Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*
  • *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*
  • *ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಉಳ್ಳಿಯಡ ಎಂ. ಪೂವಯ್ಯ ಅವರಿಗೆ ಸನ್ಮಾನ*
  • *ನಾಪೋಕ್ಲು : ಮಹಿಳೆಯರು ಸ್ವಾವಲಂಬಿಗಳಾಗಿ : ವನಜಾಕ್ಷಿ ರೇಣುಕೇಶ್*
  • *ವಿರಾಜಪೇಟೆಯಲ್ಲಿ ಸಂಭ್ರಮದಿಂದ ನಡೆದ ವಿಶು ಕಣಿ ಪೂಜೆ ಹಾಗೂ ಗ್ರಾಮೀಣ ಕ್ರೀಡಾಕೂಟ*
  • *ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ* 
  • *ಕೊಡಗು : ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ : ಗಣ್ಯರ ಅಭಿಮತ*
  • *ಗೋಣಿಕೊಪ್ಪ : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾಗಿ ಡಾ.ಮಂಡೆಪಂಡ ಆಶಿಕ್ ಚಂಗಪ್ಪ ಆಯ್ಕೆ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡ್ಲೂರಿನಲ್ಲಿ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಚಿಂತನ ಮಂಥನ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡ್ಲೂರಿನಲ್ಲಿ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಚಿಂತನ ಮಂಥನ ಕಾರ್ಯಕ್ರಮ*

