Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*
  • *ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*
  • *5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*
  • *ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*
  • *ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*
  • *ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*
  • *ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*
  • *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಕಾಫಿ ಬೆಳೆ ಅಭಿವೃದ್ಧಿಗೆ ಪ್ರೋತ್ಸಾಹ ಅಗತ್ಯ : ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಕಾಫಿ ಬೆಳೆ ಅಭಿವೃದ್ಧಿಗೆ ಪ್ರೋತ್ಸಾಹ ಅಗತ್ಯ : ಶಾಸಕ ಡಾ.ಮಂತರ್ ಗೌಡ*

ಅಕ್ಟೋಬರ್ 7, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.7 NEWS DESK : ಕೊಡಗು ಜಿಲ್ಲೆಯಲ್ಲಿ ಕಾಫಿ ಬೆಳೆಯನ್ನು ಹೆಚ್ಚಾಗಿ ಉತ್ಪಾದಿಸುತ್ತಿದ್ದು, ಆ ನಿಟ್ಟಿನಲ್ಲಿ ಕಾಫಿ ಬೆಳೆಗಾರರನ್ನು ಪ್ರೋತ್ಸಾಹಿಸುವುದು ಅತ್ಯಗತ್ಯವಾಗಿದೆ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು. ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ಇದೇ ಮೊದಲ ಬಾರಿಗೆ ಎರಡು ದಿನಗಳ ಕಾಲ ಏರ್ಪಡಿಸಲಾಗಿದ್ದ ಮೊದಲ ವರ್ಷ ಕಾಫಿ ದಸರಾ ಕಾರ್ಯಕ್ರಮದಲ್ಲಿ ಕಾಫಿ ಹಾಗೂ ವಿವಿಧ ಕೃಷಿ ಸಂಬಂಧಿಸಿದ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.  ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರಿಗೆ ಕಾಫಿ ದಸರಾವು ಒಂದು ವೇದಿಕೆಯಾಗಿದ್ದು, ಕಾಫಿ ಕೃಷಿಯಲ್ಲಿ ಕೊಡಗಿನ ಜನರು ತೊಡಗಿಸಿಕೊಂಡಿರುವುದು ವಿಶೇಷವಾಗಿದೆ. ಆದ್ದರಿಂದ ಕಾಫಿ ಬೆಳೆಯನ್ನು ಮತ್ತಷ್ಟು ಔನತ್ಯಕ್ಕೆ ಕೊಂಡೊಯ್ಯುವಲ್ಲಿ ಶ್ರಮಿಸಬೇಕಿದೆ ಎಂದು ಡಾ.