ಮಡಿಕೇರಿ ಆ.9 NEWS DESK : ನಗರದ ಕೊಡಗು ವಿದ್ಯಾಲಯದ ದೈಹಿಕ ಶಿಕ್ಷಕರಾದ ದಿನೇಶ್ ಮತ್ತು ಪಾರ್ವತಿ ಅವರನ್ನು ಶಾಲಾ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 2012 ರಿಂದ ಶಾಲೆಯ ವಿದ್ಯಾರ್ಥಿಗಳಿಗೆ ಹಾಕಿ ಕ್ರೀಡೆಯಲ್ಲಿ ಗೆಲುವಿನ ಹಾದಿಗ ಸೂಕ್ತ ಮಾಗ೯ದ೯ಶನ ಮಾಡುತ್ತಾ ಬಂದಿರುವ ದಿನೇಶ್, ಈ ವರ್ಷವೂ ಶಾಲೆಯ ಹಾಕಿ ತಂಡವು ದಕ್ಷಿಣ ವಲಯದಲ್ಲಿ ಜಯಗಳಿಸುವ ಮೂಲಕ ರಾಷ್ಟ್ರೀಯ ಮಟ್ಟದ ವಿಜೇತರಾಗಿ ಐತಿಹಾಸಿಕ ಸಾಧನೆ ಮಾಡಲು ಕಾರಣರಾಗಿದ್ದಾರೆ. ಈ ವರ್ಷ ದಿನೇಶ್ ಅವರ ಮಾರ್ಗದರ್ಶನದಲ್ಲಿ ಬಾಲಕರು ಮತ್ತು ಬಾಲಕಿಯರು ದ್ವಿತೀಯ ಸ್ಥಾನ ಪಡೆದು ಭೂಪಾಲದಲ್ಲಿ ನಡೆಯುವ ರಾಷ್ಟ್ರೀಯ ಹಾಕಿ ಟೂರ್ನಿಗೆ ಸಜ್ಜಾಗಿದ್ದಾರೆ. ಹಾಕಿ ಇಂಡಿಯಾ ಸೆಮಿನಾರ್ನಲ್ಲಿ ಲೆವೆಲ್ ಒನ್ ತರಬೇತಿದಾರರಾಗಿ ಗುರುತಿಸಿಕೊಂಡಿರುವ ದಿನೇಶ್, ರಾಜ್ಯ ಮಟ್ಟದ ಪಂದ್ಯಗಳಲ್ಲಿ ಅಂಪೈರ್ ಆಗಿ ಕೂಡ ಕಾರ್ಯನಿರ್ವಹಿಸುತ್ತಿದ್ದಾರೆ. ಶಾಲೆಯ ರಿಂಕ್ ಹಾಕಿ ವಿಜೇತ ತಂಡದ ಆಟಗಾರರನ್ನೂ ಈ ಸಂದರ್ಭ ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಸುಮಿತ್ರಾ ಸನ್ಮಾನಿಸಿದರು. ಅಂತೆಯೇ ಕ್ರೀಡಾ ತರಬೇತುಗಾರರಾದ ಪಾರ್ವತಿ ಅವರಿಗೂ ಪ್ರಶಂಸನಾ ಪತ್ರ ನೀಡಲಾಯಿತು.









