Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ದುಡಿಯುವ ವರ್ಗಕ್ಕೆ ನಿವೇಶನ ನೀಡದ ಸರ್ಕಾರ : ಬೃಹತ್ ಪ್ರತಿಭಟನೆಗೆ ನಿರ್ಧಾರ*
ಇತ್ತೀಚಿನ ಸುದ್ದಿಗಳು

*ದುಡಿಯುವ ವರ್ಗಕ್ಕೆ ನಿವೇಶನ ನೀಡದ ಸರ್ಕಾರ : ಬೃಹತ್ ಪ್ರತಿಭಟನೆಗೆ ನಿರ್ಧಾರ*

September 17, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಸೆ.17 NEWS DESK : ಸಂಕಷ್ಟದ ಬದುಕು ಸವೆಸುತ್ತಿರುವ ಜಿಲ್ಲಾ ವ್ಯಾಪ್ತಿಯ ದುಡಿಯುವ ವರ್ಗಕ್ಕೆ ನಿವೇಶನ ಅಥವಾ ವಸತಿ ಒದಗಿಸುವಲ್ಲಿ ಅಧಿಕಾರಕ್ಕೆ ಬಂದ ಪ್ರತಿ ಸರ್ಕಾರಗಳು ವಿಫಲವಾಗುತ್ತಿವೆ. ನಿವೇಶನ ರಹಿತರ ಕಡೆಗಣನೆಯನ್ನು ಖಂಡಿಸಿ ಸೆ.23 ರಂದು ದಕ್ಷಿಣ ಕೊಡಗಿನ ಪೊನ್ನಂಪೇಟೆಯಲ್ಲಿ ಮತ್ತು ಅ.3 ರಂದು ಸೋಮವಾರಪೇಟೆ ತಾಲ್ಲೂಕು ಕಚೇರಿಯ ಎದುರಿನಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಪಕ್ಷದ ಜಿಲ್ಲಾ ಸಹ ಕಾರ್ಯದರ್ಶಿ ಹೆಚ್.ಎಂ.ಸೋಮಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಪಿಐ, ಕಾರ್ಮಿಕ ಸಂಘಟನೆ ಎಐಟಿಯುಸಿ ಮತ್ತು ನಿವೇಶನ ರಹಿತರ ಹೋರಾಟ ಸಮಿತಿ 2002 ರಿಂದ ನಿರಂತರವಾಗಿ ನಿವೇಶನಕ್ಕಾಗಿ ಹೋರಾಟಗಳನ್ನು ನಡೆಸಿಕೊಂಡು ಬಂದಿದೆ. ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಆರು ಸಾವಿರಕ್ಕೂ ಹೆಚ್ಚಿನ ಬಡ ಕೂಲಿ ಕಾರ್ಮಿಕ ಮಂದಿ ನಿವೇಶನಕ್ಕಾಗಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಆದರೆ ಆಡಳಿತ ವ್ಯವಸ್ಥೆ ಇಲ್ಲಿಯವರೆಗು ಸ್ಪಂದಿಸಿಲ್ಲವೆಂದು ಆರೋಪಿಸಿದರು. ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಲಭ್ಯವಿರುವ ಸರ್ಕಾರಿ ಜಾಗವನ್ನು ಗುರುತಿಸಿ ನಿವೇಶನ ರಹಿತರಿಗೆ ಒದಗಿಸಬೇಕೆಂದು ಈ ಹಿಂದೆ ಕೋರ್ಟ್ ಸೂಚಿಸಿದೆ. ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಲಭ್ಯ ಸರ್ಕಾರಿ ಜಾಗವನ್ನು ಗುರುತಿಸುವ ಸಮರ್ಪಕ ಸರ್ವೇ ಕಾರ್ಯಗಳು ನಡೆದಿಲ್ಲ. ಉಳ್ಳವರು ಅತಿಕ್ರಮಿಸಿಕೊಂಡಿರುವ ಸರ್ಕಾರಿ ಜಾಗವನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಹಿಂದಿನ ಬಿಜೆಪಿ ಸರ್ಕಾರ ನಿರ್ಧರಿಸಿತು. ಬಡವರ ಪರ ಎಂದು ಹೇಳಿಕೊಳ್ಳುತ್ತಿರುವ ಈಗಿನ ಕಾಂಗ್ರೆಸ್ ಸರ್ಕಾರ ಗುತ್ತಿಗೆ ನಿಯಮವನ್ನು ರದ್ದು ಮಾಡುವುದರ ಬದಲಾಗಿ ಉಳ್ಳವರ ಪರವಾಗಿ ಮುಂದುವರೆಸಿಕೊಂಡು ಹೋಗುತ್ತಿರುವುದು ಅತ್ಯಂತ ಬೇಸರದ ಬೆಳವಣಿಗೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಜಾಗವನ್ನು ಮರಳಿ ಪಡೆದು, ಅದನ್ನು ಶ್ರಮಿಕ ವರ್ಗದ ಮಂದಿಗೆ, ಲೈನ್ ಮನೆಗಳಲ್ಲಿ ಸಂಕಷ್ಟದ ಬದುಕು ಸವೆಸುತ್ತಿರುವ ದುಡಿಯುವ ವರ್ಗಕ್ಕೆ ನೀಡುವಂತೆ ಸೋಮಪ್ಪ ಒತ್ತಾಯಿಸಿದರು. ಬಡ ಮಂದಿಗೆ ನಿವೇಶನಗಳನ್ನು ಒದಗಿಸುವುದು ಗ್ರಾಮ ಪಂಚಾಯ್ತಿಗಳ ಕರ್ತವ್ಯ ಮತ್ತು ಇದನ್ನು ಗ್ರಾಮ ಸಭೆಗಳಲ್ಲಿ ನಿರ್ಧರಿಸಬೇಕು ಎನ್ನಲಾಗುತ್ತದೆ. ಆದರೆ, ಪ್ರತಿ ಗ್ರಾಮಸಭೆಗಳಲ್ಲಿ ನಿವೇಶನ ಕುರಿತು ವಿಷಯ ಪ್ರಸ್ತಾಪವಾಗುತ್ತದೆ ಹೊರತು ಬಡವರಿಗೆ ನಿವೇಶನ ನೀಡುವ ಯಾವುದೇ ಕಾಳಜಿ ಕಂಡು ಬರುತ್ತಿಲ್ಲ. ನಮ್ಮ ಬೇಡಿಕೆ ಈಡೇರಿಕೆಗೆ ಆಗಿಂದಾಗ್ಗೆ ಅಧಿಕಾರಿಗಳ ಬದಲಾವಣೆಯೂ ತೊಡಕಾಗಿ ಪರಿಣಮಿಸುತ್ತಿದೆ. ತಾಲ್ಲೂಕು, ಜಿಲ್ಲಾ ಕಚೇರಿಗಳಲ್ಲಿನ ಅಧಿಕಾರಿಗಳನ್ನು ಪದೇ ಪದೇ ಬದಲಿಸುವುದರಿಂದ ಯಾವುದೇ ಕೆಲಸ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲವೆಂದು ಆರೋಪಿಸಿದರು. ಪ್ರಸ್ತುತ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಸರ್ಕಾರ, ಇದೇ ಬಡ ವರ್ಗದ, ದಲಿತರ, ಶೋಷಿತ ಸಮೂಹದ ಮತಗಳಿಂದಲೆ ಅಧಿಕಾರಕ್ಕೆ ಬಂದಿದೆ. ಬಡ ಮಂದಿಯ ಸಂಕಷ್ಟಗಳಿಗೆ ಸರ್ಕಾರ ಸ್ಪಂದಿಸಬೇಕು. ಇಲ್ಲವಾದಲ್ಲಿ ರಾಜ್ಯವ್ಯಾಪಿ ಹೋರಾಟ, ಉಪವಾಸ ಮುಷ್ಕರಕ್ಕೂ ಹಿಂದೇಟು ಹಾಕುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
::: ಖಾಲಿ ಬಿದ್ದ ಮನೆಗಳು :::
ಸೋಮವಾರಪೇಟೆ ತಾಲ್ಲೂಕಿನ ಜಂಬೂರಿನಲ್ಲಿ ಪ್ರಾಕೃತಿಕ ವಿಕೋಪದಿಂದ ಮನೆಗಳನ್ನು ಕಳೆದುಕೊಂಡವರಿಗೆ ನಿರ್ಮಿಸಲಾಗಿರುವ ಆರು ನೂರಕ್ಕೂ ಹೆಚ್ಚಿನ ಮನೆಗಳಲ್ಲಿ ಬಹುತೇಕ ಮನೆಗಳು ಖಾಲಿ ಬಿದ್ದಿದ್ದು, ಮತ್ತೆ ಹಲವಷ್ಟು ಶಿಥಿಲವಾಗಿರುವುದಾಗಿ ಹೆಚ್.ಎಂ.ಸೋಮಪ್ಪ ಆರೋಪಿಸಿದರು.
