
ಮಡಿಕೇರಿ ಸೆ.24 NEWS DESK : ಭಾಗಮಂಡಲ ಹೋಬಳಿ ಕರಿಕೆ ಗ್ರಾಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಸೆ.26 ರಂದು ಬೆಳಗ್ಗೆ 11 ಗಂಟೆಗೆ ಪಿಂಚಣಿ ದಿನ ಕಾರ್ಯಕ್ರಮ ನಡೆಯಲಿದೆ. ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಮಾಸಾಶನಗಳ ಫಲಾನುಭವಿಗಳು ಕುಂದು ಕೊರತೆಗಳನ್ನು ನೋಂದಾಯಿಸುವಂತೆ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಪ್ರವೀಣ್ ಕುಮಾರ್ ಕೋರಿದ್ದಾರೆ.










