Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವನ್ಯಜೀವಿಗಳ ದಾಳಿ ತಡೆಗೆ ಕೇಂದ್ರ ಹಾಗೂ ರಾಜ್ಯ ಸರಕಾರ ತುರ್ತು ಕ್ರಮ ಕೈಗೊಳ್ಳಲು ಆಗ್ರಹ*
  • *ಮಡಿಕೇರಿ : ನ್ಯಾಯಾಲಯದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ*
  • *”ಕೋವಿ-ತೋಕ್” ಅತ್ಯಗತ್ಯ ಧಾರ್ಮಿಕ ಆಚರಣೆಗೆ ಸೇರ್ಪಡೆಗೆ ಒತ್ತಾಯ : “ಕೊಡವರಿಗೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಮಾರ್ಗಗಳು ಮತ್ತು ಅಂತರಾಷ್ಟ್ರೀಯ ಕಾನೂನು” ವಿಷಯದ ಕುರಿತು ಸಿಎನ್ ಸಿ ವಿಚಾರಗೋಷ್ಠಿ*
  • *ಲವ್ ಜಿಹಾದ್ ಮತ್ತು ಮತಾಂತರದ ವಿರುದ್ಧ ಜೂ.30 ರಂದು ಕುಶಾಲನಗರದಲ್ಲಿ ಬೃಹತ್ ಜನಾಂದೋಲನ*
  • *ಪಾಲಿಬೆಟ್ಟ : 100 ದಿನಗಳ ಕ್ಷಯರೋಗ ಮುಕ್ತ ಅಭಿಯಾನ*
  • *ರೋಟರಿ ವುಡ್ಸ್ ಅಧ್ಯಕ್ಷೆಯಾಗಿ ಪ್ರಮೀಳಾ ಶೆಟ್ಟಿ ಕಾಯ೯ದಶಿ೯ಯಾಗಿ ಸ್ಮಿತಾಚಂಗಪ್ಪ ನೇಮಕ*
  • *ಜ್ಞಾನಗಂಗಾ ವಸತಿ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ*
  • *ಆತಂಕ ಸೃಷ್ಟಿಸಿದ ಬಾಂಬ್ ಬೆದರಿಕೆ*
  • *ಕೊಡವರಿಗೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಮಾರ್ಗಗಳು ಮತ್ತು ಅಂತರಾಷ್ಟ್ರೀಯ ಕಾನೂನು ವಿಷಯದ ಕುರಿತು ಸಿಎನ್‌ಸಿಯಿಂದ ಜೂ.26ರಂದು ವಿಚಾರಗೋಷ್ಠಿ : ರೆಸಾರ್ಟ್ ಗಳ ತೆರವಿಗೆ ಆಗ್ರಹ*
  • *ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಾಲಯದ ಜೀರ್ಣೋದ್ಧಾರ ಕಾರ್ಯ : ರೂ.1 ಕೋಟಿಗೂ ಅಧಿಕ ವೆಚ್ಚದ ಯೋಜನೆಗೆ ಅಂತಿಮ ಸ್ಪರ್ಶ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ : ನಿರಂತರ ಕಲಿಕೆಯೆ ಯಶಸ್ಸಿನ ಮೂಲ : ಡಾ.ಬಿದ್ದಂಡ ಚಂಗಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ : ನಿರಂತರ ಕಲಿಕೆಯೆ ಯಶಸ್ಸಿನ ಮೂಲ : ಡಾ.ಬಿದ್ದಂಡ ಚಂಗಪ್ಪ*

