
ಮಡಿಕೇರಿ ಸೆ.14 NEWS DESK : ಮಡಿಕೇರಿ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೊಮ್ಮುವ ಎಫ್ 3 ಗದ್ದಿಗೆ, ಎಫ್11 ಗಾಳಿಬೀಡು ಹಾಗೂ ಎಫ್10 ಕುಂಡಾಮೇಸ್ತ್ರಿ ಫೀಡರ್ಗಳ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ಸೆಪ್ಟೆಂಬರ್, 17 ರಂದು ಬೆಳಗ್ಗೆ 10 ರಿಂದ ಸಂಜೆ 05 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಸಂಪಿಗೆಕಟ್ಟೆ, ಎ.ವಿ.ಶಾಲೆ, ಆಜಾದ್ನಗರ, ತ್ಯಾಗರಾಜ ಕಾಲೋನಿ, ಮಾರ್ಕೆಟ್, ಭಗವತಿನಗರ, ಕಾನ್ವೆಂಟ್ ಜಂಕ್ಷನ್, ಐಟಿಐ ಹಿಂಭಾಗ, ಕಾವೇರಿ ಲೇಔಟ್, ಹೆಬ್ಬೆಟ್ಟಗೇರಿ, ದೇವಸ್ತೂರು, ಕೆ.ಬಾಡಗ, ಗಾಳಿಬೀಡು, ಕಾಲೂರು, ಸಿದ್ದಿಕಾಡು, ವಣಚಲು, ಕೆ.ನಿಡುಗಣೆ, ಕುಂಡಾಮೇಸ್ತ್ರಿ, ಕೂಟುಹೊಳೆ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.










