

ಸುಂಟಿಕೊಪ್ಪ ಆ.10 NEWS DESK : ಜಿಲ್ಲೆಯಾದ್ಯಂತ ನಾಗಾರಪಂಚಮಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕೊಡಗರಹಳ್ಳಿಯಲ್ಲಿರುವ ಶ್ರೀ ಬೈತೂರಪ್ಪ, ಪೊವ್ವೆದಿ ಬಸವೇಶ್ವರ ದೇವಾಲಯದ ಆವರಣದಲ್ಲಿ ಇರುವ ನಾಗಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತವಾಗಿ ವಿಶೇಷ ಪೂಜೆ ನಡೆಯಿತು. ದೇವಾಲಯದ ಮುಖ್ಯ ಆರ್ಚಕರಾದ ನರಸಿಂಹಭಟ್, ಸಹಾರ್ಚಕರಾದ ರಾಮಶರ್ಮ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಈ ಸಂದರ್ಭ ದೇವಾಲಯ ಟ್ರಸ್ಟ್ ಅಧ್ಯಕ್ಷ ಕೆ.ಎನ್.ಪೂಣ್ಣಚ್ಚ, ಕಾರ್ಯದರ್ಶಿ ಬಿ.ಸಿ.ದಿನೇಶ್, ಖಜಾಂಚಿ ಡಾ.ತಮ್ಮಯ್ಯ, ಟ್ರಸ್ಟಿಗಳು, ದೇವಾಲಯ ಪಾರುಪಾತ್ಯದಾರ ಅಕ್ಕಪಂಡ ರಾಜೇಂದ್ರ ಸೇರಿದಂತೆ ನೂರಾರು ಭಕ್ತಾಧಿಗಳು ಶೃದ್ಧಾಭಕ್ತಿಯಿಂದ ಪಾಲ್ಗೊಂಡಿದ್ದರು. ಸುಂಟಿಕೊಪ್ಪ ಪನ್ಯ ಗ್ರಾಮದ ಶ್ರೀ ಮಳೂರು ಬೆಳ್ಳಾರಿಕ್ಕಮ್ಮ ದೇವಾಲಯದಲ್ಲಿ ಹಾಗೂ ಪಟ್ಟಣ ವ್ಯಾಪ್ತಿಯ ವಿವಿಧ ದೇವಾಲಯ ದೇವಾಲಯಗಳಲ್ಲಿ ನಾಗಾರಪಂಚಮಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸಿ ನಾಗನ ಕಲ್ಲಿಗೆ ಹಾಲಿನ ಅಭಿಷೇಕ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.