Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
  • *ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*
  • *ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*
  • *ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*
  • *ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*
  • *’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*
  • *ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*
  • *ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *
  • *ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*
  • *ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕರ್ನಾಟಕ ಬುಡಕಟ್ಟು ಮಾನವ ಅಭಿವೃದ್ಧಿ ವರದಿ : ಬುಡಕಟ್ಟು ಜನರ ಸರಾಸರಿ ಜೀವಿತ ಅವಧಿ 58.2 ವರ್ಷಗಳು..! : ಶಿಕ್ಷಣ, ಜೀವನ ಗುಣಮಟ್ಟದಲ್ಲಿ ಕೊಡಗಿನ ಕುರುಬ ಸಮುದಾಯ ಪ್ರಥಮ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಕರ್ನಾಟಕ ಬುಡಕಟ್ಟು ಮಾನವ ಅಭಿವೃದ್ಧಿ ವರದಿ : ಬುಡಕಟ್ಟು ಜನರ ಸರಾಸರಿ ಜೀವಿತ ಅವಧಿ 58.2 ವರ್ಷಗಳು..! : ಶಿಕ್ಷಣ, ಜೀವನ ಗುಣಮಟ್ಟದಲ್ಲಿ ಕೊಡಗಿನ ಕುರುಬ ಸಮುದಾಯ ಪ್ರಥಮ*