ಸೆಪ್ಟೆಂಬರ್ 9, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಸೆ.9 NEWS DESK : ಕುಶಾಲನಗರದ ಸಾಹಿತ್ಯ ಹಾಗೂ ಸಾಂಸ್ಕೃತಿಕ ವೇದಿಕೆ ವತಿಯಿಂದ ನಾಡು ಕಂಡ ಹಿರಿಯ ಸಾಹಿತಿ, ಸಂಶೋಧಕ, ಪಕ್ಷಿ, ಪರಿಸರ ರಕ್ಷಕ, ಕೆ.ಪಿ.ಪೂರ್ಣಚಂದ್ರತೇಜಸ್ವಿ ಅವರ ಸ್ಮರಣೆ ಕಾರ್ಯಕ್ರಮ ಕೂಡ್ಲೂರು ಗ್ರಾಮದ ಟಿ.ಆರ್.ಶರವಣಕುಮಾರ್ ಅವರ ನಿವಾಸ “ಚಂದ್ರ ಕುಟೀರ” ದಲ್ಲಿ ನಡೆಯಿತು. ಈ ಸಂದರ್ಭ ವಿಚಾರವಾದಿ ಹಾಗೂ ವಾಗ್ಮಿ ವಿ.ಪಿ.ಶಶಿಧರ್ ಮಾತನಾಡಿ, ಕುವೆಂಪು ಕಾಲಘಟ್ಟದಲ್ಲಿ ಕನ್ನಡ ನಾಡು ಸಾಹಿತ್ಯಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಶ್ರೀಮಂತಗೊಂಡಷ್ಟು ಇತ್ತೀಚಿನ ದಶಕಗಳಲ್ಲಿ ಕಾಣುತ್ತಿಲ್ಲ. ಕುವೆಂಪು ಸಾಹಿತ್ಯಿಕವಾಗಿ ಗಗನದ ಎತ್ತರಕ್ಕೇರಿದಾಗ್ಯೂ ಅವರ ಪುತ್ರ ಪೂರ್ಣಚಂದ್ರ ತೇಜಸ್ವಿ ಅಪ್ಪನ ನೆರಳಿನಿಂದ ಹೊರಬಂದು ಸ್ವತಃ ತಾವೇ ಸಾಹಿತ್ಯ ರಚನೆಗಳಲ್ಲಿ ತೊಡಗಿಸಿಕೊಂಡು ಹೆಸರು ಮಾಡಿದವರು. ಸಾಹಿತ್ಯದಷ್ಟೇ ಪಕ್ಷಿಗಳ ವೈವಿಧ್ಯತೆ ಹಾಗೂ ಪರಿಸರದ ಬಗ್ಗೆಯೂ ತೇಜಸ್ವಿ ಹೆಚ್ಚಿನ ಒಲವು ಹೊಂದಿದ್ದರು. ತೇಜಸ್ವಿ ಒಡನಾಡಿಗಳು ಹಳ್ಳಿಗಳನ್ನು ತೊರೆದು ನಗರಗಳಿಗೆ ಆಕರ್ಷಿತರಾದರೆ ತೇಜಸ್ವಿ ನಗರ ತೊರೆದು ಹಳ್ಳಿಯ ಸುಂದರ ಪರಿಸರದತ್ತ ಒಲವು ಹೊಂದಿದ್ದರು. ತಮ್ಮ ತೋಟದಲ್ಲಿ ಬೆಳೆದ ಯಾವ ಬೆಳೆಗಳೂ ಆದಾಯ ತಂದು ಕೊಡದ್ದರಿಂದ ‘ನಿರುತ್ತರ ‘ ಎಂದು ವಿಡಂಭನಾತ್ಮಕವಾಗಿ ಹೆಸರಿಟ್ಟಿದ್ದರು ಎಂದು ಶಶಿಧರ್ ಹೇಳಿದರು.
ಆಶಯ ನುಡಿಗಳಾಡಿದ ಸಾಹಿತಿ ಕಣಿವೆ ಭಾರಧ್ವಜ್, ನೇರ ಹಾಗೂ ನಿಷ್ಟುರ ಸಾಹಿತಿಯಾಗಿದ್ದ ತೇಜಸ್ವಿಯವರ ನಡೆಯಲ್ಲಿ ಯಾವತ್ತೂ ನಾಟಕೀಯತೆ ಇರಲಿಲ್ಲ ಹಾಗೂ ತಂದೆಯನ್ನು ಅವರು ಅನುಸರಿಸಲೇ ಇಲ್ಲ. ಅವರಲ್ಲಿ ಸರಳತೆ ಇತ್ತು. ವಿಡಂಭನೆ, ವ್ಯಂಗ್ಯ, ತಮಾಷೆ ಎಲ್ಲವೂ ಇತ್ತು. ತೇಜಸ್ವಿ ಅವರ ಜೀವಿತಾವಧಿಯಲ್ಲಿ ಯಾವತ್ತೂ ರಾಜಕಾರಣವನ್ನು ವಿರೋಧಿಸಿದವರು. ಯಾರ ಮುಲಾಜಿಗೂ ಒಳಗಾಗದೇ ನೇರವಾಗಿ ಪ್ರಶ್ನೆ ಮಾಡುವ ಸ್ವಭಾವ ಹೊಂದಿದ್ದರು ಎಂದರು. ಹೆಬ್ಬಾಲೆ ಪ್ರೌಢಶಾಲೆಯ ಕನ್ನಡ ಶಿಕ್ಷಕ ಮೆ.ನಾ.ವೆಂಕಟನಾಯಕ್ ಮಾತನಾಡಿ, ಕುವೆಂಪು ಕಾಲಘಟ್ಟದ ಅವರ ಸಾಹಿತ್ಯ ಆಳುವ ಸರ್ಕಾರಗಳನ್ನು ನಡುಗಿಸುವಂತಿತ್ತು. ಅಂತಹ ಸಾಹಿತಿಯ ಮಗನಾಗಿದ್ದ ತೇಜಸ್ವಿ ಯಾವತ್ತೂ ತಮ್ಮ ತಂದೆಯನ್ನು ಅನುಸರಿಸಲೂ ಇಲ್ಲ. ಅನುಕರಿಸಲೂ ಇಲ್ಲ. ತಂದೆಯ ನೆರಳಿನಿಂದ ಹೊರ ಬಂದು ತಮ್ಮ ಸಾಹಿತ್ಯಿಕ ಶಕ್ತಿಯನ್ನು ಸಾಹಿತ್ಯ ಕ್ಷೇತ್ರದಲ್ಲಿ ದಾಖಲಿಸಿದವರು ಎಂದರು. ಪೂರ್ಣ ಚಂದ್ರ ಕುಟೀರದ ಮಾಲೀಕ ಟಿ.ಆರ್.ಶರವಣಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಇತ್ತೀಚಿನ ದಶಕಗಳಲ್ಲಿ ಯುವ ಜನಾಂಗ ಸಾಹಿತ್ಯವನ್ನು ಓದುವುದೇ ಮರೆಯಾಗಿದೆ. ಕುವೆಂಪು ಗಿಂತ ಅವರ ಪುತ್ರ ತೇಜಸ್ವಿಯವರ ಸಾಹಿತ್ಯ ಜನಸಾಮಾನ್ಯರಿಗೆ ಅರ್ಥವಾಗುವ ಸರಳ ಹಾಗೂ ಆಡು ಭಾಷೆಯಲ್ಲಿದೆ. ತೇಜಸ್ವಿ ಅವರ ಸಾಹಿತ್ಯ ನನ್ನಲ್ಲಿ ಬಹಳಷ್ಟು ಪ್ರಭಾವಿ ಬೀರಿದ್ದರಿಂದಲೇ ನನ್ನ ಮನೆಗೆ ಪೂರ್ಣ ಚಂದ್ರ ಎಂದು ಹೆಸರು ಇಟ್ಟಿದ್ದಾಗಿ ಶರವಣಕುಮಾರ್ ಹೇಳಿದರು. ಕುಶಾಲನಗರದ ಸರ್ಕಾರಿ ಪಿಯು ಕಾಲೇಜಿನ ಇತಿಹಾಸ ಉಪನ್ಯಾಸಕಿ ಶಾಂತಿ, ಅಥ್ಲೆಟಿಕ್ ತರಬೇತುದಾರ ವಸಂತಕುಮಾರ್ ಮಾತನಾಡಿದರು. ಕೆ.ಎಸ್.ಮಹೇಶ್,
ಕುಶಾಲನಗರ ಗಣಪತಿ ದೇವಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಂ.ಕೆ.ದಿನೇಶ್,  ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಕೆ.ಎಸ್.ಮೂರ್ತಿ, ತಾಲ್ಲೂಕು ಕಸಾಪ ಅಧ್ಯಕ್ಷ ಕೆ.ಎಸ್.ನಾಗೇಶ್, ಹಿತರಕ್ಷಣಾ ವೇದಿಕೆಯ ಸಂಚಾಲಕ ಕೆ.ಜಿ.ಮನು, ಉಪನ್ಯಾಸಕ ಎಂ.ನಂಜುಂಡಸ್ವಾಮಿ, ಪುರಸಭೆ ಸದಸ್ಯೆ ಜಯಲಕ್ಷ್ಮಿ, ಮೊಗಣ್ಣೇಗೌಡ, ದೇವರಾಜು, ರಾಜೇಶ್, ಚಂದ್ರು, ಮೋಹಿದ್ಧೀನ್ ಹಾಗೂ ಇತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*