ರಾಜ್ಯದಲ್ಲಿ ಹೆಚ್.ಡಿ.ಕುಮಾರ ಸ್ವಾಮಿ ಅವರು ಮುಖ್ಯ ಮಂತ್ರಿಗಳಾಗಿದ್ದ ಅವಧಿಯಲ್ಲಿ, ಕೊಡಗಿನಲ್ಲಿ ನಡೆದ ಪ್ರಾಕೃತಿಕ ವಿಕೋಪದ ಸಂತ್ರಸ್ತರಿಗೆ ಜಂಬೂರಿನಲ್ಲಿ ಮನೆಗಳನ್ನು ನಿರ್ಮಿಸಿಕೊಡಲಾಗಿದೆ. ಹಲವು ಮಂದಿ ತಮಗೆ ದೊರೆತ ಮನೆಗಳನ್ನು ಭೋಗ್ಯಕ್ಕೆ ಇತರರಿಗೆ ನೀಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಬಹಳಷ್ಟು ಮನೆಗಳಲ್ಲಿ ಸಂತ್ರಸ್ತರು ವಾಸವಿಲ್ಲದೆ ಖಾಲಿ ಬಿದ್ದಿವೆ. ಈ ಬಗ್ಗೆ ಜಿಲ್ಲಾಡಳಿತ ಗಮನ ಹರಿಸಿ ಖಾಲಿ ಮನೆಗಳನ್ನು ನಿವೇಶನ ರಹಿತರಿಗೆ ಒದಗಿಸಲು ಮುಂದಾಗಬೇಕೆಂದು ಒತ್ತಾಯಿಸಿದರು. ಸಿಪಿಐ ಜಿಲ್ಲಾ ಮಂಡಳಿ ಸಹ ಕಾರ್ಯದರ್ಶಿ ಹೆಚ್.ಡಿ.ರಮೇಶ್ ಮಾತನಾಡಿ, ನಿವೇಶನಕ್ಕಾಗಿ ಆಗ್ರಹಿಸಿ ಸೆ.23 ರಂದು ಪೊನ್ನಂಪೇಟೆಯ ಬಸ್ ನಿಲ್ದಾಣದಿಂದ ತಾಲ್ಲೂಕು ಪಂಚಾಯ್ತಿ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಧರಣಿ ಮುಷ್ಕರ ನಡೆಸಲಾಗುತ್ತದೆ ಎಂದರು. ಜಿಲ್ಲೆಯ ವಿವಿಧೆಡೆಗಳಲ್ಲಿ ಅಲ್ಪಸ್ಪಲ್ಪ ಸರ್ಕಾರಿ ಜಾಗದಲ್ಲಿ ಬದುಕು ಕಟ್ಟಿಕೊಳ್ಳಲು ಯತ್ನಿಸುತ್ತಿರುವ ಶ್ರಮಿಕ ವರ್ಗದ ಮಂದಿಯನ್ನು ಒಕ್ಕಲೆಬ್ಬಿಸುವ ಕಾರ್ಯ ನಡೆಸುವ ಸರ್ಕಾರ, ಅದೇ ಮತ್ತೊಂದೆಡೆ ಉಳ್ಳವರಿಗೆ ಅನುಕೂಲ ಕಲ್ಪಿಸಲು ಜಾಗವನ್ನು ಗುತ್ತಿಗೆಗೆ ನೀಡುವ ಕಾರ್ಯ ನಡೆಸುತ್ತಿದೆ ಎಂದು ಆರೋಪಿಸಿದರು. ತಾಲ್ಲೂಕು ಕಂದಾಯ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ ಮಿತಿ ಮೀರುತ್ತಿದೆ. ಬಡ ಮಂದಿಯ ಯಾವುದೇ ಕೆಲಸ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಸೋಮವಾರಪೇಟೆ ತಾಲ್ಲೂಕು ಸಿಪಿಐ ಕಾರ್ಯದರ್ಶಿ ಶಬಾನ, ಸಿಪಿಐ ಸದಸ್ಯ ಜೆ.ಎಂ.ಅಶೋಕ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಪಿಡಿಒ ನೇಮಕಾತಿ ಪರೀಕ್ಷೆ : ಸೆ.23 ರಂದು ಉಚಿತ ಕಾರ್ಯಾಗಾರ*
Next Article *ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ : 38.47 ಲಕ್ಷ ಲಾಭ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.