ಅಕ್ಟೋಬರ್ 16, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಅ.16 NEWS DESK : ವಿರಾಜಪೇಟೆ ಕಾವೇರಿ ಕಾಲೇಜಿನ ವಿದ್ಯಾರ್ಥಿ ಸಂಘವನ್ನು ಡಾ. ಬಿದ್ದಂಡ ಚಂಗಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಯಾವುದೇ ಕಾರ್ಯ ಯಶಸ್ವಿಯಾಗ ಬೇಕಾದರೆ ಅದರ ಹಿಂದೆ ನಿರಂತರವಾದ ಕಠಿಣ ಪರಿಶ್ರಮ ಇರಬೇಕು. ನಾವುಗಳಿಸುವ ಯಶಸ್ಸು ಇತರರಿಗೆ ಸದಾ ಮಾರ್ಗದರ್ಶಿ ಆಗಬೇಕೆ ಹೊರತು ಇತರರೊಂದಿಗೆ ಎಂದಿಗೂ ಹೋಲಿಕೆ ಮಾಡುವ ಕೆಲಸ ಮಾಡ ಬಾರದು.ಹೇಗೆ ಮಾಡಬೇಕು, ಏನು ಮಾಡಬೇಕು ಹಾಗೂ ಎಲ್ಲಿ ಮಾಡಬೇಕೆಂಬುದನ್ನು ತಿಳಿದರೆ ಜೀವನದಲ್ಲಿ ಎಲ್ಲಾ ವಿಚಾರಗಳನ್ನು ಕಲಿತು ಯಶಸ್ಸಿನ ಕಡೆಗೆ ಸಾಗಬಹುದು. ಜೀವನದಲ್ಲಿ ನಿರಂತರ ಕಲಿಕೆ ನಡೆಯುತ್ತಿರಬೇಕು ಕಲಿಕೆ ನಿಂತರೆ ಜೀವನ ನಿಂತಂತೆ ಎಂದರು. ವಿದ್ಯಾರ್ಥಿ ಜೀವನದಲ್ಲಿ ಸಮಯದ ನಿರ್ವಹಣೆಯು ಬಹಳ ಮುಖ್ಯವಾದದ್ದು. ಸಮಯದ ಸದ್ಬಳಕೆಯನ್ನು ಮಾಡಿಕೊಂಡು ಸಮಯದೊಂದಿಗೆ ಮುನ್ನಡೆಯುವುದನ್ನು ಕಲಿಯಬೇಕು. ಪ್ರತಿನಿತ್ಯ ಪತ್ರಿಕೆಗಳನ್ನು ಓದುವುದು, ದೂರದರ್ಶನಗಳಲ್ಲಿ ನ್ಯೂಸ್ ಗಳನ್ನು ನೋಡುವುದರ ಮೂಲಕ ಒಂದಷ್ಟು ಪ್ರಚಲಿತ ವಿದ್ಯಮಾನಗಳ ಬಗ್ಗೆ ತಿಳಿದುಕೊಳ್ಳಬೇಕು. ಸಮಾಜದಲ್ಲಾಗಲಿ, ಕುಟುಂಬದಲ್ಲಾಗಲಿ ಜನರೊಂದಿಗೆ ಬೆರೆಯುವುದನ್ನು ಕಲಿಯಬೇಕು. ಪ್ರತಿಯೊಬ್ಬರನ್ನು ಪ್ರೀತಿ ಗೌರವದಿಂದ ಕಂಡಾಗ ನಾವು ಯಾವುದೇ ಕಾರ್ಯವನ್ನು ಮಾಡಿದರು ಅದರಲ್ಲಿ ಏಳಿಗೆಯನ್ನು ಕಾಣಬಹುದೆಂದರು. ಇದೇ ಸಂದರ್ಭ  ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಿ, ನಾಮಫಲಕವನ್ನು ವಿತರಿಸಿದರು.  ಕಾವೇರಿ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಪ್ರೊ. ಇಟ್ಟೀರ ಬಿದ್ದಪ್ಪ ಮಾತನಾಡಿ, ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಲ್ಲಿ ಇರುವಂತಹ ಪ್ರತಿಭೆಗಳನ್ನು ಗುರುತಿಸಿ ಅವರ ಬೆಳವಣಿಗೆಗೆ ಪೂರಕವಾದ ವಾತಾವರಣ ಸೃಷ್ಟಿಸುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಒಬ್ಬ ವಿದ್ಯಾರ್ಥಿಯನ್ನು ಪ್ರತಿಭಾವಂತ ನಾಗರಿಕನಾಗಿ ಸಮಾಜಕ್ಕೆ ನೀಡಲು ವಿದ್ಯೆ ಮುಖ್ಯ. ವಿದ್ಯೆ ಅರ್ಹತೆಯನ್ನು ಮೌಲ್ಯವಾಗಿ, ಜ್ಞಾನವನ್ನು ಕೌಶಲ್ಯವಾಗಿ, ಕಷ್ಟಗಳನ್ನು ಸವಾಲಾಗಿ ಸ್ವೀಕರಿಸುವ ಶಕ್ತಿಯಾಗಿದೆ. ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿದಾಗ ನಮ್ಮ ಬದುಕು ಹಸನಾಗಲು ಸಾಧ್ಯ. ನಾವು ಕಲಿತ ವಿದ್ಯೆ ನಮ್ಮ ಯಶಸ್ಸಿಗೆ ಕಾರಣವಾಗಬೇಕು. ದುರ್ವ್ಯಸನ, ದುರಭ್ಯಾಸದಿಂದ ದೂರವಿದ್ದು ವಿದ್ಯಾರ್ಥಿಗಳು ಮೌಲ್ಯಯುತವಾದ ಸಂಸ್ಕಾರಮಯವಾದಂತಹ ಜೀವನವನ್ನು ನಡೆಸಬೇಕು. ಗುರು ಹಿರಿಯರಿಗೆ, ಮಾತಾಪಿತರಿಗೆ, ಸಮಾಜಕ್ಕೆ ಸದಾ ಋಣಿಯಾಗಿರಬೇಕು. ವಿದ್ಯಾರ್ಥಿಯಾದವನು ಅಧ್ಯಯನ ಶೀಲ, ಕ್ರಿಯಾಶೀಲ, ಆವಿಷ್ಕಾರ ಶೀಲ, ಚಾರಿತ್ಯವಂತ ಹಾಗೂ ಸಮಾಜಕ್ಕೆ ಕುಟುಂಬಕ್ಕೆ ಉತ್ತಮ ಕೊಡುಗೆ ಕೊಡುವ ಮನೋಭಾವವನ್ನು ಹೊಂದಿರಬೇಕು ಎಂದರು. ಕಾಲೇಜಿನ ಪ್ರಾಂಶುಪಾಲರಾದ ಬೆನಡಿಕ್ಟ್ ಆರ್ ಸಲ್ದಾನ, ಐಕ್ಯೂಎಸಿ ಸಂಚಾಲಕಿ ಪ್ರಿಯ, ವಿದ್ಯಾರ್ಥಿ ಕ್ಷೇಮ ಪಾಲನ ಸಂಘದ ಸಂಚಾಲಕರಾದ ನಾಗರಾಜು, ಉಪನ್ಯಾಸಕರಾದ ವೀಣಾ ಹಾಗೂ ವಿದ್ಯಾರ್ಥಿ ನಾಯಕರುಗಳು ವೇದಿಕೆ ಮೇಲೆ ಹಾಜರಿದ್ದರು. ಸಭಾ ಕಾರ್ಯಕ್ರಮದ ನಂತರ ಮುಖ್ಯ ಅತಿಥಿಗಳಿಗೆ ಕಾಲೇಜಿನ ವತಿಯಿಂದ ನೆನಪಿನ ಕಾಣಿಕೆಯನ್ನು ನೀಡಲಾಯಿತು. ಸಾಂಸ್ಕೃತಿಕ ಹಾಗೂ ಕ್ರೀಡಾ ಸಾಧನೆಯನ್ನು ಮಾಡಿದಂತಹ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. 2024 – 25 ನೇ ಸಾಲಿನ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷನಾಗಿ ಮುತ್ತಣ್ಣ ಕೆ.ಕೆ., ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಪಿ, ಕ್ರೀಡಾ ಕಾರ್ಯದರ್ಶಿಯಾಗಿ ಕಾರ್ಯಪ್ಪ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸೋನಿ ಎಂ.ಪಿ., ಜಂಟಿ ಕಾರ್ಯದರ್ಶಿಗಳಾಗಿ ನಿರೂಪ್ ನಾಣಯ್ಯ ಹಾಗೂ ರಕ್ಷಿತಾ ಬಿ.ಎಸ್. ಪ್ರತಿಜ್ಞಾ ವಿಧಿ ಸ್ವೀಕರಿಸಿ ಅಧಿಕಾರ ವಹಿಸಿಕೊಂಡರು. ವಿದ್ಯಾರ್ಥಿಗಳಿಂದ ಮನಮೋಹಕವಾದ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು. ನಂತರ ವಿದ್ಯಾರ್ಥಿಗಳಿಗೆ ಸಿಹಿಯನ್ನು ವಿತರಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವನ್ಯಜೀವಿಗಳ ದಾಳಿ ತಡೆಗೆ ಕೇಂದ್ರ ಹಾಗೂ ರಾಜ್ಯ ಸರಕಾರ ತುರ್ತು ಕ್ರಮ ಕೈಗೊಳ್ಳಲು ಆಗ್ರಹ*