ಮಂತರ್ ಗೌಡ ಸಲಹೆ ಮಾಡಿದರು. ಕಾಫಿ ದಸರಾ ವಿಚಾರ ಸಂಕಿರಣದಲ್ಲಿ ವಿವಿಧ ತಜ್ಞರು, ವಿಜ್ಞಾನಿಗಳು, ಕೃಷಿಕರು ಪಾಲ್ಗೊಂಡು ಕಾಫಿ ಉತ್ತೇಜನ ಸಂಬಂಧಿಸಿದಂತೆ ಹಲವು ಅಭಿಪ್ರಾಯ, ಸಲಹೆ, ಮಾರ್ಗದರ್ಶನ ನೀಡಿದ್ದಾರೆ. ತಜ್ಞರ ಅಭಿಪ್ರಾಯವನ್ನು ಕ್ರೊಢೀಕರಿಸಿ ಕಾಫಿ ಬೆಳೆಯಲ್ಲಿ ಮತ್ತಷ್ಟು ಉತ್ತಮ ಇಳುವರಿ ಪಡೆಯಲು ಶ್ರಮಿಸಬೇಕಿದೆ ಎಂದರು. ಕೊಡಗು ಜಿಲ್ಲೆಯ ಕಾಫಿಗೆ ದೇಶ ವಿದೇಶಗಳಲ್ಲೂ ಮಾರುಕಟ್ಟೆ ಸೌಲಭ್ಯ ಒದಗುವಂತಾಗಬೇಕು. ಆ ನಿಟ್ಟಿನಲ್ಲಿ ಕಾಫಿ ಬೆಳೆಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸಬೇಕು ಎಂದು ಡಾ.ಮಂತರ್‍ಗೌಡ ನುಡಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ಪ್ರಥಮ ಬಾರಿಗೆ ಕಾಫಿ ದಸರಾ ಏರ್ಪಡಿಸಿರುವುದು ವಿಶೇಷವಾಗಿದೆ. ಕೊಡಗಿನ ಕಾಫಿ ಬೆಳೆ ಪ್ರಗತಿ ಹಾಗೂ ಸಾಧಕರ ಬಗ್ಗೆ ದಾಖಲೀಕರಣವಾಗಬೇಕು. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಕಾಫಿ ಟೇಬಲ್ ಹೊರತರಲು ಪ್ರಯತ್ನಿಸಲಿದೆ ಎಂದು ತಿಳಿಸಿದರು. ಕಾಫಿ ಬೆಳೆಯ ಪ್ರಗತಿಪರ ಕೃಷಿಕರಾದ ಧರ್ಮರಾಜ ಅವರು ಮಾತನಾಡಿ ಕಾಫಿ ಬೆಳೆಯಲ್ಲಿ ಉತ್ತಮ ಇಳುವರಿ ಪಡೆಯಲು ಹಲವು ಪ್ರಯೋಗಗಳನ್ನು ಮಾಡಬೇಕಿದೆ. ಸರಿಯಾದ ಸಮಯಕ್ಕೆ ಮಳೆಯಾಗಬೇಕು. ಜೊತೆಗೆ ರಸಗೊಬ್ಬರ ಪೂರೈಕೆ ಮತ್ತಿತರವನ್ನು ಸಕಾಲದಲ್ಲಿ ನಿರ್ವಹಿಸಿದ್ದಲ್ಲಿ ಹೆಚ್ಚಿನ ಇಳುವರಿ ಪಡೆಯಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟರು. ಅತಿಯಾದ ರಸಗೊಬ್ಬರವು ಸಹ ಕಾಫಿ ಬೆಳೆ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ಈ ಬಗ್ಗೆ ಎಚ್ಚರವಹಿಸಬೇಕು. ಮಳೆಗೆ ತಕ್ಕಂತೆ ರಸಗೊಬ್ಬರ ಹಾಕಬೇಕು. ಕಾಫಿ ಗಿಡ ಸಂರಕ್ಷಣೆ ಸಂಬಂಧಿಸಿದಂತೆ ಗಾಳಿ, ನೀರು, ಬೆಳಕು ಬಗ್ಗೆ ಕಾಫಿ ಬೆಳೆಗಾರರಲ್ಲಿ ಕನಿಷ್ಠ ಮಾಹಿತಿ ಇರಬೇಕು ಎಂದು ಧರ್ಮರಾಜ ಹೇಳಿದರು. ಕೊಡಗು ಪ್ಲಾಂಟರ್ಸ್ ಅಸೋಷಿಯೇಷನ್‍ನ ಕಾರ್ಯಕಾರಿ ಮಂಡಳಿ ಸದಸ್ಯರಾದ ಕೆ.ಕೆ.