ಮೇ 5, 2026

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*

ಮೇ 5, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*

ಮೇ 5, 2026

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*

ಮೇ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 5 NEWS DESK : ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಮೂಲಕ…

*ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*

ಮೇ 5, 2026

*ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 4, 2026

*ಉಳ್ಳಿಯಡ ಎಂ. ಪೂವಯ್ಯ ಅವರಿಗೆ ಸನ್ಮಾನ*

ಮೇ 4, 2026

*ನಾಪೋಕ್ಲು : ಮಹಿಳೆಯರು ಸ್ವಾವಲಂಬಿಗಳಾಗಿ : ವನಜಾಕ್ಷಿ ರೇಣುಕೇಶ್*

ಮೇ 4, 2026

*ವಿರಾಜಪೇಟೆಯಲ್ಲಿ ಸಂಭ್ರಮದಿಂದ ನಡೆದ ವಿಶು ಕಣಿ ಪೂಜೆ ಹಾಗೂ ಗ್ರಾಮೀಣ ಕ್ರೀಡಾಕೂಟ*

ಮೇ 4, 2026

*ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ* 

ಮೇ 4, 2026

*ಕೊಡಗು : ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ : ಗಣ್ಯರ ಅಭಿಮತ*

ಮೇ 4, 2026

*ಗೋಣಿಕೊಪ್ಪ : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾಗಿ ಡಾ.ಮಂಡೆಪಂಡ ಆಶಿಕ್ ಚಂಗಪ್ಪ ಆಯ್ಕೆ* 

ಮೇ 4, 2026

*ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು*

ಮೇ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.