ಸೆಪ್ಟೆಂಬರ್ 24, 20244 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮೈಸೂರು NEWS DESK ಸೆ.24 : ಕೇಂದ್ರ ಸರ್ಕಾರದ ಬುಡಕಟ್ಟು ಮಂತ್ರಾಲಯದ ಧನ ಸಹಾಯದೊಂದಿಗೆ ಮೈಸೂರು ವಿಶ್ವವಿದ್ಯಾನಿಲಯದ ಸಾಮಾಜಿಕ ಹೊರಗುಳಿಯುವಿಕೆ ಮತ್ತು ಒಳಗೊಳ್ಳುವಿಕೆ ಅಧ್ಯಯನ ಕೇಂದ್ರ ನಡೆಸಿದ ಬಹು ನಿರೀಕ್ಷಿತ ರಾಜ್ಯದ ಮೊದಲ ಬುಡಕಟ್ಟು ಮಾನವ ಅಭಿವೃದ್ಧಿ ವರದಿ -2022 ಬಿಡುಗಡೆಯಾಗಿದ್ದು ಬುಡಕಟ್ಟು ಅಭಿವೃದ್ಧಿ ವಿಚಾರದಲ್ಲಿ ರಾಜ್ಯವು ಇನ್ನಷ್ಟು ಮುಂದೆ ಸಾಗಬೇಕಾದ ಅನಿವಾರ್ಯತೆಯನ್ನು ಒತ್ತಿ ಹೇಳುತ್ತಿದೆ. ಬಡತನ, ಕಳಪೆ ಆರೋಗ್ಯ ಸೇವೆ, ಸಾಂಪ್ರದಾಯಿಕ ಆರೋಗ್ಯ ವರ್ತನೆಗಳು ಅಪೌಷ್ಟಿಕತೆ, ಮತ್ತು ಅನೈರ್ಮಲ್ಯದಿಂದ ರಾಜ್ಯದ ಬುಡಕಟ್ಟು ಸಮುದಾಯದ ಜನರ ಬದುಕುವ ಸರಾಸರಿ ಆಯಸ್ಸು ಕೇವಲ 58.2 ವರ್ಷಗಳು ಎನ್ನುವ ಅಂಶ ತಿಳಿದುಬಂದಿದೆ. ಮೂರು ವರ್ಷಗಳ ಕಾಲ ರಾಜ್ಯದ 50 ಬುಡಕಟ್ಟು ಸಮುದಾಯಗಳ ಸುಮಾರು ಆರು ಸಾವಿರ ವ್ಯಕ್ತಿಗಳ ಪ್ರಾಥಮಿಕ ಸರ್ವೆಯನ್ನು ಸಾಮಾಜಿಕ ಒಳಗೊಳ್ಳುವಿಕೆ ಅಧ್ಯಯನ ಕೇಂದ್ರ ನಡೆಸಿದ್ದು ರಾಜ್ಯದ ಬುಡಕಟ್ಟು ಸಮುದಾಯಗಳು ಆರೋಗ್ಯ, ಶಿಕ್ಷಣ, ಲಿಂಗ, ಉದ್ಯೋಗ ಮತ್ತು ಭಾಗವಹಿಸುವಿಕೆ ಮುಂತಾದ ವಿಚಾರದಲ್ಲಿ ಕಳಪೆ ಸಾಧನೆಯನ್ನು ಗಮನಿಸಲಾಗಿದೆ. ಈ ಅಧ್ಯಯನವನ್ನು ಸಾಮಾಜಿಕ ಒಳಗೊಳ್ಳುವಿಕೆ ಅಧ್ಯಯನ ಕೇಂದ್ರದ ಸಹಪ್ರಾದ್ಯಾಪಕ ಡಾ. ಡಿ.ಸಿ ನಂಜುಂಡ ಮತ್ತು ಮಂಡ್ಯ ಸ್ನಾತಕೋತ್ತರ ಕೇಂದ್ರದ ಪ್ರೊಫೆಸರ್ ಜಿಎಸ್ ಪ್ರೇಮ್ ಕುಮಾರ ತಂಡವು ನಡೆಸಿದೆ. ಮಾನವ ಅಭಿವೃದ್ದಿ ರ‍್ಯಾಂಕಿಂಗ್ ಪಟ್ಟಿ ಪ್ರಕಾರ ಆರೋಗ್ಯದ ವಿಚಾರದಲ್ಲಿ ಅಡಿಯನ್ ಸಮುದಾಯ ಮೊದಲ ಸ್ಥಾನವನ್ನು ಪಡೆದಿದ್ದರೆ ಮತ್ತು ಜೇನು ಕುರುಬ ಸಮುದಾಯ ಕೊನೆಯ ಸ್ಥಾನ ಪಡೆದಿದೆ. ಬೆಂಗಳೂರು ಗ್ರಾಮಾಂತರವು ಆರೋಗ್ಯದಲ್ಲಿ ಪ್ರಥಮ ಸ್ಥಾನದಲ್ಲಿದ್ದರೆ, ಗದಗ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಶೈಕ್ಷಣಿಕ ಸಾಧನೆಗಳ ವಿಚಾರದಲ್ಲಿ ಕೊಡಗಿನ ಕುರುಬ ಸಮುದಾಯ ಮೊದಲ ಸ್ಥಾನ ಪಡೆದರೆ, ಕಥೋಡಿ ಕಥಕರಿ ಸಮುದಾಯ ಕೊನೆಯ ಸ್ಥಾನ ಪಡೆದಿದೆ. ಜಿಲ್ಲಾವಾರು ಬೆಂಗಳೂರು ಗ್ರಾಮಾಂತರ ಮೊದಲ ಸ್ಥಾನದಲ್ಲಿದ್ದರೆ, ಬೆಳಗಾವಿ ಕೊನೆಯ ಸ್ಥಾನದಲ್ಲಿದೆ. ಜೀವನದ ಗುಣಮಟ್ಟದ ಬಗ್ಗೆ, ಕುರುಬ(ಕೊಡಗು) ಪ್ರಥಮ ಸ್ಥಾನದಲ್ಲಿದ್ದರೆ, ಕಥೋಡಿ ಕತ್ಕರಿ ಸಮುದಾಯ ಕೊನೆಯ ಸ್ಥಾನದಲ್ಲಿದೆ. ಈ ವಿಚಾರದಲ್ಲಿ ಜಿಲ್ಲಾವಾರು ಗಮನಿಸಿದರೆ ಬೆಂಗಳೂರು ಗ್ರಾಮಾಂತರ ಮೊದಲ ಸ್ಥಾನದಲ್ಲಿದ್ದರೆ, ಹಾಸನ ಕೊನೆಯ ಸ್ಥಾನದಲ್ಲಿದೆ. ಅಧ್ಯಯನದ ಪ್ರಕಾರ ಹೆಚ್ಚಿನ ಬುಡಕಟ್ಟು ಜನಾಂಗದವರು ಮಲೇರಿಯಾ, ಕಾಲರಾ, ಕಾಮಾಲೆ ಮತ್ತು ಟೈಫಾಯಿಡ್‌ನಿಂದ ಬಳಲುತ್ತಿದ್ದಾರೆ. ಶೇ.54 ಕ್ಕಿಂತ ಹೆಚ್ಚು ಆದಿವಾಸಿಗಳು ಅಪೌಷ್ಟಿಕತೆಯ ಸಮಸ್ಯೆಯನ್ನು ಹೊಂದಿದ್ದಾರೆ. ಶೇ.47 ಗರ್ಭಿಣಿಯರು ಯಾವುದೇ ಲಸಿಕೆ ಪಡೆದಿಲ್ಲ. ಶೇ.62 ಜನರು ಗುಟ್ಕಾ ಇತ್ಯಾದಿಗಳಿಗೆ ವ್ಯಸನಿಯಾಗಿದ್ದಾರೆ. ಶೇ.3 ಗರ್ಭಿಣಿಯರು ಮನೆಯಲ್ಲಿಯೇ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಶಾಲೆ ಬಿಡುವವರ ಪ್ರಮಾಣ ಆಶ್ರಮ ಶಾಲೆಗಳಲ್ಲಿ ಶೇ.39.3 ಇದ್ದರೆ ಏಕಲವ್ಯ ಶಾಲೆಗಳಲ್ಲಿ ಶೇ.21 ಇದೆ. ಶೇ. 