ವಿಶ್ವನಾಥ ಅವರು ಮಾತನಾಡಿ ಹವಾಮಾನ ವೈಪರೀತ್ಯದಿಂದ ಕಾಫಿ ಬೆಳೆ ಪ್ರದೇಶದಿಂದ ಪ್ರದೇಶಕ್ಕೆ ಇಳುವರಿಯಲ್ಲಿ ವ್ಯತ್ಯಾಸವಾಗಿರುತ್ತದೆ. ಆದ್ದರಿಂದ ಸುಸ್ಥಿರ ಬೆಳೆ ನಿರೀಕ್ಷೆ ಮಾಡುವುದು ಕಷ್ಟಸಾಧ್ಯವಾಗಿದೆ ಎಂದು ವಿವರಿಸಿದರು. ಕಾಫಿ ಬೆಳೆ ಸಂಬಂಧಿಸಿದಂತೆ ಮಾರುಕಟ್ಟೆ ಬೆಲೆ ಗಮನಿಸಿ ಕಾಫಿ ಮಾರಾಟ ಮಾಡಬೇಕಿದೆ. ಆ ನಿಟ್ಟಿನಲ್ಲಿ ಕಾಫಿ ಬೆಳೆಗಾರರು ಕಾಫಿ ಬೆಳೆ ಸಂಬಂಧ ಹೆಚ್ಚಿನ ನಿಗಾವಹಿಸಬೇಕು. ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕಾಫಿ ಬೆಲೆಯ ಬಗ್ಗೆ ಮಾಹಿತಿ ಇರಬೇಕು ಎಂದು ತಿಳಿಸಿದರು. ಕೃಷಿಕರಾದ ಭೋಸ್ ಮಂದಣ್ಣ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಕಾಫಿ ಬೆಳೆಯನ್ನು ಮುಖ್ಯ ಬೆಳೆಯಾಗಿ ಬೆಳೆಯಲಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಹೆಚ್ಚುವರಿ ಇಳುವರಿ ಪಡೆಯಲಾಗುತ್ತದೆ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಲ್ಲಿ ಕಾಫಿ ದಸರಾ ಏರ್ಪಡಿಸಿರುವುದು ವಿಶೇಷವಾಗಿದೆ ಎಂದು ಅವರು ಶ್ಲಾಘಿಸಿದರು. ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮಿಲನಾ ಭರತ್ ಅವರು ಮಾತನಾಡಿ ಕಡಿಮೆ ಬಂಡವಾಳದಲ್ಲಿ ಮೀನು ಕೃಷಿಯನ್ನು ಕೈಗೊಂಡು ಆರ್ಥಿಕ ಮಟ್ಟವನ್ನು ಹೆಚ್ಚಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು. ಕಾಫಿ ಬೆಳೆಯ ಜೊತೆಗೆ ಮೀನು ಕೃಷಿಯನ್ನು ಉಪ ಕಸುಬಾಗಿ ಮಾಡಿಕೊಂಡಲ್ಲಿ ಆದಾಯಗಳಿಸುವತ್ತ ಮುನ್ನಡೆಯಬಹುದಾಗಿದೆ ಎಂದು ಹೇಳಿದರು. ಕೊಡಗು ಜಿಲ್ಲೆಯಲ್ಲಿ ಮೀನುಕೃಷಿಗೆ ಸ್ಥಳೀಯ ಮಾರುಕಟ್ಟೆ ಸೌಲಭ್ಯವು ಸಹ ಇದ್ದು, ಈ ಅವಕಾಶವನ್ನು ಬಳಸಿಕೊಳ್ಳುವಂತಾಗಬೇಕು ಎಂದು ಮಿಲನ ಭರತ್ ಸಲಹೆ ಮಾಡಿದರು. ವಿಜ್ಞಾನಿ ಡಾ.ಶಿವಪ್ರಸಾದ್ ಅವರು ಮಾತನಾಡಿ ಕಾಫಿ ಬೆಳೆಗಾರರು ಕಾಲ ಕಾಲಕ್ಕೆ ಮಣ್ಣಿನ ಪರೀಕ್ಷೆ ಮಾಡಬೇಕು. ಇದರಿಂದ ಹೆಚ್ಚಿನ ಇಳುವರಿ ಪಡೆಯಲು ಸಹಕಾರಿಯಾಗಲಿದೆ. ಕಾಫಿ ತೋಟಗಳಲ್ಲಿ ಇಂಗುಗುಂಡಿ ಮಾಡಿ ಕೃಷಿ ಪೋಷಕಾಂಶ ಹೆಚ್ಚಿಸಿಕೊಳ್ಳಲು ಮುಂದಾಗಬೇಕಿದೆ ಎಂದು ಅವರು ತಿಳಿಸಿದರು. ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಕೀಟ ಶಾಸ್ತ್ರಜ್ಞರಾದ ಡಾ.