Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*
  • *ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 
  • *ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*
  • *ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*
  • *ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*
  • *ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*
  • *ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*
  • *ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*
  • *ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
  • *ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಡಿಸಿಸಿ ಬ್ಯಾಂಕ್ ನಿಂದ ವಿದ್ಯಾಭ್ಯಾಸ ಸಾಲದ ಯೋಜನೆ ಜಾರಿ : ಕೊಡಂದೇರ ಪಿ.ಗಣಪತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಡಿಸಿಸಿ ಬ್ಯಾಂಕ್ ನಿಂದ ವಿದ್ಯಾಭ್ಯಾಸ ಸಾಲದ ಯೋಜನೆ ಜಾರಿ : ಕೊಡಂದೇರ ಪಿ.ಗಣಪತಿ*

ಸೆಪ್ಟೆಂಬರ್ 27, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.27 NEWS DESK : ಕೊಡಗು ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಸಾಲ ಸಾಮಾನ್ಯವಾಗಿ ವಾಣಿಜ್ಯ ಬ್ಯಾಂಕುಗಳಲ್ಲಿ ಮಾತ್ರ ಪಡೆಯಲು ಅವಕಾಶವಿದೆ. ಆದರೆ ಜಿಲ್ಲೆಯ ರೈತರು ಮತ್ತು ಬ್ಯಾಂಕಿನ ಹಾಲಿ ಗ್ರಾಹಕರ ಮಕ್ಕಳು ದೇಶ ಮತ್ತು ವಿದೇಶದಲ್ಲಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದ್ಯಾಭ್ಯಾಸ ಸಾಲ ಪಡೆಯಲು ವಂಚಿತರಾಗಿರುವುದನ್ನು ಪರಿಗಣಿಸಿ ರೈತರ ಮಕ್ಕಳಿಗೆ ಅನುಕೂಲವಾಗುವಂತೆ ಅವಶ್ಯವಿರುವ “ವಿದ್ಯಾ ಸಹಕಾರ” ವೆಂಬ ವಿದ್ಯಾಭ್ಯಾಸ ಸಾಲದ ಯೋಜನೆಯನ್ನು ಬ್ಯಾಂಕಿನಲ್ಲಿ ಪ್ರಪ್ರಥಮವಾಗಿ ಜಾರಿಗೊಳಿಸಿ ವೈಯಕ್ತಿಕ ಗರಿಷ್ಠ ರೂ.60 ಲಕ್ಷ ವರೆಗೆ ಸಾಲ ನೀಡಲಾಗುತ್ತಿದ್ದು, ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಕೊಡಗು ಜಿಲ್ಲಾ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ತಿಳಿಸಿದ್ದಾರೆ. 