Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡಗು : ಡಿಸಿಸಿ ಬ್ಯಾಂಕ್ ನಿಂದ ವಿದ್ಯಾಭ್ಯಾಸ ಸಾಲದ ಯೋಜನೆ ಜಾರಿ : ಕೊಡಂದೇರ ಪಿ.ಗಣಪತಿ*
ಇತ್ತೀಚಿನ ಸುದ್ದಿಗಳು

*ಕೊಡಗು : ಡಿಸಿಸಿ ಬ್ಯಾಂಕ್ ನಿಂದ ವಿದ್ಯಾಭ್ಯಾಸ ಸಾಲದ ಯೋಜನೆ ಜಾರಿ : ಕೊಡಂದೇರ ಪಿ.ಗಣಪತಿ*

September 27, 20243 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಸೆ.27 NEWS DESK : ಕೊಡಗು ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಸಾಲ ಸಾಮಾನ್ಯವಾಗಿ ವಾಣಿಜ್ಯ ಬ್ಯಾಂಕುಗಳಲ್ಲಿ ಮಾತ್ರ ಪಡೆಯಲು ಅವಕಾಶವಿದೆ. ಆದರೆ ಜಿಲ್ಲೆಯ ರೈತರು ಮತ್ತು ಬ್ಯಾಂಕಿನ ಹಾಲಿ ಗ್ರಾಹಕರ ಮಕ್ಕಳು ದೇಶ ಮತ್ತು ವಿದೇಶದಲ್ಲಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದ್ಯಾಭ್ಯಾಸ ಸಾಲ ಪಡೆಯಲು ವಂಚಿತರಾಗಿರುವುದನ್ನು ಪರಿಗಣಿಸಿ ರೈತರ ಮಕ್ಕಳಿಗೆ ಅನುಕೂಲವಾಗುವಂತೆ ಅವಶ್ಯವಿರುವ “ವಿದ್ಯಾ ಸಹಕಾರ” ವೆಂಬ ವಿದ್ಯಾಭ್ಯಾಸ ಸಾಲದ ಯೋಜನೆಯನ್ನು ಬ್ಯಾಂಕಿನಲ್ಲಿ ಪ್ರಪ್ರಥಮವಾಗಿ ಜಾರಿಗೊಳಿಸಿ ವೈಯಕ್ತಿಕ ಗರಿಷ್ಠ ರೂ.60 ಲಕ್ಷ ವರೆಗೆ ಸಾಲ ನೀಡಲಾಗುತ್ತಿದ್ದು, ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಕೊಡಗು ಜಿಲ್ಲಾ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ತಿಳಿಸಿದ್ದಾರೆ. 2023-24 ನೇ ಸಾಲಿನಲ್ಲಿ ಒಟ್ಟು ವ್ಯವಹಾರ ರೂ.2926.07 ಕೋಟಿ ದಾಖಲಿಸಿದೆ. ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ ಈ ಬಾರಿ ರೂ 524.97 ಏರಿಕೆಯನ್ನು ಕಂಡಿದೆ ಎಂದು ಹೇಳಿದ್ದಾರೆ. ರೈತ ಸದಸ್ಯರ ಬೆಳೆ ಸಾಲದ ಬೇಡಿಕೆಯನ್ನು ಪೂರೈಸಲು ಅನುಕೂಲವಾಗುವಂತೆ ಬ್ಯಾಂಕು ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ತಹಲ್‍ವರೆಗೆ ರೂ.1006.94 ಕೋಟಿ ಮೊತ್ತದ ಎನ್.ಸಿ.ಎಲ್. ಮಂಜೂರಾತಿ ಮಾಡಿ ಈಗಾಗಲೇ ರೂ 730.36 ಕೋಟಿ ಅರ್ಹ ರೈತ ಸದಸ್ಯರಿಗೆ ಸಾಲ ವಿತರಣೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರದ ಯೋಜನೆಯಂತೆ ರೂ 3 ಲಕ್ಷ ಮೇಲ್ಪಟ್ಟು ರೂ 5 ಲಕ್ಷ ದವರೆಗೆ ಶೂನ್ಯ ಬಡ್ಡಿ ದರದಲ್ಲಿ ಕೆಸಿಸಿ ಸಾಲವನ್ನು ರಾಜ್ಯದ ಇತರ ಜಿಲ್ಲಾ ಡಿಸಿಸಿ ಬ್ಯಾಂಕುಗಳು ಸ್ವಂತ ಬಂಡವಾಳದಿಂದ ಸಾಲ ನೀಡಲು ಮುಂದೆ ಬಾರದಿದ್ದರು ಕೊಡಗು ಜಿಲ್ಲಾ ಬ್ಯಾಂಕು ಸ್ವಂತ ಬಂಡವಾಳದಿಂದ ಕೆಸಿಸಿ ಸಾಲ ರೂ.318 ಕೋಟಿ ವಿತರಣೆ ಮಾಡಿ ರಾಜ್ಯಕ್ಕೆ ಮಾದರಿಯಾಗಿರುತ್ತದೆಂದು ಅಧ್ಯಕ್ಷರಾದ ಕೊಡಂದೇರ ಪಿ.ಗಣಪತಿ ವಿವರಿಸಿದರು. ಜಿಲ್ಲೆಯ ಸದಸ್ಯ ಸಹಕಾರ ಸಂಘಗಳಿಗೆ ಹಾಗೂ ಇತರ ಖಾಸಗಿ ಸಂಘ/ ಸಂಸ್ಥೆಗಳಿಗೆ ಅನುಕೂಲವಾಗುವಂತೆ ನಿವೇಶನ/ ಕಟ್ಟಡ ಖರೀದಿಗಾಗಿ 2024-25 ನೇ ಸಾಲಿನಿಂದ ಹೊಸ ಸಾಲ ಯೋಜನೆ ರೂಪಿಸಲಾಗಿದೆ. ಹಾಲಿ ನೀಡುತ್ತಿರುವ ಸೋಲರ್ ಅಳವಡಿಕೆಗೆ ಇರುವ ಸಾಲದ ಮಿತಿಯನ್ನು ರೂ 60 ಲಕ್ಷ ಗಳಿಗೆ ಹೆಚ್ಚಿಸಲಾಗಿದೆ. ಹಾಗೂ ಸಿಸಿಟಿವಿ ಮತ್ತು ಇನ್ವರ್ಟರ್ ಅಳವಡಿಕೆಗಾಗಿ ರೂ 60 ಲಕ್ಷಗಳವರೆಗೆ ಸಾಲ ನೀಡಿಕೆಗೆ ಹೊಸ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು. ಜಿಲ್ಲೆಯ ಪ್ರಾಥಮಿಕ ಸಹಕಾರ ಸಂಘಗಳಿಗೆ ನಬಾರ್ಡ್ ವತಿಯಿಂದ ಎಂಎಸ್‍ಸಿ ಸಾಲವನ್ನು ನೀಡುತ್ತಿದ್ದು, ಇತರೆ ಸಂಘಗಳು ಈ ಯೋಜನೆಯಿಂದ ವಂಚಿತರಾಗಿರುವುದರಿಂದ ಸದಸ್ಯ ಸಹಕಾರ ಸಂಘಗಳು ಕೈಗೊಳ್ಳಲು ಉದ್ದೇಶಿಸಿರುವ ವಿವಿದ್ದೋದ್ದೇಶಿತ ಯೋಜನೆಗಳಿಗೆ (ಎಂಎಸ್‍ಸಿ) ಬ್ಯಾಂಕಿನಿಂದ ಯೋಜನಾ ವೆಚ್ಚದ ಶೇ.90 ರಷ್ಟು ಸಾಲವನ್ನು ಶೇ.4 ರಷ್ಟು ಬಡ್ಡಿ ಪ್ರೋತ್ಸಾಹಧನ ಹಾಗೂ ಗರಿಷ್ಠ ರೂ.2.50 ಲಕ್ಷಗಳಷ್ಟು ಅನುದಾನ ಸಹಿತ ಯೋಜನೆಯು ಕಾರ್ಯಗತದಲ್ಲಿದ್ದು, ಬ್ಯಾಂಕು ನಬಾರ್ಡ್ ಮತ್ತು ಎನ್‍ಸಿಡಿಸಿ ಯೋಜನೆಗಳಿಗೆ ಸರಿಸಮವಾಗಿ ಸದಸ್ಯ ಸಹಕಾರ ಸಂಘಗಳ ಯೋಜಿತ ಉದ್ದೇಶಗಳಿಗೆ ಒದಗಿಸಿಕೊಡುವ ಸಾಲ ಸೌಲಭ್ಯದ ಅನುಷ್ಠಾನಕ್ಕಾಗಿ ಬ್ಯಾಂಕು ರೂ.50 ಲಕ್ಷ ಮೊತ್ತವನ್ನು ಈಗಾಗಲೇ ಕಾಯ್ದಿರಿಸಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಸದಸ್ಯ ಸಹಕಾರ ಸಂಘಗಳು ಬ್ಯಾಂಕು ರೂಪಿಸಿರುವ ಈ ವಿಶೇಷ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಅವರು ಕೋರಿದರು. 2024ರ ಮಾರ್ಚ್ ಅಂತ್ಯಕ್ಕೆ ಬ್ಯಾಂಕಿನ ಅನುತ್ಪಾದಕ ಆಸ್ತಿಗಳು(ಎನ್‍ಪಿಎ) ಪ್ರಮಾಣವು ಹೊರಬಾಕಿ ನಿಂತ ಸಾಲಕ್ಕೆ ಅನುತ್ಪಾದಕ ಆಸ್ತಿಯ ಪ್ರಮಾಣವು ಶೇ.1.88 ರಷ್ಟಿದ್ದು, ರಾಜ್ಯದ ಇತರ ಡಿಸಿಸಿ ಬ್ಯಾಂಕಿಗೆ ಹೋಲಿಸಿದಲ್ಲಿ ಅತೀ ಕಡಿಮೆ ಎನ್‍ಪಿಎ ಪ್ರಮಾಣ ಇರುವ ಬ್ಯಾಂಕು ಕೊಡಗು ಜಿಲ್ಲಾ ಸಹಕಾರ ಬ್ಯಾಂಕು ಎಂದು ಹೇಳಲು ಹೆಮ್ಮೆ ಪಡುತೇನೆಂದು ಎಂದು ಅಧ್ಯಕ್ಷರು ವಿವರಿಸಿದ್ದಾರೆ. ಕೊಡಗು ಜಿಲ್ಲೆಯ ಸಹಕಾರ ವಿವಿದ ಸಹಕಾರ ಸಂಘಗಳು 2023-24ನೇ ಸಾಲಿನಲ್ಲಿ ಉತ್ತಮ ಶ್ರೇಣಿಯಲ್ಲಿ ಕಾರ್ಯನಿರ್ವಹಿಸಿ ಪ್ರಶಸ್ತಿಗೆ ಆಯ್ಕೆಯಾದ ಸಹಕಾರ ಸಂಘಗಳ ಪೈಕಿ ಮಡಿಕೇರಿ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಪ್ರಥಮ ಭಾಗಮಂಡಲ ಪ್ರಾ.ಕೃ.ಪ.ಸ.ಸಂಘ ನಿ,.ದ್ವಿತೀಯ ಪಾರಾಣೆ ಪ್ರಾ.ಕೃ.ಪ.ಸ.ಸಂಘ ನಿ, ತೃತೀಯ ಮದೆ ಪ್ರಾ.ಕೃ.ಪ.ಸ. ಸಂಘನಿ, ಸೋಮವಾರಪೇಟೆ ತಾಲ್ಲೂಕು ಪ್ರಥಮ ಮಾದಾಪುರ ಪ್ರಾ.ಕೃ.ಪ.ಸ.ಸಂಘ, ದ್ವಿತೀಯ ರಾಮೇಶ್ವರ ಕೂಡುಮಂಗಳೂರು ಪ್ರಾ.ಕೃ.ಪ.ಸ.ಸಂಘ ನಿ., ಕೂಡಿಗೆ, ತೃತೀಯ ಐಗೂರು. ಪ್ರಾ.ಕೃ.ಪ.