ಮಡಿಕೇರಿ NEWS DESK ಆ.30 : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ರೈತ ವಿರೋಧಿ ನೀತಿಗಳನ್ನು ಜಾರಿಗೆ ತರುವ ಮೂಲಕ ವಿನಾಕಾರಣ ಕಿರುಕುಳ ನೀಡುತ್ತಿದೆ. ಇದರಿಂದ ಬಡ ರೈತರು ಆತಂಕ ಎದುರಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಟೀಕಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವನ್ಯಜೀವಿಗಳ ಉತ್ಪನ್ನಗಳನ್ನು ಮರಳಿಸಬೇಕು. ತಪ್ಪಿದಲ್ಲಿ ಕೇಸ್ ದಾಖಲಿಸುವುದಾಗಿ ಸುತೋಲೆ ಹೊರಡಿಸಿತ್ತು. ನಂತರ ಖಾಸಗಿ ಜಮೀನಗಳಲ್ಲಿರುವ ಮರಗಳ ಪಟ್ಟಿ ನೀಡಬೇಕೆಂದು ಸೂಚಿಸಿತು. ಆ ಮೂಲಕ ತೋಟದ ಮಾಲೀಕರು ನೆಟ್ಟು ಬೆಳೆಸಿದ ಮರಗಳ ಮೇಲೆ ಸರ್ಕಾರ ಹಕ್ಕು ಸ್ಥಾಪಿಸುವ ಸಂಚು ನಡೆಸಿತು. ಇತ್ತೀಚೆಗೆ ಸಿ ಮತ್ತು ಡಿ ಭೂಮಿಯನ್ನು ಸರ್ಕಾರಕ್ಕೆ ಹಿಂದಿರುಗಿಸುವAತೆ ಸುತ್ತೋಲೆಗಳನ್ನು ಹೊರಡಿಸಲಾಗಿದೆ. ಈ ಭೂಮಿಯಲ್ಲಿ ಅನೇಕ ವರ್ಷಗಳಿಂದ ರೈತರು ಕಾಫಿ, ಏಲಕ್ಕಿ ಬೆಳೆಸುವ ಮೂಲಕ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಸರ್ಕಾರ ಸುತ್ತೋಲೆಗಳನ್ನು ಹೊರಡಿಸುವ ಮೂಲಕ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದರು. ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಟೀಕಿಸಿದ ಅಪ್ಪಚ್ಚುರಂಜನ್, ಎಲ್ಲಾ ಹಗರಣಗಳ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಎಂದು ಆಗ್ರಹಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, “ಸಶಕ್ತ ಬಿಜೆಪಿ ವಿಕಸಿತ ಭಾರತ” ಎಂಬ ಧ್ಯೇಯ ವಾಕ್ಯದೊಂದಿಗೆ ಬಿಜೆಪಿ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಸೆ.1ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಪ್ರತಿ 5 ವರ್ಷಗಳಿಗೊಮ್ಮೆ ಬಿಜೆಪಿ ತನ್ನ ಸದಸ್ಯತ್ವ ಅಭಿಯಾನ ನಡೆಸುತ್ತಿದ್ದು, ವಿಶ್ವದಲ್ಲೇ 18 ಕೋಟಿ ಸದಸ್ಯರನ್ನು ಹೊಂದಿರುವ ಏಕೈಕ ದೊಡ್ಡ ಪಕ್ಷ ಬಿಜೆಪಿ ಎಂದು ಬಣ್ಣಿಸಿದರು. ಪಕ್ಷದ ರಾಷ್ಟಿçÃಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆಯಂತೆ ಈ ಬಾರಿಯ ಸದಸ್ಯತ್ವ ಅಭಿಯಾನದಲ್ಲಿ ಶೇ.30ರಿಂದ 40ಕ್ಕೆ ಸದಸ್ಯತ್ವ ಪ್ರಮಾಣ ಏರಿಕೆ ಮಾಡುವ ಗುರಿ ಹೊಂದಲಾಗಿದೆ. ಕೊಡಗು ಜಿಲ್ಲೆಯಲ್ಲಿ ಈ ಹಿಂದೆ 60 ಸಾವಿರ ಮಂದಿ ಬಿಜೆಪಿ ಸದಸ್ಯತ್ವ ಹೊಂದಿದ್ದು, ಇದನ್ನು ದ್ವಿಗುಣ ಮಾಡುವ ಗುರಿ ಇದೆ. ಈಗಾಗಲೇ ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಜಿಲ್ಲೆ ಮತ್ತು ತಾಲ್ಲೂಕುಗಳಿಗೆ ಸಂಚಾಲಕ ಹಾಗೂ ಸಹಸಂಚಾಲಕರನ್ನು ನೇಮಿಸಲಾಗಿದೆ. ಈ ಸದಸ್ಯತ್ವ ಉಚಿತವಾಗಿದ್ದು, 8800002024 ಮೊಬೈಲ್ ಸಂಖ್ಯೆಗೆ ಮಿಸ್ ಕಾಲ್ ಮಾಡುವ ಮೂಲಕ ಬಿಜೆಪಿ ಪಕ್ಷದ ಸದಸ್ಯರಾಗಬಹುದು ಎಂದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ವಕ್ತಾರರಾದ ತಳೂರು ಕಿಶೋರ್ ಕುಮಾರ್ ಹಾಗೂ ಬಿ.ಕೆ.ಅರುಣ್ ಕುಮಾರ್ ಉಪಸ್ಥಿತರಿದ್ದರು.










