ಮಡಿಕೇರಿ ಆ.23 NEWS DESK : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಪೂರ್ವ ಸಿದ್ಧತೆಗಾಗಿ ನಗರದ ಶ್ರೀಪೇಟೆ ರಾಮಮಂದಿರದಲ್ಲಿ ದಸರಾ ಸಮಿತಿ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಸಮಿತಿಯ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಮೂಡ ಅಧ್ಯಕ್ಷ ಹಾಗೂ ನಗರಸಭಾ ಸದಸ್ಯ ಬಿ.ವೈ.ರಾಜೇಶ್, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಸದಸ್ಯ ಅರುಣ್ ಶೆಟ್ಟಿ, ಮೂಡ ಸದಸ್ಯ ಕಾನೆಹಿತ್ಲು ಮೊಣ್ಣಪ್ಪ, ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಅನಿಲ್ ಹೆಚ್.ಟಿ, ಪ್ರಮುಖರಾದ ಸತೀಶ್ ಪೈ, ಸದಾ ಮುದ್ದಪ್ಪ, ಬೊಳ್ಳಜಿರ ಬಿ.ಅಯ್ಯಪ್ಪ ಹಾಗೂ ಸಮಿತಿಯ ಪದಾಧಿಕಾರಿಗಳು ದಸರಾ ಉತ್ಸವದ ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದರು. ನಗರಸಭೆ ಸದಸ್ಯರು, ದಶಮಂಟಪ ಸಮಿತಿಯ ಪದಾಧಿಕಾರಿಗಳು, ದಸರಾ ಉತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು.