73.5 ಬುಡಕಟ್ಟು ಸಮುದಾಯಕ್ಕೆ ಸ್ವಂತ ಮನೆಯೇ ಇಲ್ಲ. ಶೇ.38 ಪ್ರತಿಶತದಷ್ಟು ಜನರು ಅರಣ್ಯ ಹಕ್ಕುಗಳ ಕಾಯಿದೆ-2006 ರಿಂದ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಕಂಡುಬಂದಿದೆ, MGNREGA ಕಾರ್ಯಕ್ರಮವು ಕೇವಲ ಶೇ.40 ಮಂದಿಯನ್ನು ಮಾತ್ರ ತಲುಪಿದೆ. ಶೇ.79ರಷ್ಟು ಮಂದಿಗೆ ಶೌಚಾಲಯ ವ್ಯವಸ್ಥೆ ಇಲ್ಲ. ಶೇ.18 ರಷ್ಟು ಜನರಿಗೆ ಕುಡಿಯುವ ನೀರಿನ ಮೂಲಗಳೇ ಇಲ್ಲ. ಶೇ.33 ಮಹಿಳೆಯರು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ಶೇ21 ಮಂದಿ ಇನ್ನೂ ಸೌದೆಯನ್ನು ಅಡುಗೆಗೆ ಬಳಸುತ್ತಿದ್ದಾರೆ. ಹೆಚ್ಚಿನವರು ಆಧಾರ್ ಮತ್ತು ವೋಟರ್ ಐಡಿ ಹೊಂದಿಲ್ಲ. ಕೇಂದ್ರ ಬುಡಕಟ್ಟು ಮಂತ್ರಾಲಯ ಮೈಸೂರು ವಿವಿಯ ಸಿಎಸ್‌ಎಸ್‌ಐಪಿ ಕೇಂದ್ರವನ್ನು ಬುಡಕಟ್ಟು ಅಧ್ಯಯನದಲ್ಲಿ ಉತ್ಕೃಷ್ಟ ಕೇಂದ್ರವೆಂದು ಗುರುತಿಸುವುದರ ಜೊತೆಗೆ ರೂ.30 ಲಕ್ಷಗಳನ್ನು ಈ ವರದಿ ತಯಾರಿಕೆಗೆ 2020ರಲ್ಲಿ ಮಂಜೂರು ಮಾಡಿತ್ತು. ಕೇರಳ ರಾಜ್ಯ 2010ರಲ್ಲಿ ಇಂತಹ ವರದಿಯನ್ನು ಹೊರತಂದಿದ್ದು, ನಂತರ ಇದು ದೇಶದಲ್ಲಿ ಎರಡನೇ ಪ್ರಯತ್ನ ಎನ್ನಬಹುದು. ಈ ವರದಿಯನ್ನು ಈಗಾಗಲೇ ಬುಡಕಟ್ಟು ಮಂತ್ರಾಲಯಕ್ಕೆ ಸಲ್ಲಿಸಲಾಗಿದೆ. ಪ್ರಸ್ತುತ ಈ ವರದಿ ಮಾನವ ಅಭಿವೃದ್ಧಿ ಸೂಚ್ಯಂಕಗಳಲ್ಲಿ ಬುಡಕಟ್ಟು ಸಮುದಾಯದಲ್ಲಿ ಒಂದು ಹಂತದ ಅಸಮಾನತೆಗಳನ್ನು ಸೂಚಿಸುತ್ತಿದೆ. -(ಡಾ. ಡಿ.ಸಿ ನಂಜುಂಡ, ಸಹ ಪ್ರಾಧ್ಯಾಪಕರು, ಸಿ.ಎಸ್. ಎಸ್. ಈ ಐ.ಪಿ ಕೇಂದ್ರ)

