Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ*
  • *ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*
  • *ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*
  • *ವಿರಾಜಪೇಟೆಯಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*
  • *ಹಿಂದೂ ಜನ ಜಾಗೃತಿ ಸಭೆ : ನಾಪೋಕ್ಲುವಿನಲ್ಲಿ ಶಾಂತಿ ಸಭೆ*
  • *ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*
  • *ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*
  • *ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*
  • *ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಸಾರ್ವಜನಿಕರ ಗಮನಕ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿಗೆ ಪ್ರತ್ಯೇಕ ವನ್ಯಜೀವಿ ಮತ್ತು ಭೂ ದಾಖಲಾತಿ ಯೋಜನೆ ರೂಪಿಸಲು ಕೊಡವಾಮೆರ ಕೊಂಡಾಟ ಸಂಘಟನೆ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿಗೆ ಪ್ರತ್ಯೇಕ ವನ್ಯಜೀವಿ ಮತ್ತು ಭೂ ದಾಖಲಾತಿ ಯೋಜನೆ ರೂಪಿಸಲು ಕೊಡವಾಮೆರ ಕೊಂಡಾಟ ಸಂಘಟನೆ ಒತ್ತಾಯ*

ಆಗಷ್ಟ್ 22, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.22 NEWS DESK  : ರಾಜ್ಯದ ಭೂಪಟದಲ್ಲಿ ತನ್ನದೇ ಆದ ಜೀವವೈವಿಧ್ಯತೆಯನ್ನು ಹೊಂದಿರುವ ಕೊಡಗು ಜಿಲ್ಲೆಗೆ ಪ್ರತ್ಯೇಕವಾದ ವನ್ಯಜೀವಿ ಮತ್ತು ಭೂ ಹಿಡುವಳಿ ದಾಖಲೀಕರಣಕ್ಕೆ ಪೂರಕವಾಗಿ ಪ್ರತ್ಯೇಕ ಯೋಜನೆಯೊಂದನ್ನು ರೂಪಿಸುವಂತೆ, ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಅವರಿಗೆ ಕೊಡವಾಮೆರ ಕೊಂಡಾ ಸಂಘಟನೆ ಮನವಿ ಸಲ್ಲಿಸಿದೆ.
ಸಂಕೇತ್ ಪೂವಯ್ಯ ಅವರ ವಿರಾಜಪೇಟೆ ನಿವಾಸದಲ್ಲಿ ಕೊಡವಾಮೆರ ಕೊಂಡಾಟ ಸಂಘಟನೆಯ ಅದ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ಅವರ ನೇತೃತ್ವದಲ್ಲಿ ಸಂಕೇತ್ ಪೂವಯ್ಯ ಅವರನ್ನು ಪುಸ್ತಕ ನೀಡುವ ಮೂಲಕ ಅಭಿನಂದಿಸಿ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಸಂಕೇತ್ ಪೂವಯ್ಯ ಅವರು, ಸಂಘಟನೆಯೊಂದಿಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಸಂಘಟನೆಯ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ, ಕರ್ನಾಟಕದಲ್ಲಿ ವಿಭಿನ್ನ ಮೇಲ್ಮೈ ಲಕ್ಷಣ ಹೊಂದಿರುವ ಕೊಡಗು, ಪ್ರಾಕೃತಿಕವಾಗಿ, ಬೌಗೋಳಿಕವಾಗಿಯೂ ಇತರ ಎಲ್ಲಾ ಜಿಲ್ಲೆಗಳಿಗಿಂತಲೂ ಭಿನ್ನ. ಹಾಗೇ ಇಲ್ಲಿಯ ಜನ, ಜಾನುವಾರು, ಕೃಷಿ, ತೋಟಗಾರಿಕೆ ಮತ್ತು ವನ್ಯ ಜೀವ ಸಂಕುಲವೂ ವಿಭಿನ್ನವೇ. ಕೊಡಗಿನ ಮೂಲ ನಿವಾಸಿಗಳು ತಲೆತಲಾಂತರದಿಂದ ಅರಣ್ಯ ಹಾಗೂ ಭೂಮಿಯ ಮಹತ್ವವನ್ನು ಅರಿತು, ತಮ್ಮದೇ ಆದ ಭಾವನಾತ್ಮಕ ಶೈಲಿಯಲ್ಲಿ ಪರಿಸರವನ್ನ ರಕ್ಷಿಸಿಕೊಂಡು ಬರುತ್ತಿದ್ದಾರೆ. ಜೊತೆಗೆ ತಮ್ಮ ಬೆಳೆ ಮತ್ತು ಜೀವಗಳನ್ನೂ ಕೂಡ ಅಷ್ಟೇ ಪ್ರಾಮುಖ್ಯತೆಯಿಂದ ಕಾಪಾಡಿಕೊಂಡಿದ್ದಾರೆ. ಆದರೆ ಇತ್ತೀಚಿಗಿನ ಸರ್ಕಾರಗಳ ಹಲವು ನಿಯಮಗಳಿಂದಾಗಿ ಮತ್ತು ನಿರಂತರವಾಗಿ ಭೂ ಒತ್ತುವರಿ, ವಲಸೆ ಮತ್ತು ಪ್ರಕೃತಿಗೆ ವಿರುದ್ದವಾದ ಅಭಿವೃದ್ದಿ ಕಾರ್ಯಗಳಿಂದ ಕೊಡಗಿನಲ್ಲಿ ಮಾನವ, ವನ್ಯ ಪ್ರಾಣಿ ಸಂಘರ್ಷಗಳು ಹೆಚ್ಚಾಗಿದ್ದು, ನಿರಂತರ ಜೀವ ಹಾನಿ ನಡೆಯುತ್ತಿದೆ. ದಕ್ಷಿಣ ಕೊಡಗು ಭಾಗದಲ್ಲಿ ಹುಲಿ ಆನೆಯ ಸಮಸ್ಯೆಯಾದರೆ ಉತ್ತರ ಕೊಡಗು ಭಾಗದಲ್ಲಿ ಕಾಡುಹಂದಿಯ ಕಾರಣದಿಂದ ಕೃಷಿ ಚಟುವಟಿಕೆಗೆ ಹಿನ್ನಡೆಯಾಗಿದೆ. ಜೊತೆಗೆ ಕೊಡಗಿನಲ್ಲಿ ಉಂಟಾಗಿರುವ ಭೂ ಮಾಲಿಕತ್ವ, ಜಮ್ಮ ಹಿಡುವಳಿ ಗೊಂದಲ, ಅತಿಯಾದ ವಾಣಿಜ್ಯೀಕರಣ, ಯುವ ಸಮುದಾಯವನ್ನು ಕೃಷಿಯ ಜೊತೆಗೆ ಕೊಡಗಿನಿಂದಲೂ ವಿಮುಖರಾಗುವಂತೆ ಮಾಡಿದೆ. ಅರಣ್ಯ ವ್ಯಾಪ್ತಿಯಲ್ಲಿ, ಕೊಡಗಿನ ವಾತವಾರಣಕ್ಕೆ ಪೂರಕವಾದ, ವನ್ಯಪ್ರಾಣಿಗಳಿಗೆ ಅಗತ್ಯ ಆಹಾರ ಒದಗಿಸಬಲ್ಲ ಮರಗಳನ್ನು ಬೆಳೆಸುವ ಜೊತೆಗೆ ಕುಡಿವ ನೀರಿನ ವ್ಯವಸ್ಥೆಯನ್ನು ಅರಣ್ಯದೊಳಗೇ ಒದಗಿಸಿದರೆ, ವನ್ಯ ಪ್ರಾಣಿಗಳು ನಾಡಿಗೆ ಬರುವುದನ್ನು ತಡೆಯಬಹುದು. ಹಾಗೇ ಜಮ್ಮ ಮತ್ತು ಸಾಗು ಭೂಮಿಯಲ್ಲಿ ಇರುವ ಪಟ್ಟೆದಾರಿಕೆ ಮತ್ತು ಆರ್.ಟಿ.ಸಿ. ಗೊಂದಲವನ್ನು ಸರಿಪಡಿಸಿದರೆ, ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಕೃಷಿ, ಹೈನುಗಾರಿಕೆಯ ಕಾರ್ಯದಲ್ಲಿ ಯುವಕರು ಆಸಕ್ತಿಯಿಂದ ತೊಡಗಿಸಿಕೊಳ್ಳಲು ಸಹಕಾರಿಯಾಗಲಿದೆ. ತಾವು ಈ ವಿಚಾರಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಕೊಡಗಿನ ರೈತರ ಹಿತದೊಂದಿಗೆ, ವನ್ಯಜೀವಿ, ಪರಿಸರದ ಉಳಿವಿಗೂ ಪ್ರತೈಕವಾದ ಯೋಜನೆಯನ್ನು ಜಾರಿಗೊಳಿಸಬೇಕೆಂದು ಮನವಿ ಮಾಡಿದರು. ನಂತರ ಮಾತನಾಡಿದ ಸಂಕೇತ್ ಪೂವಯ್ಯ ಅವರು, ತಮ್ಮ ಬೇಡಿಕೆ ಈ ನೆಲದ ಉಳಿವಿಗೆ ಪೂರಕವಾಗಿದ್ದು, ಇದರ ಅನುಷ್ಠಾನ ಅನಿವಾರ್ಯ ಅಗತ್ಯವಾಗಿದೆ. ಈ ವಿಚಾರವಾಗಿ, ಮುಖ್ಯಮಂತ್ರಿಗಳು, ಸಚಿವರು ಮತ್ತು ಶಾಸಕರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುತ್ತೇನೆ. ಎಲ್ಲರೂ ಒಟ್ಟಾಗಿ ಕೊಡಗಿನ ಒಳಿತಿಗೆ ಶ್ರಮಿಸೋಣ ಎಂದರು. ಸಭೆಯಲ್ಲಿ ಕೊಡವಾಮೆರ ಕೊಂಡಾಟ ಸಂಘಟನೆಯ ಕಾರ್ಯದರ್ಶಿ ಕುಂಞಿರ ಗಿರೀಶ್ ಭೀಮಯ್ಯ, ಸಿ.ಎನ್.ಸಿ. ಅಧ್ಯಕ್ಷ ನಂದಿನೆರವಂಡ ನಾಚಪ್ಪ, ಕರಿನೆರವಂಡ ಡ್ಯಾನಿಕುಶಾಲಪ್ಪ, ಕರಿನೆರವಂಡ ಜಿತನ್ ಸೇರಿದಂತೆ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ*