ಸ. ಸಂಘ ನಿ., ವಿರಾಜಪೇಟೆ ತಾಲ್ಲೂಕು: ಪ್ರಥಮ ಹಾತೂರು ಪ್ರಾ.ಕೃ.ಪ.ಸ.ಸಂಘ ನಿ., ದ್ವಿತೀಯ ಬೆಳ್ಳುಮಾಡು ಪ್ರಾ.ಕೃ.ಪ.ಸ.ಸಂಘ ನಿ., ತೃತೀಯ ಟಿ. ಶೆಟ್ಟಿಗೇರಿ ಪ್ರಾ.ಕೃ.ಪ.ಸ.ಸಂಘ ನಿ., ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಗಳಲ್ಲಿ ಪ್ರಥಮ ಕುಶಾಲನಗರ ಎ.ಪಿ.ಸಿ.ಎಂ.ಎಸ್ ದ್ವಿತೀಯ ಬಾಳೆಲೆ ಎ.ಪಿ.ಸಿ.ಎಂ.ಎಸ್ ತೃತೀಯ ಮೂರ್ನಾಡು ಎ.ಪಿ.ಸಿ.ಎಂ.ಎಸ್, ಸಹಕಾರ ದವಸ ಭಂಡಾರಗಳು ಪೈಕಿ: ಪ್ರಥಮ ಬಲಮುರಿ ಸಹಕಾರ ಧವಸ ಭಂಡಾರ, ದ್ವಿತೀಯ ಕುಟ್ಟಿಚಾತ ದವಸ ಭಂಡಾರ ಪೊನ್ನಂಪೇಟೆ, ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಪೈಕಿ: ಪ್ರಥಮ ಅಕ್ಷಯ ಮಹಿಳಾ ಪತ್ತಿನ ಸಹಕಾರ ಸಂಘ ಸೋಮವಾರಪೇಟೆ, ದ್ವಿತೀಯ ನಾಡಪ್ರಭು ಪತ್ತಿನ ಸಹಕಾರ ಸಂಘ, ಕುಶಾಲನಗರ ತೃತೀಯ ಸೋಮವಾರಪೇಟೆ ವಿವಿಧೋದ್ದೇಶ ಸಹಕಾರ ಸಂಘ ನಿ., ಸೋಮವಾರಪೇಟೆ, ಪಟ್ಟಣ/ ಮಹಿಳಾ ಸಹಕಾರ ಬ್ಯಾಂಕುಗಳಲ್ಲಿ: ಪ್ರಥಮ ಕೊಡಗು ಜಿಲ್ಲಾ ಮಹಿಳಾ ಸಹಕಾರ ಬ್ಯಾಂಕ್ ನಿ, ಮಡಿಕೇರಿ. ಸಹಕಾರ ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಲ್ಲಿ: ಪ್ರಥಮ ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕು ನಿ, ವಿರಾಜಪೇಟೆ. ಸೌಹಾರ್ದ ಪತ್ತಿನ ಸಹಕಾರ ಸಂಘಗಳಲ್ಲಿ :ಪ್ರಥಮ ಕೊಡಗು ಸೌಹಾರ್ಧ ಪತ್ತಿನ ಸಹಕಾರ ಸಂಘ ನಿ., ಮಡಿಕೇರಿ ಪ್ರಶಸ್ತಿ ಪತ್ರ ಹಾಗೂ ಬಹುಮಾನ ನೀಡಿ ಸಂಘ ಗಳನ್ನು ಮಹಾಸಭೆಯಲ್ಲಿ ಗೌರವಿಸಿ ಪ್ರೋತ್ಸಾಹಿಸಲಾಗಿದೆ ಎಂದು ಕೊಡಂದೇರ ಬಾಂಡ್ ಗಣಪತಿ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿ ದಸರಾ ವೇದಿಕೆ ಸಮಿತಿ ರಚನೆ*
Next Article *ಕೊಡಗು : ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.