ಸೋಮವಾರಪೇಟೆ ಸೆ.16 NEWS DESK : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕಕ್ಕೆಹೊಳೆ ಜಂಕ್ಷನ್ನಿಂದ ಜೇಸಿವೇದಿಕೆಯ ವರಗೆ ಮಾನವ ಸರಪಳಿ ರಚಿಸಿ ಭಾರತ ಸಂವಿಧಾನ ಪ್ರಸ್ತಾವನೆ ಓದಲಾಯಿತು. ಶಾಲಾ ವಿದ್ಯಾರ್ಥಿಗಳು ರಾಷ್ಟ್ರಗೀತೆ, ನಾಡಗೀತೆ ಹಾಡಿದರು. ಬಾಣಾವರ ರಸ್ತೆಯಲ್ಲಿರುವ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಪ್ರತಿಮೆಯ ಪಕ್ಕದಲ್ಲಿ ಸಸಿಯನ್ನು ನೆಡಲಾಯಿತು. ಈ ಸಂದರ್ಭ ತಹಶೀಲ್ದಾರ್ ಶ್ರೀಧರ್ ಕಂಕನವಾಡಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಉಪಾಧ್ಯಕ್ಷೆ ಮೋಹಿನಿ, ಪ.ಪಂ ಮುಖ್ಯಾಧಿಕಾರಿ ನಾಚಪ್ಪ, ಎಸಿಎಫ್ ಗೋಪಾಲ್, ಪ್ರಮುಖರಾದ ಬಿ.ಇ.ಜಯೇಂದ್ರ, ಡಿ.ಎಸ್.ನಿರ್ವಾಣಪ್ಪ, ಹೊನ್ನಪ್ಪ ಇದ್ದರು.










