Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*
  • *ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*
  • *5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*
  • *ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*
  • *ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*
  • *ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*
  • *ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*
  • *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದಸರಾ ಜನೋತ್ಸವ : ಮಡಿಕೇರಿಯಲ್ಲಿ 9 ದಿನಗಳು ಜನಾಕರ್ಷಣೆಯ ಕಾರ್ಯಕ್ರಮಗಳು : ಅ.11 ರಂದು ಅರ್ಜುನ್ ಜನ್ಯ-ರಾಜೇಶ್ ಕೃಷ್ಣನ್‍ರಿಂದ ಸಂಗೀತ ರಸಮಂಜರಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ದಸರಾ ಜನೋತ್ಸವ : ಮಡಿಕೇರಿಯಲ್ಲಿ 9 ದಿನಗಳು ಜನಾಕರ್ಷಣೆಯ ಕಾರ್ಯಕ್ರಮಗಳು : ಅ.11 ರಂದು ಅರ್ಜುನ್ ಜನ್ಯ-ರಾಜೇಶ್ ಕೃಷ್ಣನ್‍ರಿಂದ ಸಂಗೀತ ರಸಮಂಜರಿ*

ಸೆಪ್ಟೆಂಬರ್ 27, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

 

ಮಡಿಕೇರಿ ಸೆ.27 NEWS DESK  : ಮಡಿಕೇರಿ ದಸರಾ ಜನೋತ್ಸವ ಪ್ರಯುಕ್ತ ಅಕ್ಟೋಬರ್ 4 ರಂದು 12 ರವರೆಗೆ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ಆಯೋಜಿಸಲ್ಪಟ್ಟಿದೆ. ಜಿಲ್ಲಾಧಿಕಾರಿ ವೆಂಕಟರಾಜಾ ಅಧ್ಯಕ್ಷತೆಯಲ್ಲಿ ನಡೆದ ಮಡಿಕೇರಿ ನಗರ ದಸರಾ ಸಮಿತಿ ಪ್ರಮುಖರ ಸಭೆಯಲ್ಲಿ ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ಸಾಂಸ್ಕೃತಿಕ ಸಮಿತಿ ವತಿಯಿಂದ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳ ಮಾಹಿತಿ ನೀಡಿದರು ಅ.4 ರಂದು ಸಂಜೆ 6 ಗಂಟೆಗೆ ಗಾಂಧಿ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಅ. 5 ರಂದು ಬೆಳಗ್ಗೆ 9.30 ಗಂಟೆಯಿಂದ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ 11 ನೇ ವರ್ಷದ ಮಕ್ಕಳ ದಸರಾ ಅಂಗವಾಗಿ ಮಕ್ಕಳ ಸಂತೆ, ಮಕ್ಕಳ ಅಂಗಡಿ, ಮಕ್ಕಳ ಮಂಟಪ, ಛದ್ಮವೇಷ ಕ್ಲೇಮಾಡೆಲಿಂಗ್ ಸ್ಪರ್ಧೆಗಳು ಆಯೋಜಿತವಾಗಿದೆ, ಅಂದು ಸಂಜೆ 6 ಗಂಟೆಯಿಂದ ಮಕ್ಕಳಿಂದಲೇ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದೆ. ಅಕ್ಟೋಬರ್ 6 ರಂದು ಬೆಳಗ್ಗೆ 10 ಗಂಟೆಗೆ ಮೊದಲ ವರ್ಷದ ಕಾಫಿ ದಸರಾ ಚಾಲನೆಗೊಳ್ಳಲಿದೆ. ಕಾಫಿ ಮಂಡಳಿ, ಕರ್ನಾಟಕ ಬೆಳೆಗಾರರ ಸಂಘ, ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ, ಮೀನುಗಾರಿಕಾ ಇಲಾಖೆ, ಚೆಟ್ಟಳ್ಳಿ ತೋಟಗಾರಿಕಾ ಸಂಶೋಧನಾ ಕೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾಫಿ ದಸರಾ ಆಯೋಜಿತವಾಗಿದೆ, ಕಾಫಿ ದಸರಾ ಪ್ರಯುಕ್ತ ನಿರ್ಮಾಣಗೊಳ್ಳುವ 31 ಮಳಿಗೆಗಳಲ್ಲಿ ಕಾಫಿ, ಕೃಷಿ ಸಂಬಂಧಿತ ಪ್ರದರ್ಶನ, ಮಾರಾಟ ಮೇಳ ಇರಲಿದೆ, 11 ಗಂಟೆಯಿಂದ ಕಲಾ ಸಂಭ್ರಮ ವೇದಿಕೆಯಲ್ಲಿ ಕಾಫಿ ಮತ್ತು ಕೃಷಿ ಸಂಬಂಧಿತ ಪರಿಣಿತರಿಂದ ವಿಚಾರಸಂಕಿರಣ ಆಯೋಜಿತವಾಗಿದೆ, ಸಂಜೆ 5 ಗಂಟೆಯವರೆಗೆ ಮಳಿಗೆಗಳು ಸಾರ್ವಜನಿಕರ ಭೇಟಿಗೆ ತೆರೆದಿರುತ್ತದೆ, ಸಂಜೆ 6 ಗಂಟೆಯಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿತವಾಗಿದೆ. ಅಕ್ಟೋಬರ್ 7 ರಂದು ಬೆಳಗ್ಗೆ 10 ಗಂಟೆಯಿಂದ ಕಾಫಿ ದಸರಾ ಅಂಗವಾಗಿ ವಿವಿಧ ಮಳಿಗೆಗಳು ಸಂಜೆ 5 ಗಂಟೆಯವರೆಗೆ ತೆರೆದಿರುತ್ತವೆ, ಬೆಳಗ್ಗೆ 10 ಗಂಟೆಯಿಂದ ಕಾಫಿ ಕೃಷಿ ಸಂಬಂಧಿತ ವಿಚಾರಸಂಕಿರಣಗಳು ಆಯೋಜಿಸಲ್ಪಟ್ಟಿದೆ, ಕಾಫಿ ದಸರಾವನ್ನು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಅವರ ಮಾರ್ಗದರ್ಶನದಲ್ಲಿ ಆಯೋಜಿಸಲಾಗುತ್ತಿದೆ ಎಂದು ಅನಿಲ್ ಸಭೆಗೆ ಮಾಹಿತಿ ನೀಡಿದರು. ಅಂದು ಸಂಜೆ 6 ಗಂಟೆಯಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಅ.8 ರಂದು ಮಂಗಳವಾರ 7 ನೇ ವರ್ಷದ ಮಹಿಳಾ ದಸರಾ ನಡೆಯಲಿದ್ದು, ವೈವಿಧ್ಯಮಯ ಮನರಂಜನಾ ಸ್ಪರ್ಧೆಗಳು ಮಹಿಳೆಯರಿಗಾಗಿ ಆಯೋಜಿತವಾಗಿದ್ದು, ಮಡಿಕೇರಿ ನಗರಸಭಾ ಸದಸ್ಯೆಯರು, ಕೊಡಗು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಮಹಿಳಾ ದಸರಾ ಆಯೋಜಿಸಲ್ಪಟ್ಟಿದೆ, ಸಂಜೆ 6 ಗಂಟೆಗೆ ಮಹಿಳೆಯರಿಂದಲೇ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದೆ. ಅ.9 ರಂದು ಸಂಜೆ 6 ಗಂಟೆಯಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಅ.10 ರಂದು ಬೆಳಗ್ಗೆ 9 ಗಂಟೆಗೆ ಕೊಡಗು ಜಿಲ್ಲಾ ಜಾನಪದ ಪರಿಷತ್ ಸಹಯೋಗದಲ್ಲಿ ಜಾನಪದ ದಸರಾ ಆಯೋಜಿಸಲಾಗಿದ್ದು, ಕಲಾಜಾಥಾ, ವೈವಿಧ್ಯಮಯ ಜಾನಪದ ಕಲಾ ತಂಡಗಳ ಪ್ರದರ್ಶನ ಆಯೋಜಿತವಾಗಿದೆ, ಸಂಜೆ 6 ಗಂಟೆಗೆ ಸೋಮು ಮತ್ತು ಅಜ್ಜೇಟಿರ ಲೋಕೇಶ್ ಸಂಚಾಲಕತ್ವದಲ್ಲಿ ಯುವ ದಸರಾ ಆಯೋಜಿತವಾಗಿದೆ. ಅ.11 ರಂದು ಆಯುಧಪೂಜಾ ಪ್ರಯುಕ್ತ ಸಂಜೆ 7 ಗಂಟೆಗೆ ರಾಜ್ಯದ ಹೆಸರಾಂತ ಗಾಯಕರಾದ ಅರ್ಜುನ್ ಜನ್ಯ ಮತ್ತು ರಾಜೇಶ್ ಕೃಷ್ಣನ್ ತಂಡದಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ಆಯೋಜಿತವಾಗಿದೆ, ಅ.12 ರಂದು ವಿಜಯದಶಮಿ ಹಿನ್ನೆಲೆಯಲ್ಲಿ 7 ಗಂಟೆಯಿಂದ 10 ಗಂಟೆಯವರೆಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ, ರಾತ್ರಿ 10 ಗಂಟೆಯಿಂದ ಮರುದಿನ ಬೆಳಗ್ಗಿನ ಜಾವದವರೆಗೆ ರಾಜ್ಯದ ಹೆಸರಾಂತ ಸಂಗೀತ ತಂಡದಿಂದ ಸಂಗೀತ ರಸಮಂಜರಿ ನಡೆಯಲಿದೆ. ಕಾರ್ಯಕ್ರಮ ನೀಡುವ ಕಲಾತಂಡಗಳು, ಕಲಾವಿದರಿಗೆ ಅಗತ್ಯ ಸೌಲಭ್ಯ ನೀಡುವಂತೆ ಜಿಲ್ಲಾಧಿಕಾರಿ ವೆಂಕಟರಾಜಾ ಸೂಚಿಸಿದರು. ದಸರಾ ಕವಿಗೋಷ್ಟಿ-ಅ.9 ರಂದು 60 ಕವಿಗಳು ಕವನ ವಾಚಿಸಲಿರುವ ದಸರಾ ಬಹುಭಾμÁ ಕವಿಗೋಷ್ಠಿ ಗಾಂಧಿ ಮೈದಾನದಲ್ಲಿ ನಡೆಯಲಿದೆ ಎಂದು ದಸರಾ ಬಹುಭಾμÁ ಕವಿಗೋಷ್ಠಿ ಸಮಿತಿ ಅಧ್ಯಕ್ಷ ಉಜ್ವಲ್ ರಂಜಿತ್ ಮಾಹಿತಿ ನೀಡಿದರು, ವಾಚಿಸಲ್ಪಡುವ ಕವನಗಳನ್ನು ಪುಸ್ತಕರೂಪದಲ್ಲಿ ಸಂಕಲವನಾಗಿ ಪ್ರಕಟಿಸಲಾಗುತ್ತದೆ, 200 ಅಧಿಕ ಕವನಗಳು ಆಯ್ಕೆ ಪ್ರಕ್ರಿಯೆಗೆ ಬಂದಿದ್ದವು, ಈ ಪೈಕಿ 60 ಕವಿತೆಗಳನ್ನು ಆಯ್ಕೆ ಮಾಡಲಾಗಿದೆ ಎಂದರು. ದಸರಾ ಕ್ರೀಡಾಕೂಟ –ಅ.5 ರಂದು ಬೆಳಗ್ಗೆ 7 ಗಂಟೆಗೆ ರಸ್ತೆ ಓಟ, ಜಿಲ್ಲಾ ಕ್ರೀಡಾಂಗಣದಲ್ಲಿ ಫುಟ್ಬಾಲ್ ಮತ್ತು ಬಾಸ್ಕೆಟ್ ಬಾಲ್ ಕ್ರೀಡೆಗಳು ಆಯೋಜಿತವಾಗಿದೆ, ಅ.6 ರಂದು ಬೆಳಗ್ಗೆ 7 ಗಂಟೆಗೆ ನಗರದ ಬನ್ನಿಮಂಟಪದಿಂದ ಕ್ರೀಡಾಜ್ಯೋತಿಯನ್ನು ತಂದು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣಕ್ಕೆ ತರಲಾಗುತ್ತದೆ, ಅಂದು ಇಡೀ ದಿನ ವಾಲಿಬಾಲ್, ಮಕ್ಕಳ ಕ್ರೀಡಾಕೂಟ ಆಯೋಜಿತವಾಗಿದೆ. ಅ.9 ರಂದು ಹೋಟೆಲ್ ರಾಜದರ್ಶನ್ ನಲ್ಲಿ ಚೆಸ್ ಮತ್ತು ಕೇರಂಬೋರ್ಡ್ ಸ್ಪರ್ಧೆಗಳು ಆಯೋಜಿತವಾಗಿದೆ. ಅ.10 ರಂದು ನಗರದ ಗಾಂಧಿ ಮೈದಾನದಲ್ಲಿ ಕಬ್ಬಡ್ಡಿ ಸ್ಪರ್ಧೆ ಆಯೋಜಿತವಾಗಿದೆ ಎಂದು ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಪ್ರದೀಪ್ ಕರ್ಕೇರ ಮಾಹಿತಿ ನೀಡಿದ್ದಾರೆ. ದಸರಾ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ರಾಜೇಶ್ ಬಿ.ವೈ, ಖಜಾಂಜಿ ಅರುಣ್ ಶೆಟ್ಟಿ ಸೇರಿದಂತೆ ದಸರಾ ಸಮಿತಿ ಪ್ರಮುಖರು ಸಭೆಯಲ್ಲಿ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮೇ 6 NEWS DESK : ಪೆರುಂಬಾಡಿಯ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿಯ ಎಸ್ಇಎ ಕಾಲೇಜು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ…

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*

ಮೇ 5, 2026

*ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*

ಮೇ 5, 2026

*ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*

ಮೇ 5, 2026

*ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮೇ 5, 2026

*ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*

ಮೇ 5, 2026

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*

ಮೇ 5, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*

ಮೇ 5, 2026

*ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.