Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ*
  • *ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*
  • *ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*
  • *ವಿರಾಜಪೇಟೆಯಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*
  • *ಹಿಂದೂ ಜನ ಜಾಗೃತಿ ಸಭೆ : ನಾಪೋಕ್ಲುವಿನಲ್ಲಿ ಶಾಂತಿ ಸಭೆ*
  • *ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*
  • *ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*
  • *ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*
  • *ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಸಾರ್ವಜನಿಕರ ಗಮನಕ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಿ.ದೇವರಾಜ ಅರಸು ಅವರ 109 ನೇ ಜನ್ಮ ದಿನಾಚರಣೆ : ಮೌನಕ್ರಾಂತಿಯ ಹರಿಕಾರ ಡಿ.ದೇವರಾಜ ಅರಸು : ಎಡಿಸಿ ಆರ್.ಐಶ್ವರ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಡಿ.ದೇವರಾಜ ಅರಸು ಅವರ 109 ನೇ ಜನ್ಮ ದಿನಾಚರಣೆ : ಮೌನಕ್ರಾಂತಿಯ ಹರಿಕಾರ ಡಿ.ದೇವರಾಜ ಅರಸು : ಎಡಿಸಿ ಆರ್.ಐಶ್ವರ್ಯ*

ಆಗಷ್ಟ್ 22, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.22 NEWS DESK : ರಾಜ್ಯದ ಬಡವರು, ನಿರ್ಗತಿಕರು, ಅಲೆಮಾರಿಗಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಶ್ರಮಿಸಿದ ಡಿ.ದೇವರಾಜ ಅರಸು ಅವರು ವಿನೂತನ ಹಾಗೂ ವಿಶಿಷ್ಟ ವ್ಯಕ್ತಿತ್ವವನ್ನು ಹೊಂದಿದ್ದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಪರಿವರ್ತನೆಯ ಹರಿಕಾರ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯವೆಂದು ಮರು ನಾಮಕರಣ ಮಾಡಿದರು. ಬಡವರ ಹಾಗೂ ದುರ್ಬಲರ ಬಗ್ಗೆ ಅಪಾರ ಕಾಳಜಿ ಹಾಗೂ ಕಳಕಳಿ ಹೊಂದಿದ್ದರು ಎಂದು ಆರ್.ಐಶ್ವರ್ಯ ತಿಳಿಸಿದರು. ವಿದ್ಯಾರ್ಥಿ ನಿಲಯಗಳ ಆರಂಭ, ಭಾಗ್ಯ ಜ್ಯೋತಿ, ಹಿಂದುಳಿದ ವರ್ಗಗಳಿಗೆ ಭೂಮಿ ಹಂಚಿಕೆ ಹೀಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಸಮಾಜದಲ್ಲಿ ಬದಲಾವಣೆ ಮತ್ತು ಸುಧಾರಣೆಗೆ ಶ್ರಮಿಸಿದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು. ಸಮಾಜದಲ್ಲಿ ಕಟ್ಟಕಡೆಯವರು ಸಹ ಮುಖ್ಯವಾಹಿನಿಗೆ ಬರಬೇಕು ಎಂದು ಡಿ.ದೇವರಾಜ ಅರಸು ಅವರ ಆಶಯವಾಗಿತ್ತು. ಆ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಿದ್ದರು ಎಂದು ಆರ್.ಐಶ್ವರ್ಯ ಅವರು ನುಡಿದರು. ಆಲೂರು ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಕೆ.ಆರ್.ಭಾರತಿ ಅವರು ಮಾತನಾಡಿ ಬಡವರ ಸಂಕಷ್ಟಕ್ಕೆ ಸ್ಪಂದಿಸಿದ ಕೀರ್ತಿ ಅರಸು ಅವರಿಗೆ ಸಲ್ಲುತ್ತದೆ. ಹಿಂದುಳಿದ ವರ್ಗಗಳ ಹರಿಕಾರರಾಗಿ ರಾಜ್ಯದಲ್ಲಿ ಪರಿವರ್ತನೆಯತ್ತ ಹೆಜ್ಜೆ ಹಾಕಿದರು. ಸಮಾನತೆಯ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದರು ಎಂದು ಅವರು ತಿಳಿಸಿದರು.
ಸರ್ಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಬೇಕು ಎಂದು ಡಿ.ದೇವರಾಜ ಅರಸು ಅವರ ಇಚ್ಛಾಶಕ್ತಿ ಹಾಗೂ ಬದ್ಧತೆಯಾಗಿತ್ತು, ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೃಷಿಕರು, ಬಡವರು, ನಿರ್ಗತಿಕರು, ಇತರರು ಓಡಾಡುವಂತೆ ಮಾಡಿದರು. ಸಾಲ ಮನ್ನಾ ಯೋಜನೆ, ಜೀತ ಪದ್ಧತಿ ನಿರ್ಮೂಲನೆ, ಮಲ ಹೊರುವ ಪದ್ಧತಿ ನಿಷೇಧ, ವೃದ್ಧಾಪ್ಯ ವೇತನ ಯೋಜನೆ ಜಾರಿ ಹೀಗೆ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದರು ಎಂದು ತಿಳಿಸಿದರು. ಹಾವನೂರು ಆಯೋಗ ರಚಿಸುವ ಮೂಲಕ ಎಲ್ಲಾ ವರ್ಗಗಳಿಗೂ ಮೀಸಲಾತಿ ತಲುಪಿಸಲು ಪ್ರಯತ್ನಿಸಿದರು. ಸಹಕಾರ ಸಂಘಗಳ ಸ್ಥಾಪನೆ, ಬೆಂಗಳೂರಿನಲ್ಲಿ ಎಲೆಕ್ಟ್ರಾನಿಕ್ ಸಿಟಿ ಆರಂಭ, ಬೆಂಗಳೂರಿಗೆ ಕಾವೇರಿ ನೀರು ಒದಗಿಸಿದ್ದು, ಕನ್ನಡ ನಾಡು ನುಡಿ ಬಗ್ಗೆ ಅಪಾರ ಅಭಿಮಾನವನ್ನು ಡಿ.ದೇವರಾಜ ಅರಸು ಅವರು ಹೊಂದಿದ್ದರು ಎಂದು ಭಾರತಿ ಅವರು ವಿವರಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಮಾತನಾಡಿ ಡಿ.ದೇವರಾಜ ಅರಸು ಅವರು ಮೌನಕ್ರಾಂತಿಯ ಹರಿಕಾರ ಎಂದರೆ ತಪ್ಪಾಗಲಾರದು ಎಂದು ನುಡಿದರು. ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬಡವರ್ಗದವರಿಗೆ ಕಾರ್ಯಕ್ರಮಗಳನ್ನು ರೂಪಿಸಿದ್ದರು. ಅವರ ದೂರದೃಷ್ಟಿ ಹಾಗೂ ದಾರ್ಶನಿಕತ್ವದಿಂದ ಇಂದು ಹಲವರು ಇತರರಂತೆ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ ಎಂದು ಟಿ.ಪಿ.ರಮೇಶ್ ಅವರು ನುಡಿದರು. ಸಣ್ಣ ಸಣ್ಣ ಸಮಾಜದ ಜನರನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಿದರು. ಅಪಾರ ದಾರ್ಶನಿಕ ಹಾಗೂ ಸಮಾಜ ಮುಖಿ ವ್ಯಕ್ತಿತ್ವವನ್ನು ಹೊಂದಿದ್ದ ಅರಸು ಅವರು ಅವಕಾಶ ವಂಚಿತರ ಕಣ್ಮಣಿ ಎಂದು ಬಣ್ಣಿಸಿದರು. ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಚಿತ್ರಕಲೆ, ಪ್ರಬಂಧ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು. ಉತ್ತಮ ನೌಕರರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಹೊನ್ನೇಗೌಡ ಅವರು ಮಾತನಾಡಿದರು. ಪ್ರಮುಖರಾದ ಮೇದಪ್ಪ, ಕೆ.ಟಿ.ಬೇಬಿ ಮ್ಯಾಥ್ಯೂ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜ, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಪೌರಾಯುಕ್ತರಾದ ವಿಜಯ್, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕಿ ಮಹಾದೇವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕೃಷ್ಣಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯವಸ್ಥಾಪಕರಾದ ಶಿವಶಂಕರ ಇತರರು ಇದ್ದರು. ಭಾಗಮಂಡಲದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಲೋಕೇಶ್ ಅವರು ಸ್ವಾಗತಿಸಿ, ನಿರೂಪಿಸಿದರು. ಆಲೂರು ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು. ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಕಾಶ್ ವಂದಿಸಿದರು.  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ*

