
ಮಡಿಕೇರಿ NEWS DESK ಸೆ.7 : ನಗರದ ಶ್ರೀಚೌಡೇಶ್ವರಿ ದೇವಾಲಯದಲ್ಲಿ ಶ್ರೀಗಣೇಶ ಚತುರ್ಥಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮೆರವಣಿಗೆಯ ಮೂಲಕ ಗಣಪನ ಮೂರ್ತಿಯನ್ನು ತಂದು ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಯಿತು. ಮೆರಣಿಗೆ ಸಂದರ್ಭ ಸ್ಥಳೀಯ ನಿವಾಸಿಗಳು ವಿಘ್ನ ನಿವಾರಕನಿಗೆ ಪೂಜೆ ಸಲ್ಲಿಸಿದರು. ಮಹಾ ಮಂಗಳಾರತಿಯ ನಂತರ ಭಕ್ತರಿಗೆ ಪ್ರಸಾದ ವಿನಿಯೋಗವಾಯಿತು. ಪ್ರಧಾನ ಅರ್ಚಕ ಸತ್ಯೇಶ್ ಭಟ್ ಅವರ ನೇತೃತ್ವದಲ್ಲಿ ಗೌರಿ ಹಾಗೂ ಗಣೇಶನಿಗೆ ಪೂಜಾ ಕೈಂಕರ್ಯಗಳು ನಡೆದವು.









