಸೋಮವಾರಪೇಟೆ ಹೋಮ್‌ಸ್ಟೇ ಅಸೋಸಿಯೇಷನ್‌ನಿಂದ ಕಾಸರಗೋಡು–ಕಣ್ಣೂರು ಅಧ್ಯಯನ ಪ್ರವಾಸ*

ಸೆಪ್ಟೆಂಬರ್ 11, 2026

*ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಡಿಕೇರಿಯಲ್ಲಿ ಬೃಹತ್ ರೈತ ಪ್ರತಿಭಟನೆ*

ಸೆಪ್ಟೆಂಬರ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.