Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*
  • *ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*
  • *5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*
  • *ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*
  • *ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*
  • *ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*
  • *ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*
  • *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಸರ್.ಎಂ.ವಿಶ್ವೇಶ್ವರಯ್ಯ ಸಾಹಿತ್ಯ ಸಂಸ್ಕೃತಿಯನ್ನು ಬೆಳೆಸುವಲ್ಲಿ ದಾರ್ಶನಿಕರಾಗಿ ದುಡಿದವರು : ಟಿ.ಪಿ.ರಮೇಶ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಸರ್.ಎಂ.ವಿಶ್ವೇಶ್ವರಯ್ಯ ಸಾಹಿತ್ಯ ಸಂಸ್ಕೃತಿಯನ್ನು ಬೆಳೆಸುವಲ್ಲಿ ದಾರ್ಶನಿಕರಾಗಿ ದುಡಿದವರು : ಟಿ.ಪಿ.ರಮೇಶ್

ಸೆಪ್ಟೆಂಬರ್ 17, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.17 NEWS DESK  : ಕನ್ನಡ ನಾಡಿನ ಸರ್ವತೋಮುಖ ಅಭಿವೃದ್ಧಿಯಲ್ಲಿ ಪ್ರಮುಖರಾದ ಸರ್.ಎಂ.ವಿಶ್ವೇಶ್ವರಯ್ಯರವರು ಸಾಹಿತ್ಯ ಸಂಸ್ಕೃತಿಯನ್ನು ಬೆಳೆಸುವಲ್ಲಿ ದಾರ್ಶನಿಕರಾಗಿ ದುಡಿದವರು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ ರಮೇಶ್ ನುಡಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪಕರಲ್ಲಿ ಒಬ್ಬರಾದ ಸರ್.ಎಂ ವಿಶ್ವೇಶ್ವರಯ್ಯ ಅವರು 164ನೇ ಜನ್ಮದಿನಾಚರಣೆಯ ಕುರಿತು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು. ಸರ್.ಎಂ. ವಿಶ್ವೇಶ್ವರಯ್ಯ ಜನ್ಮದಿನವನ್ನು ಇಂಜಿನಿಯರ್ಸ್ ಡೇ – ಅಭಿಯಂತರರ ದಿನವನ್ನಾಗಿ ಕರ್ನಾಟಕ ಸರ್ಕಾರ ಆಚರಿಸುತ್ತಿದೆ. 15.09.1861ರಲ್ಲಿ ಶ್ರೀನಿವಾಸ ಶಾಸ್ತ್ರಿ ಮತ್ತು ವೆಂಕಟಲಕ್ಷ್ಮಮ್ಮ ದಂಪತಿಗಳ ಪುತ್ರನಾಗಿ ಇಂದಿನ ಕೋಲಾರ ಜಿಲ್ಲೆಯ ಮುದ್ದೇನಹಳ್ಳಿ ಗ್ರಾಮದಲ್ಲಿ ಜನ್ಮ ಪಡೆದರು. ಇವರು ಬೆಂಗಳೂರು ಮತ್ತು ಪೂನಾದಲ್ಲಿ ವಿದ್ಯಾಭ್ಯಾಸ ಪಡೆದು ಇಂಜಿನಿಯರ್ ಪದವೀಧರರಾದರು.ಮುಂಬೈ ಕರ್ನಾಟಕದ ಕುಡಿಯುವ ನೀರು ಯೋಜನೆ, ಹೈದರಾಬಾದ್ ನಿಜಾಮರ ಆಡಳಿತದಲ್ಲಿ ಹೈದರಾಬಾದಿಗೆ ಒಳಚರಂಡಿ ನಿರ್ಮಾಣ ಕಾರ್ಯ ರಚಿಸಿದರು. ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಹ್ವಾನದ ಮೇಲೆ ಮೈಸೂರಿಗೆ ಬಂದು ಮೈಸೂರು ರಾಜ್ಯದ ಸಮಗ್ರ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಹಾರಾಜರ ನಿರ್ದೇಶನದಂತೆ ಮುಂದುವರಿಸಿದರು. 1911ರಲ್ಲಿ ಆರ್ಥಿಕತೆಗೆ ಬಲ ತುಂಬುವ ಯೋಜನೆಗಳನ್ನು ರೂಪಿಸಿದ ಸರ್ ಎಂ ವಿಶ್ವೇಶ್ವರಯ್ಯ ರವರು ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದಾದರು. ರಸ್ತೆಗಳು, ರೈಲ್ವೆ ಮಾರ್ಗ, ನೀರಾವರಿ ಕೆರೆಕಟ್ಟೆ ನಿರ್ಮಾಣ ಮುಂತಾದ ಕಾರ್ಯಗಳನ್ನು ಮಾಡಿದ ಇವರನ್ನು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 1912 ರಲ್ಲಿ ದಿವಾನರಾಗಿ ನೇಮಿಸಿಕೊಂಡರು. ನಾಲ್ವಡಿ ಅವರ ಸೂಚನೆಯಂತೆ ಕೃಷ್ಣರಾಜಸಾಗರ ಅಣೆಕಟ್ಟಿನ ನಿರ್ಮಾಣ, ಮೈಸೂರು ಗಂಧದ ಕಾರ್ಖಾನೆ, ಭದ್ರಾವತಿ ಉಕ್ಕಿನ ಕಾರ್ಖಾನೆ, ಭದ್ರಾವತಿ ಪೇಪರ್ ಕಾರ್ಖಾನೆ, ಜಯಚಾಮರಾಜೇಂದ್ರ ವೃತ್ತಿ ಶಿಕ್ಷಣ ತರಬೇತಿ ಸಂಸ್ಥೆ, ರಾಜ್ಯ ಚೇಂಬರ್ ಆಫ್ ಕಾಮರ್ಸ್, ಕನ್ನಡ ಸಾಹಿತ್ಯ ಪರಿಷತ್ತು, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು,ಮೈಸೂರು ವಿಶ್ವವಿದ್ಯಾಲಯ ಗಳ ಸ್ಥಾಪನೆಗೆ ಕಾರಣೀಭೂತರಾದರು ಎಂದು ರಮೇಶ್ ತಿಳಿಸಿದರು. 