2023-24 ನೇ ಸಾಲಿನಲ್ಲಿ ಒಟ್ಟು ವ್ಯವಹಾರ ರೂ.2926.07 ಕೋಟಿ ದಾಖಲಿಸಿದೆ. ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ ಈ ಬಾರಿ ರೂ 524.97 ಏರಿಕೆಯನ್ನು ಕಂಡಿದೆ ಎಂದು ಹೇಳಿದ್ದಾರೆ. ರೈತ ಸದಸ್ಯರ ಬೆಳೆ ಸಾಲದ ಬೇಡಿಕೆಯನ್ನು ಪೂರೈಸಲು ಅನುಕೂಲವಾಗುವಂತೆ ಬ್ಯಾಂಕು ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ತಹಲ್‍ವರೆಗೆ ರೂ.1006.94 ಕೋಟಿ ಮೊತ್ತದ ಎನ್.ಸಿ.ಎಲ್. ಮಂಜೂರಾತಿ ಮಾಡಿ ಈಗಾಗಲೇ ರೂ 730.36 ಕೋಟಿ ಅರ್ಹ ರೈತ ಸದಸ್ಯರಿಗೆ ಸಾಲ ವಿತರಣೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರದ ಯೋಜನೆಯಂತೆ ರೂ 3 ಲಕ್ಷ ಮೇಲ್ಪಟ್ಟು ರೂ 5 ಲಕ್ಷ ದವರೆಗೆ ಶೂನ್ಯ ಬಡ್ಡಿ ದರದಲ್ಲಿ ಕೆಸಿಸಿ ಸಾಲವನ್ನು ರಾಜ್ಯದ ಇತರ ಜಿಲ್ಲಾ ಡಿಸಿಸಿ ಬ್ಯಾಂಕುಗಳು ಸ್ವಂತ ಬಂಡವಾಳದಿಂದ ಸಾಲ ನೀಡಲು ಮುಂದೆ ಬಾರದಿದ್ದರು ಕೊಡಗು ಜಿಲ್ಲಾ ಬ್ಯಾಂಕು ಸ್ವಂತ ಬಂಡವಾಳದಿಂದ ಕೆಸಿಸಿ ಸಾಲ ರೂ.318 ಕೋಟಿ ವಿತರಣೆ ಮಾಡಿ ರಾಜ್ಯಕ್ಕೆ ಮಾದರಿಯಾಗಿರುತ್ತದೆಂದು ಅಧ್ಯಕ್ಷರಾದ ಕೊಡಂದೇರ ಪಿ.ಗಣಪತಿ ವಿವರಿಸಿದರು. ಜಿಲ್ಲೆಯ ಸದಸ್ಯ ಸಹಕಾರ ಸಂಘಗಳಿಗೆ ಹಾಗೂ ಇತರ ಖಾಸಗಿ ಸಂಘ/ ಸಂಸ್ಥೆಗಳಿಗೆ ಅನುಕೂಲವಾಗುವಂತೆ ನಿವೇಶನ/ ಕಟ್ಟಡ ಖರೀದಿಗಾಗಿ 2024-25 ನೇ ಸಾಲಿನಿಂದ ಹೊಸ ಸಾಲ ಯೋಜನೆ ರೂಪಿಸಲಾಗಿದೆ. ಹಾಲಿ ನೀಡುತ್ತಿರುವ ಸೋಲರ್ ಅಳವಡಿಕೆಗೆ ಇರುವ ಸಾಲದ ಮಿತಿಯನ್ನು ರೂ 60 ಲಕ್ಷ ಗಳಿಗೆ ಹೆಚ್ಚಿಸಲಾಗಿದೆ. ಹಾಗೂ ಸಿಸಿಟಿವಿ ಮತ್ತು ಇನ್ವರ್ಟರ್ ಅಳವಡಿಕೆಗಾಗಿ ರೂ 60 ಲಕ್ಷಗಳವರೆಗೆ ಸಾಲ ನೀಡಿಕೆಗೆ ಹೊಸ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು. ಜಿಲ್ಲೆಯ ಪ್ರಾಥಮಿಕ ಸಹಕಾರ ಸಂಘಗಳಿಗೆ ನಬಾರ್ಡ್ ವತಿಯಿಂದ ಎಂಎಸ್‍ಸಿ ಸಾಲವನ್ನು ನೀಡುತ್ತಿದ್ದು, ಇತರೆ ಸಂಘಗಳು ಈ ಯೋಜನೆಯಿಂದ ವಂಚಿತರಾಗಿರುವುದರಿಂದ ಸದಸ್ಯ ಸಹಕಾರ ಸಂಘಗಳು ಕೈಗೊಳ್ಳಲು ಉದ್ದೇಶಿಸಿರುವ ವಿವಿದ್ದೋದ್ದೇಶಿತ ಯೋಜನೆಗಳಿಗೆ (ಎಂಎಸ್‍ಸಿ) ಬ್ಯಾಂಕಿನಿಂದ ಯೋಜನಾ ವೆಚ್ಚದ ಶೇ.90 ರಷ್ಟು ಸಾಲವನ್ನು ಶೇ.4 ರಷ್ಟು ಬಡ್ಡಿ ಪ್ರೋತ್ಸಾಹಧನ ಹಾಗೂ ಗರಿಷ್ಠ ರೂ.2.50 ಲಕ್ಷಗಳಷ್ಟು ಅನುದಾನ ಸಹಿತ ಯೋಜನೆಯು ಕಾರ್ಯಗತದಲ್ಲಿದ್ದು, ಬ್ಯಾಂಕು ನಬಾರ್ಡ್ ಮತ್ತು ಎನ್‍ಸಿಡಿಸಿ ಯೋಜನೆಗಳಿಗೆ ಸರಿಸಮವಾಗಿ ಸದಸ್ಯ ಸಹಕಾರ ಸಂಘಗಳ ಯೋಜಿತ ಉದ್ದೇಶಗಳಿಗೆ ಒದಗಿಸಿಕೊಡುವ ಸಾಲ ಸೌಲಭ್ಯದ ಅನುಷ್ಠಾನಕ್ಕಾಗಿ ಬ್ಯಾಂಕು ರೂ.50 ಲಕ್ಷ ಮೊತ್ತವನ್ನು ಈಗಾಗಲೇ ಕಾಯ್ದಿರಿಸಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಸದಸ್ಯ ಸಹಕಾರ ಸಂಘಗಳು ಬ್ಯಾಂಕು ರೂಪಿಸಿರುವ ಈ ವಿಶೇಷ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಅವರು ಕೋರಿದರು. 2024ರ ಮಾರ್ಚ್ ಅಂತ್ಯಕ್ಕೆ ಬ್ಯಾಂಕಿನ ಅನುತ್ಪಾದಕ ಆಸ್ತಿಗಳು(ಎನ್‍ಪಿಎ) ಪ್ರಮಾಣವು ಹೊರಬಾಕಿ ನಿಂತ ಸಾಲಕ್ಕೆ ಅನುತ್ಪಾದಕ ಆಸ್ತಿಯ ಪ್ರಮಾಣವು ಶೇ.1.88 ರಷ್ಟಿದ್ದು, ರಾಜ್ಯದ ಇತರ ಡಿಸಿಸಿ ಬ್ಯಾಂಕಿಗೆ ಹೋಲಿಸಿದಲ್ಲಿ ಅತೀ ಕಡಿಮೆ ಎನ್‍ಪಿಎ ಪ್ರಮಾಣ ಇರುವ ಬ್ಯಾಂಕು ಕೊಡಗು ಜಿಲ್ಲಾ ಸಹಕಾರ ಬ್ಯಾಂಕು ಎಂದು ಹೇಳಲು ಹೆಮ್ಮೆ ಪಡುತೇನೆಂದು ಎಂದು ಅಧ್ಯಕ್ಷರು ವಿವರಿಸಿದ್ದಾರೆ. ಕೊಡಗು ಜಿಲ್ಲೆಯ ಸಹಕಾರ ವಿವಿದ ಸಹಕಾರ ಸಂಘಗಳು 2023-24ನೇ ಸಾಲಿನಲ್ಲಿ ಉತ್ತಮ ಶ್ರೇಣಿಯಲ್ಲಿ ಕಾರ್ಯನಿರ್ವಹಿಸಿ ಪ್ರಶಸ್ತಿಗೆ ಆಯ್ಕೆಯಾದ ಸಹಕಾರ ಸಂಘಗಳ ಪೈಕಿ ಮಡಿಕೇರಿ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಪ್ರಥಮ ಭಾಗಮಂಡಲ ಪ್ರಾ.ಕೃ.ಪ.ಸ.ಸಂಘ ನಿ,.ದ್ವಿತೀಯ ಪಾರಾಣೆ ಪ್ರಾ.ಕೃ.ಪ.ಸ.ಸಂಘ ನಿ, ತೃತೀಯ ಮದೆ ಪ್ರಾ.ಕೃ.ಪ.ಸ. ಸಂಘನಿ, ಸೋಮವಾರಪೇಟೆ ತಾಲ್ಲೂಕು ಪ್ರಥಮ ಮಾದಾಪುರ ಪ್ರಾ.ಕೃ.ಪ.ಸ.ಸಂಘ, ದ್ವಿತೀಯ ರಾಮೇಶ್ವರ ಕೂಡುಮಂಗಳೂರು ಪ್ರಾ.ಕೃ.ಪ.ಸ.ಸಂಘ ನಿ., ಕೂಡಿಗೆ, ತೃತೀಯ ಐಗೂರು. ಪ್ರಾ.ಕೃ.ಪ.ಸ. ಸಂಘ ನಿ., ವಿರಾಜಪೇಟೆ ತಾಲ್ಲೂಕು: ಪ್ರಥಮ ಹಾತೂರು ಪ್ರಾ.ಕೃ.ಪ.ಸ.ಸಂಘ ನಿ., ದ್ವಿತೀಯ ಬೆಳ್ಳುಮಾಡು ಪ್ರಾ.ಕೃ.ಪ.ಸ.ಸಂಘ ನಿ., ತೃತೀಯ ಟಿ. ಶೆಟ್ಟಿಗೇರಿ ಪ್ರಾ.ಕೃ.ಪ.ಸ.ಸಂಘ ನಿ., ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಗಳಲ್ಲಿ ಪ್ರಥಮ ಕುಶಾಲನಗರ ಎ.ಪಿ.ಸಿ.ಎಂ.ಎಸ್ ದ್ವಿತೀಯ ಬಾಳೆಲೆ ಎ.ಪಿ.ಸಿ.ಎಂ.ಎಸ್ ತೃತೀಯ ಮೂರ್ನಾಡು ಎ.ಪಿ.