ಕೆಂಚಾರೆಡ್ಡಿ ಅವರು ಮಾತನಾಡಿ ಜೇನು ಕೃಷಿಯಲ್ಲಿ ತೊಡಗಿಸಿಕೊಂಡಲ್ಲಿ ಹೆಚ್ಚಿನ ಲಾಭ ಗಳಿಸಬಹುದಾಗಿದೆ. ಜೇನು ಕೃಷಿಯು ಸಹ ಒಂದು ಉದ್ಯಮವಾಗಿದ್ದು, ಕಾಫಿ ಜೊತೆಗೆ ಜೇನುಕೃಷಿಯಲ್ಲಿ ಕೈಗೊಳ್ಳುವಂತಾಗಬೇಕು ಎಂದು ಅವರು ಹೇಳಿದರು. ಕಾಫಿ ಸಾಧಕ ಕೃಷಿಕರಾದ ನಡಿಕೇರಿಯಂಡ ಬೋಸ್ ಮಂದಣ್ಣ, ಕರಡದ ಬಿದಿರು ಕೃಷಿಯಲ್ಲಿ ಪ್ರಗತಿ ಸಾಧಿಸಿರುವ ನಿಖಿಲ್ ರಾಮಮೂರ್ತಿ, ಕೊಡಗು ಕಾಫಿ ಮಹಿಳಾ ಜಾಗೃತಿ ಸಂಘದ ಮಹಿಳಾ ಸಂಘಟನೆಗಾಗಿ ಪ್ರಶಸ್ತಿ, ಯಂತ್ರೋಪಕರಣಗಳ ತಯಾರಿಕೆಗಾಗಿ ವಿ.ಎ.ತಾಹಿರ್, ಜೇನುಕೃಷಿ ಸಾಧಕರಾದ ಶಿರಕಜೆ ಮಾದಪ್ಪ, ಮರಗೋಡು ಗ್ರಾಮದ ಕಟ್ಟೆಮನೆ ಪ್ರೇಮಗಣೇಶ್, ಕರಿಮೆಣಸು ಕೃಷಿಯಲ್ಲಿ ಸಾಧಕರಾದ ಎ.ಪಿ.ಸುಬ್ಬಯ್ಯ, ಭತ್ತ ಕೃಷಿಕರಾದ ದೊಡ್ಡಳ್ಳಿ ಗ್ರಾಮದ ಬಸವಣ್ಣಯ್ಯ ಮತ್ತು ಹುಲುಸೆ ಗ್ರಾಮದ ಎಚ್.ಪಿ.ಪ್ರಸನ್ನ ಅವರನ್ನು ಸನ್ಮಾನಿಸಲಾಯಿತು. ವಿನೋದ್ ಮೂಡಗದ್ದೆ ನಿರೂಪಿಸಿದರು. ಕಾಫಿ ದಸರಾ ಸಂಘಟಕರಾದ ಅನಿಲ್ ಎಚ್.ಟಿ. ಸ್ವಾಗತಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮೇ 6 NEWS DESK : ಪೆರುಂಬಾಡಿಯ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿಯ ಎಸ್ಇಎ ಕಾಲೇಜು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ…

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*

ಮೇ 5, 2026

*ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*

ಮೇ 5, 2026

*ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*

ಮೇ 5, 2026

*ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮೇ 5, 2026

*ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*

ಮೇ 5, 2026

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*

ಮೇ 5, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*

ಮೇ 5, 2026

*ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.