 

ಕೆಲವು ಸೂಕ್ಷ್ಮ ಬುಡಕಟ್ಟು ಸಮುದಾಯಗಳ ಕಣ್ಮರೆ?

2011ರ ಜನಗಣತಿ ವರದಿಯನ್ನು ಆಧರಿಸಿ ಹೇಳುವುದಾದರೆ ರಾಜ್ಯದ ಕೆಲವೊಂದು ಸೂಕ್ಷ್ಮ ಬುಡಕಟ್ಟು ಸಮುದಾಯಗಳು ಕಣ್ಮರೆಯಾಗಿರುವುದು/ ಪತ್ತೆಯಾಗದಿರುವುದು ಈ ಅಧ್ಯಯನದಿಂದ ಪತ್ತೆಯಾಗಿದೆ. ಇವುಗಳ ಇರುವಿಕೆಯ ಬಗ್ಗೆ ಯಾವುದೇ ಜಿಲ್ಲಾಡಳಿತಗಳಿಗೆ ಸರಿಯಾದ ಮಾಹಿತಿ ಇಲ್ಲ. ಸಧ್ಯ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿರುವ ಬುಡಕಟ್ಟು ಸಮುದಾಯ ಮತ್ತು 2011ರ ಜನಗಣತಿ ಅಂಕೆ ಸಂಖ್ಯೆಗಳು (ಬುಡಕಟ್ಟು ಸಮುದಾಯದ ವಿಚಾರದಲ್ಲಿ) ತಾಳೆ ಆಗುತ್ತಿಲ್ಲ. ಕರ್ನಾಟಕದ ಬುಡಕಟ್ಟು ಜನರಿಗೆ ಸಂಬಂಧಪಟ್ಟ 2011ರ ಜನಗಣತಿ ವರದಿಯ ಮತ್ತಷ್ಟು ಪರಾಮರ್ಶನೆ ಅಗತ್ಯ. ಕರ್ನಾಟಕದ ಕೆಲವು ಸೂಕ್ಷ್ಮ ಬುಡಕಟ್ಟು ಸಮುದಾಯಗಳು ನಾಪತ್ತೆಯಾಗಿರುವ ಕೆಲವು ವರ್ಷಗಳ ಹಿಂದೆ ಲೋಕಸಭೆಯಲ್ಲಿ ಚರ್ಚೆ ನಡೆದಿತ್ತು. ಸಾಮಾನ್ಯವಾಗಿ ಮಾನವ ಅಭಿವೃದ್ಧಿ ವರದಿಯನ್ನು ಸಂಪೂರ್ಣವಾಗಿ ದ್ವಿತೀಯ ದಾಖಲೆಗಳ ಮೂಲಕ ನಡೆಸಲಾಗುತ್ತದೆ. ಆದರೆ ಈ ವರದಿ ಪ್ರಾಥಮಿಕ ದತ್ತಾಂಶಗಳ ಆಧಾರಿತವಾಗಿದೆ. ಇದು ಈ ವರದಿಯ ವಿಶೇಷತೆ ಆಧುನಿಕ ಸಾಫ್ಟ್ವೇರ್ ಬಳಸಿ ದತ್ತಾಂಶಗಳನ್ನು ವಿಶ್ಲೇಷಣೆ ಮಾಡಲಾಗಿದೆ. ಬುಡಕಟ್ಟು ಜನರ ಆರೋಗ್ಯ, ಶಿಕ್ಷಣ ಮತ್ತು ಜೀವನ ಮಟ್ಟ ವಿಚಾರದಲ್ಲಿ ರಾಜ್ಯ ಬಹುದೂರ ಸಾಗಬೇಕಿದೆ. ಮಾನವ ಅಭಿವೃದ್ದಿ ವರದಿಯನ್ನು ಇತರೆ ವರದಿಗಳೊಂದಿಗೆ ಹೋಲಿಸುವಂತಿಲ್ಲ. -(ಪ್ರೊ. ಜಿ.ಎಸ್ ಪ್ರೇಮ್ ಕುಮಾರ, ಅರ್ಥಶಾಸ್ತ್ರ ಪ್ರಾಧ್ಯಾಪಕರು) 