ಸಿ.ಎಂ.ಎಸ್, ಸಹಕಾರ ದವಸ ಭಂಡಾರಗಳು ಪೈಕಿ: ಪ್ರಥಮ ಬಲಮುರಿ ಸಹಕಾರ ಧವಸ ಭಂಡಾರ, ದ್ವಿತೀಯ ಕುಟ್ಟಿಚಾತ ದವಸ ಭಂಡಾರ ಪೊನ್ನಂಪೇಟೆ, ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಪೈಕಿ: ಪ್ರಥಮ ಅಕ್ಷಯ ಮಹಿಳಾ ಪತ್ತಿನ ಸಹಕಾರ ಸಂಘ ಸೋಮವಾರಪೇಟೆ, ದ್ವಿತೀಯ ನಾಡಪ್ರಭು ಪತ್ತಿನ ಸಹಕಾರ ಸಂಘ, ಕುಶಾಲನಗರ ತೃತೀಯ ಸೋಮವಾರಪೇಟೆ ವಿವಿಧೋದ್ದೇಶ ಸಹಕಾರ ಸಂಘ ನಿ., ಸೋಮವಾರಪೇಟೆ, ಪಟ್ಟಣ/ ಮಹಿಳಾ ಸಹಕಾರ ಬ್ಯಾಂಕುಗಳಲ್ಲಿ: ಪ್ರಥಮ ಕೊಡಗು ಜಿಲ್ಲಾ ಮಹಿಳಾ ಸಹಕಾರ ಬ್ಯಾಂಕ್ ನಿ, ಮಡಿಕೇರಿ. ಸಹಕಾರ ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಲ್ಲಿ: ಪ್ರಥಮ ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕು ನಿ, ವಿರಾಜಪೇಟೆ. ಸೌಹಾರ್ದ ಪತ್ತಿನ ಸಹಕಾರ ಸಂಘಗಳಲ್ಲಿ :ಪ್ರಥಮ ಕೊಡಗು ಸೌಹಾರ್ಧ ಪತ್ತಿನ ಸಹಕಾರ ಸಂಘ ನಿ., ಮಡಿಕೇರಿ ಪ್ರಶಸ್ತಿ ಪತ್ರ ಹಾಗೂ ಬಹುಮಾನ ನೀಡಿ ಸಂಘ ಗಳನ್ನು ಮಹಾಸಭೆಯಲ್ಲಿ ಗೌರವಿಸಿ ಪ್ರೋತ್ಸಾಹಿಸಲಾಗಿದೆ ಎಂದು ಕೊಡಂದೇರ ಬಾಂಡ್ ಗಣಪತಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, ಆ.16 NEWS DESK : ಕುಶಾಲನಗರ ತಾಲ್ಲೂಕಿನ ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಬೆಂಗಳೂರಿನ…

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026

*ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*

ಆಗಷ್ಟ್ 19, 2026

*ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*

ಆಗಷ್ಟ್ 19, 2026

*ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*

ಆಗಷ್ಟ್ 19, 2026

*ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*

ಆಗಷ್ಟ್ 19, 2026

*ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*

ಆಗಷ್ಟ್ 19, 2026

*ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 19, 2026

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.