1955ರಲ್ಲಿ ಅವರ ಸಾರ್ವಜನಿಕ ಅಭಿವೃದ್ಧಿಯ ಕೆಲಸಗಳನ್ನು ಗಮನಿಸಿದ ಭಾರತ ಸರ್ಕಾರ ಇವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿತ್ತು. ಭಾರತದ ಪ್ರತಿಭಾವಂತ ಇಂಜಿನಿಯರ್ ಆಗಿದ್ದ ಸರ್ ಎಂ ವಿಶ್ವೇಶ್ವರಯ್ಯ ಅವರು ಬ್ರಿಟಿಷ್ ಸರಕಾರದಲ್ಲೂ ಕಾರ್ಯನಿರ್ವಹಿಸಿದ್ದರು. 102 ವರ್ಷ ಬಾಳು ಬದುಕಿದ ಸರ್.ಎಂ.ವಿಶ್ವೇಶ್ವರಯ್ಯ ರವರು 14.04.1962 ರಂದು ತಮ್ಮ 102ನೇ ವಯಸಿದಲ್ಲಿ ದೈವಾಧೀನರಾದರು. ಅಂತಹ ದಾರ್ಶನಿಕರು ಹಾಕಿಕೊಟ್ಟ ಹಾದಿಯಲ್ಲಿ ಕನ್ನಡ ನಾಡನ್ನು ಪ್ರಬಲವಾಗಿ ಕಟ್ಟಲು ನಾವು ಮುಂದಾಗಬೇಕು ಎಂದು ಟಿ.ಪಿ.ರಮೇಶ್ ನುಡಿದರು. ಕೊಡಗು ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಬಿ.ಜಿ ಅನಂತಶಯನ ಅವರು ಮಾತನಾಡಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ ಸರ್ ಎಂ ವಿಶ್ವೇಶ್ವರಯ್ಯನವರು ವಿದ್ಯಾರ್ಥಿ ಮತ್ತು ಯುವಜನರಲ್ಲಿ ಶಿಕ್ಷಣದ ಮಹತ್ವದ ಬಗ್ಗೆ ತಿಳುವಳಿಕೆ ನೀಡಿ ಭವಿಷ್ಯ ರೂಪಿಸಿಕೊಳ್ಳಲು ಮಾರ್ಗದರ್ಶನ ಮಾಡಿದವರು ಎಂದರು. ಭಾರತ ಸ್ಕೌಟ್ ಮತ್ತು ಗೈಡ್ ಸಂಸ್ಥೆಯ ಆಯುಕ್ತರಾದ ಕೆ.ಟಿ ಬೇಬಿ ಮ್ಯಾಥ್ಯೂ, ಸಿರಿಗಂಧ ವೇದಿಕೆಯ ಅಧ್ಯಕ್ಷರಾದ ಅಲ್ಲಾರಂಡ ವಿಠಲ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧಿಕಾರಿ ಎಸ್.ಎಸ್ ಸಂಪತ್ ಕುಮಾರ್ ಸರ್ ಎಂ ವಿಶ್ವೇಶ್ವರಯ್ಯ ಕುರಿತು ಮಾತನಾಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮದ್ ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುರ್ನಾಡು ಹೋಬಳಿ ಕ.ಸಾ.ಪ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್, ಜಿಲ್ಲಾ ಕ.ಸಾ.ಪ ಮಾಜಿ ಗೌರವ ಕೋಶಾಧಿಕಾರಿ ಬಿ.ಎಂ. ವಾಸು ರೈ ಉಪಸ್ಥಿತರಿದ್ದರು. ಜಿಲ್ಲಾ ಕ.ಸಾ.ಪ ಗೌರವ ಕಾರ್ಯದರ್ಶಿ ರೇವತಿ ರಮೇಶ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮೇ 6 NEWS DESK : ಪೆರುಂಬಾಡಿಯ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿಯ ಎಸ್ಇಎ ಕಾಲೇಜು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ…

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*

ಮೇ 5, 2026

*ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*

ಮೇ 5, 2026

*ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*

ಮೇ 5, 2026

*ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮೇ 5, 2026

*ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*

ಮೇ 5, 2026

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*

ಮೇ 5, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*

ಮೇ 5, 2026

*ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.