
ಮಡಿಕೇರಿ NEWS DESK ಸೆ.7 : ಮಡಿಕೇರಿ ನಗರದ ಕನ್ನಂಡಬಾಣೆ ಬಡಾವಣೆಯ ಶ್ರೀದೃಷ್ಟಿ ಗಣಪತಿ ದೇವಾಲಯದಲ್ಲಿ ಶ್ರೀಗಣೇಶ ಚತುರ್ಥಿ ಶ್ರದ್ಧಾಭಕ್ತಿಯಿಂದ ಜರುಗಿತು. ಹೋಮ ಹವನಾದಿ, ವಿವಿಧ ಧಾರ್ಮಿಕ ಕೈಂಕರ್ಯ, ಅಭಿಷೇಕ, ಅಲಂಕಾರ ಪೂಜೆ, ಅರ್ಚನೆ, ಮಹಾಪೂಜೆಗೆ ನೂರಾರು ಭಕ್ತರು ಸಾಕ್ಷಿಯಾದರು. ಭಕ್ತರಿಗೆ ಪ್ರಸಾದ ಹಾಗೂ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.








