ಮಡಿಕೇರಿ ಸೆ.9 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಗೋಣಿಕೊಪ್ಪಲು ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ಕಲಾವಿದ ದಿ. ವಿ.ಟಿ ಶ್ರೀನಿವಾಸ್ ನೆನಪು, ಗಾನ ಮತ್ತು ನುಡಿ ನಮನ ಕಾರ್ಯಕ್ರಮವು ಗೋಣಿಕೊಪ್ಪಲು ಪ್ರೌಢಶಾಲಾ ಸಭಾಂಗಣದಲ್ಲಿ ಸೆ.11 ರಂದು ನಡೆಯಲಿದೆ. ಅಂದು ಬೆಳಿಗ್ಗೆ 11 ಗಂಟೆಗೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಪೊನ್ನಂಪೇಟೆಯ ನೀನಾದ ಸಂಗೀತ ನೃತ್ಯ ಸಂಸ್ಥೆಯ ಅಧ್ಯಕ್ಷರಾದ ಚೇಂದಿರ ನಿರ್ಮಲ ಬೋಪಣ್ಣ ಉದ್ಘಾಟಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಚಾನಲ್ ಕೂರ್ಗ್ ನ ಸಂಪಾದಕರಾದ ಶ್ರೀಧರ ನೆಲ್ಲಿತ್ತಾಯ, ಆಕಾಶವಾಣಿ ಕಲಾವಿದ ಬಿ.ಎ.ಗಣೇಶ್, ವಿರಾಜಪೇಟೆಯ ಸ್ವರಾರ್ಣವ ಸಂಗೀತ ಶಾಲೆಯ ವ್ಯವಸ್ಥಾಪಕರಾದ ವಿದ್ವಾನ್ ದಿಲಿ ಕುಮಾರ್ , ಅದ್ಯಾಪಕರು ಮತ್ತು ಕಲಾವಿದರಾದ ಕೆ ಚಂದ್ರಶೇಖರ್, ತಬಲ ಕಲಾವಿದರಾದ ಮುರ್ನಾಡಿನ ಚಂದ್ರು, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೋಳೆರ ದಯಾ ಚಂಗಪ್ಪ, ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕುಲ್ಲಚಂಡ ಪ್ರಮೋದ್ ಗಣಪತಿ ಮತ್ತು ದಿ.ವಿ.ಟಿ ಶ್ರೀನಿವಾಸ್ ರವರ ಕುಟುಂಬಸ್ಥರು ಭಾಗವಹಿಸಲಿದ್ದಾರೆ. ದಿವಂಗತ ವಿ.ಟಿ ಶ್ರೀನಿವಾಸ್ ಸ್ನೇಹಿತರ ಬಳಗದಿಂದ ಗಾನ ನಮನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











