ಕಾರ್ಕಳ ಆ.13 NEWS DESK : ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ‘ ನಶಾಮುಕ್ತ ಭಾರತ ಅಭಿಯಾನ ‘ 5ನೇ ವರ್ಷದ ಆಚರಣೆಯ ಪ್ರಯುಕ್ತವಾಗಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಡ್ರಗ್ಸ್ ವಿರುದ್ಧ ಸಾಮೂಹಿಕ ಪ್ರತಿಜ್ಞಾವಿಧಿ ಕಾರ್ಯಕ್ರಮ ನಡೆಯಿತು. ಮಾದಕ ವ್ಯಸನವು ವ್ಯಕ್ತಿ, ಕುಟುಂಬ ಮತ್ತು ಸಮಾಜದ ಮೇಲೆ ಯಾವ ರೀತಿಯ ವಿನಾಶಕಾರಿ ಪರಿಣಾಮ ಬೀರಿದೆ ಎಂಬ ಅಂಶಗಳನ್ನು ತಿಳಿಸಿ, ಜಾಗೃತಿ ಮೂಡಿಸಲಾಯಿತು. ಈ ಸಂದರ್ಭ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವೃಂದದವರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಜರಿದ್ದರು. ಹಿಂದಿ ಭಾಷಾ ವಿಭಾಗ ಮುಖ್ಯಸ್ಥ ವಿನಾಯಕ ಜೋಗ್ ಪ್ರತಿಜ್ಞಾವಿಧಿ ಬೋಧಿಸಿದರು.