ಮಾರ್ಚ್ 31, 2026

*ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*

ಮಾರ್ಚ್ 31, 2026

*ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*

ಮಾರ್ಚ್ 31, 2026

*ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*

ಮಾರ್ಚ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.31 : ತಿತಿಮತಿ ಅರಣ್ಯ ವಲಯಕ್ಕೆ ಒಳಪಡುವ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆ ಹಿಂಡನ್ನು ಮರಳಿ ಅರಣ್ಯಕ್ಕೆ…

*ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*

ಮಾರ್ಚ್ 31, 2026

*ವಿರಾಜಪೇಟೆಯಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 31, 2026

*ಹಿಂದೂ ಜನ ಜಾಗೃತಿ ಸಭೆ : ನಾಪೋಕ್ಲುವಿನಲ್ಲಿ ಶಾಂತಿ ಸಭೆ*

ಮಾರ್ಚ್ 31, 2026

*ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*

ಮಾರ್ಚ್ 31, 2026

*ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*

ಮಾರ್ಚ್ 31, 2026

*ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*

ಮಾರ್ಚ್ 31, 2026

*ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 31, 2026

*ಸಾರ್ವಜನಿಕರ ಗಮನಕ್ಕೆ*

ಮಾರ್ಚ್ 31, 2026

*ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ*

ಮಾರ್ಚ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.