ಮಾರ್ಚ್ 31, 2026

*ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*

ಮಾರ್ಚ್ 31, 2026

*ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*

ಮಾರ್ಚ್ 31, 2026

*ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*

ಮಾರ್ಚ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.31 : ತಿತಿಮತಿ ಅರಣ್ಯ ವಲಯಕ್ಕೆ ಒಳಪಡುವ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆ ಹಿಂಡನ್ನು ಮರಳಿ ಅರಣ್ಯಕ್ಕೆ…

*ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*

ಮಾರ್ಚ್ 31, 2026

*ವಿರಾಜಪೇಟೆಯಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 31, 2026

*ಹಿಂದೂ ಜನ ಜಾಗೃತಿ ಸಭೆ : ನಾಪೋಕ್ಲುವಿನಲ್ಲಿ ಶಾಂತಿ ಸಭೆ*

ಮಾರ್ಚ್ 31, 2026

*ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*

ಮಾರ್ಚ್ 31, 2026

*ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*

ಮಾರ್ಚ್ 31, 2026

*ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*

ಮಾರ್ಚ್ 31, 2026

*ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 31, 2026

*ಸಾರ್ವಜನಿಕರ ಗಮನಕ್ಕೆ*

ಮಾರ್ಚ್ 31, 2026

*ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ*

ಮಾರ್ಚ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.