ಮಡಿಕೇರಿ ಸೆ.3 NEWS DESK : ಕಳೆದ ಎರಡು ದಿನಗಳು ಸುರಿದ ಮಳೆಯಿಂದಾಗಿ ಶನಿವಾರಸಂತೆಯ ಗೌಡಳ್ಳಿ ಗ್ರಾಮ ಪಂಚಾಯತಿಗೆ ಸೇರಿದ ರಾಮನಹಳ್ಳಿ ಗ್ರಾಮದ ಸುರೇಶ್ ಎಂಬುವರ ಮನೆ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ದಿನಬಳಕೆಯ ವಸ್ತುಗಳು ಸಂಪೂರ್ಣವಾಗಿ ಹಾನಿಯಾಗಿದೆ. ಸರ್ಕಾರದಿಂದ ತಕ್ಷಣ ಪರಿಹಾರ ಕೊಡಬೇಕು ಹಾಗೂ ನೂತನ ಮನೆ ನಿರ್ಮಿಸಿಕೊಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಮನವಿ ಮಾಡಿದೆ.










