
ಮಡಿಕೇರಿ ಸೆ.3 NEWS DESK : ಪ್ರಸಕ್ತ (2024-25) ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೊಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 14 ರ ವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಅರ್ಜಿಯನ್ನು www.uahs.edu.in ವೆಬ್ಸೈಟ್ನಲ್ಲಿ ಎಲ್ಲಾ ಅಧಿಸೂಚನೆಗಳು ಶೀರ್ಷಿಕೆ ಅಡಿಯಲ್ಲಿ ಡೌನ್ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ್ 14 ರೊಳಗೆ ಸಲ್ಲಿಸಬಹುದಾಗಿದೆ. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾದ, ಕನಿಷ್ಠ ಶೇ.45 (ಕನಿಷ್ಠ ಶೇ.40 ಪ.ಜಾ ಮತ್ತು ಪ.ಪಂ/ಪ್ರವರ್ಗ-1) ಅಂಕಗಳೊಂದಿಗೆ ಉತ್ತಿರ್ಣರಾದ, 19 ವರ್ಷ ವಯಸ್ಸು ಮೀರದ ಆಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ.50 ರಷ್ಟು ಮೀಸಲಾತಿ ಇರುತ್ತದೆ. ಈ ಎರಡು ವರ್ಷದ ಡಿಪ್ಲೊಮಾ ಕೋರ್ಸ್ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನುವಿಜ್ಞಾನ, ರೇಷ್ಮೆ ಕೃಷಿ, ಜೇನುಕೃಷಿ ಹೀಗೆ ಕೃಷಿಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ನುರಿತ ವಿಜ್ಞಾನಿಗಳಿಂದ ಭೋಧನೆ ಇರುತ್ತದೆ. ಹಾಗೆಯೇ ಕೃಷಿ ರಂಗದ ಪ್ರಾಯೋಗಿಕ ಪರಿಚಯ/ ಅನುಭವ ಆಧಾರಿತ ಕಲಿಕೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ ಎಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಸಚಿವರು ತಿಳಿಸಿದ್ದಾರೆ.