ಜೂನ್ 23, 2026

*ಮಡಿಕೇರಿ : ನ್ಯಾಯಾಲಯದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ*

ಜೂನ್ 23, 2026

*”ಕೋವಿ-ತೋಕ್” ಅತ್ಯಗತ್ಯ ಧಾರ್ಮಿಕ ಆಚರಣೆಗೆ ಸೇರ್ಪಡೆಗೆ ಒತ್ತಾಯ : “ಕೊಡವರಿಗೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಮಾರ್ಗಗಳು ಮತ್ತು ಅಂತರಾಷ್ಟ್ರೀಯ ಕಾನೂನು” ವಿಷಯದ ಕುರಿತು ಸಿಎನ್ ಸಿ ವಿಚಾರಗೋಷ್ಠಿ*

ಜೂನ್ 23, 2026

*ಮಡಿಕೇರಿ : ನ್ಯಾಯಾಲಯದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ*

ಜೂನ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

  ಮಡಿಕೇರಿ ಜೂ.23 NEWS DESK : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಸರ್ಕಾರಿ ಅಭಿಯೋಜನಾ ಇಲಾಖೆ…

*”ಕೋವಿ-ತೋಕ್” ಅತ್ಯಗತ್ಯ ಧಾರ್ಮಿಕ ಆಚರಣೆಗೆ ಸೇರ್ಪಡೆಗೆ ಒತ್ತಾಯ : “ಕೊಡವರಿಗೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಮಾರ್ಗಗಳು ಮತ್ತು ಅಂತರಾಷ್ಟ್ರೀಯ ಕಾನೂನು” ವಿಷಯದ ಕುರಿತು ಸಿಎನ್ ಸಿ ವಿಚಾರಗೋಷ್ಠಿ*

ಜೂನ್ 23, 2026

*ಲವ್ ಜಿಹಾದ್ ಮತ್ತು ಮತಾಂತರದ ವಿರುದ್ಧ ಜೂ.30 ರಂದು ಕುಶಾಲನಗರದಲ್ಲಿ ಬೃಹತ್ ಜನಾಂದೋಲನ*

ಜೂನ್ 23, 2026

*ಪಾಲಿಬೆಟ್ಟ : 100 ದಿನಗಳ ಕ್ಷಯರೋಗ ಮುಕ್ತ ಅಭಿಯಾನ*

ಜೂನ್ 23, 2026

*ರೋಟರಿ ವುಡ್ಸ್ ಅಧ್ಯಕ್ಷೆಯಾಗಿ ಪ್ರಮೀಳಾ ಶೆಟ್ಟಿ ಕಾಯ೯ದಶಿ೯ಯಾಗಿ ಸ್ಮಿತಾಚಂಗಪ್ಪ ನೇಮಕ*

ಜೂನ್ 23, 2026

*ಜ್ಞಾನಗಂಗಾ ವಸತಿ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ*

ಜೂನ್ 23, 2026

*ಆತಂಕ ಸೃಷ್ಟಿಸಿದ ಬಾಂಬ್ ಬೆದರಿಕೆ*

ಜೂನ್ 23, 2026

*ಕೊಡವರಿಗೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಮಾರ್ಗಗಳು ಮತ್ತು ಅಂತರಾಷ್ಟ್ರೀಯ ಕಾನೂನು ವಿಷಯದ ಕುರಿತು ಸಿಎನ್‌ಸಿಯಿಂದ ಜೂ.26ರಂದು ವಿಚಾರಗೋಷ್ಠಿ : ರೆಸಾರ್ಟ್ ಗಳ ತೆರವಿಗೆ ಆಗ್ರಹ*

ಜೂನ್ 23, 2026

*ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಾಲಯದ ಜೀರ್ಣೋದ್ಧಾರ ಕಾರ್ಯ : ರೂ.1 ಕೋಟಿಗೂ ಅಧಿಕ ವೆಚ್ಚದ ಯೋಜನೆಗೆ ಅಂತಿಮ ಸ್ಪರ್ಶ*

ಜೂನ್ 23, 2026

*ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ 12ನೇ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ*

ಜೂನ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.