ಮಡಿಕೇರಿ ಆ.22 NEWS DESK : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಮಡಿಕೇರಿಯ ಮಧುಕೃಪಾದಲ್ಲಿ ಆ.25 ರಂದು ಜಿಲ್ಲೆಯ ಪದವಿ ಪೂರ್ವ ಮಕ್ಕಳಿಗೆ ಸ್ವಾತಂತ್ರ್ಯೋತ್ಸವದ ಪ್ರಯುಕ್ತ “ಭಾರತೀಯತೆಯ ಹಿರಿಮೆ-ಗರಿಮೆ” ವಿಷಯದಲ್ಲಿ ಪ್ರಬಂಧ ಸ್ಪರ್ಧೆ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಸ್ಪರ್ಧೆ ಆರಂಭವಾಗಲಿದ್ದು, ಸ್ಪರ್ಧಾರ್ಥಿಗಳು ಸಮಯಕ್ಕೆ ಸರಿಯಾಗಿ ಹಾಜರಿರಬೇಕು. ತೀರ್ಪುಗಾರರ ತೀರ್ಮಾನವೇ ಅಂತಿಮ. ನೋಂದಣಿ ಮತ್ತು ಹೆಚ್ಚಿನ ಮಾಹಿತಿಗಾಗಿ ಅ.ಭಾ.ಸಾ.ಪ ಜಿಲ್ಲಾ ಸಹ ಕಾರ್ಯದರ್ಶಿ ಚಂದನ್ ನಂದರಬೆಟ್ಟು 87626 32314 ಹಾಗೂ ಮಕ್ಕಳ ಪ್ರಕಾರ ಪ್ರಮುಖ್ ಹೇಮಂತ್ ಪಾರೇರ 97433 53597 ಅವರನ್ನು ಸಂಪರ್ಕಿಸುವಂತೆ ಕೋರಲಾಗಿದೆ.