ಮೀಸಲಾತಿ ಸೌಲಭ್ಯದ ಬಗ್ಗೆ ಅರಿವೇ ಇಲ್ಲ..!
ಸ್ವಾತಂತ್ರ‍್ಯ ಬಂದು 75 ವರ್ಷಗಳಾದರೂ ಕೆಲವು ಅರ್ಹ ಬುಡಕಟ್ಟುಗಳಿಗೆ ಮೀಸಲಾತಿ ಸೌಲಭ್ಯ ಇನ್ನೂ ಸಿಕ್ಕಿಲ್ಲ ಎಂಬುದು ಸಮಸ್ಯೆಯಾಗಿದೆ. ಈ ವರದಿ ಪ್ರಕಾರ ಶೇ. 31.55 ರಷ್ಟು ಬುಡಕಟ್ಟು ಮಂದಿಗೆ ಯಾವುದೇ ಮೀಸಲಾತಿ ಸೌಲಭ್ಯಗಳನ್ನು ಇದುವರೆಗೆ ಪಡೆದಿಲ್ಲ ಶೇ. 17.29 ಬುಡಕಟ್ಟು ಜನರಿಗೆ ಮೀಸಲಾತಿ ಸೌಲಭ್ಯಗಳ ಬಗ್ಗೆ ಯಾವುದೇ ಮಾಹಿತಿಯೇ ತಿಳಿದಿಲ್ಲ. ಪರಡಿ, ಡೋಂಗ್ರಿ ಗೆರಾಸಿಯಾ, ಮೇದ, ಇರುಳಿಗ, ಕಣಿಯಾನ್ ಮತ್ತು ಸಿದ್ದಿ ಬುಡಕಟ್ಟುಗಳ ಹೆಚ್ಚಿನ ಮಂದಿಗೆ ಮೀಸಲಾತಿ ಸೌಲಭ್ಯದ ಬಗ್ಗೆ ಅರಿವೇ ಇಲ್ಲದಿರುವುದು ನಿಜಕ್ಕೂ ಬೇಸರದ ಸಂಗತಿ. ಅರ್ಹ ಬುಡಕಟ್ಟುಗಳಿಗೆ ಒಳಮೀಸಲಾತಿ ನೀಡುವುದರ ಕುರಿತಾಗಿ ಯೋಚಿಸಲು ಇದು ಸಕಾಲ. ಬುಡಕಟ್ಟು ಸಹಕಾರ ಮಾರಾಟ ಅಭಿವೃದ್ಧಿ ಒಕ್ಕೂಟ ಮತ್ತು ಬುಡಕಟ್ಟು ವಿವಿಧೋದ್ದೇಶ ಸಹಕಾರ ಸಂಘಗಳು ಬಲವರ್ಧನೆಯಾಗಬೇಕು. ಇದರಿಂದ ಆದಿವಾಸಿಗಳ ಜೀವನಮಟ್ಟ ಸುಧಾರಿಸಬೇಕು. ಈ ಎರಡೂ ಸಂಸ್ಥೆಗಳಿಗೆ ಸರ್ಕಾರದಿಂದ ನಿರಂತರ ಅನುದಾನ ಮತ್ತು ಪ್ರೋತ್ಸಾಹ ಸಿಗಬೇಕು. ಕಪಾರ್ಟ್ ಸಂಸ್ಥೆ ನೇರವಾಗಿ ಆದಿವಾಸಿಗಳೊಂದಿಗೆ ಕೆಲಸ ಮಾಡಬೇಕು ಮತ್ತು “ವನ್ ಧನ್ ವಿಕಾಸ ಕೇಂದ್ರಗಳ ಅನುಷ್ಠಾನ ಅಗತ್ಯ. ಪಿಎಮ್ ಜನ್-ಮನ್ ಯೋಜನೆ ಸರಿಯಾಗಿ ಜಾರಿ ಆಗಬೇಕು. ಬುಡಕಟ್ಟು ಸಂಶೋಧನೆ ವಿಚಾರದಲ್ಲಿ 2011 ಸ್ಥಾಪನೆಗೊಂಡ ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಮತ್ತಷ್ಟು ಸಕ್ರಿಯವಾಗಬೇಕಿದೆ. ಸರಕಾರದ ಕಾರ್ಯಕ್ರಮಗಳು ಕುರಿತು ಬುಡಕಟ್ಟು ಜನರಲ್ಲಿ ಜಾಗೃತಿ ಮೂಡಿಸಬೇಕು. ಸಂಶೋಧನಾ ವರದಿಗಳು ಮತ್ತಷ್ಟು ಗುಣಾತ್ಮಕವಾಗಬೇಕಾಗಿದೆ ಕೇಂದ್ರಕ್ಕೆ ಮತ್ತಷ್ಟು ಮಾನವ ಸಂಪನ್ಮೂಲಗಳ ತ್ವರಿತ ಅಗತ್ಯವಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಮಾ:೦೪: ವಿದ್ಯಾರ್ಥಿ ಜೀವನವು ಹಲವು ಒತ್ತಡಗಳಿಂದ ನಿರ್ಮಾಣವಾಗುತ್ತಿದೆ ಎನ್ನುವುದು ಸುಳ್ಳು.ಕಲಿಕೆ ಮತ್ತು ಸಾಮಾಜಿಕ ಚಿಂತನೆಯನ್ನು ಸಮಾನವಾಗಿ…

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*

ಮಾರ್ಚ್ 4, 2026

*ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*

ಮಾರ್ಚ್ 4, 2026

*’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*

ಮಾರ್ಚ್ 4, 2026

*ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*

ಮಾರ್ಚ್ 4, 2026

*ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *

ಮಾರ್ಚ್ 4, 2026

*ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*

ಮಾರ್ಚ್ 4, 2026

*ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*

ಮಾರ್ಚ್ 4, 2026

*ವಲಸೆ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ*

ಮಾರ್ಚ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.