Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
  • *ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*
  • *ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*
  • *ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*
  • *ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*
  • *ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*
  • *ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*
  • *ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕುಶಾಲನಗರದಲ್ಲಿ ಐದು ಸಹಸ್ರ ಮಂದಿಯಿಂದ ಕಂಠ ಗಾಯನ : ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಲು ಶಾಸಕ ಡಾ.ಮಂತರ್ ಗೌಡ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರದಲ್ಲಿ ಐದು ಸಹಸ್ರ ಮಂದಿಯಿಂದ ಕಂಠ ಗಾಯನ : ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಲು ಶಾಸಕ ಡಾ.ಮಂತರ್ ಗೌಡ ಮನವಿ*

ಅಕ್ಟೋಬರ್ 19, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಅ.19 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಕಾರದೊಂದಿಗೆ ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ-50 ಹಾಗೂ 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.11 ರಂದು ಏಕಕಾಲದಲ್ಲಿ ಐದು ಸಹಸ್ರ ಮಂದಿಯಿಂದ ಕನ್ನಡ ಕಂಠ ಗಾಯನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕುಶಾಲನಗರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಕಂಠ ಗಾಯನ ಕಾರ್ಯಕ್ರಮದ ಯಶಸ್ಸಿಗೆ ತಾಲ್ಲೂಕು ಆಡಳಿತ ಸೇರಿದಂತೆ ವಿವಿಧ ಸಂಘ- ಸಂಸ್ಥೆಗಳು, ಶಾಲಾ- ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ನಾಗರಿಕರ ಸಹಭಾಗಿತ್ವದಲ್ಲಿ ಏಕಕಾಲದಲ್ಲಿ ಐದು ಸಹಸ್ರ ಮಂದಿಯಿಂದ ವಿನೂತನವಾಗಿ ನ.11 ರಂದು ಕುಶಾಲನಗರ ಪಟ್ಟಣದ ರಥಬೀದಿ ಹಾಗೂ ಪ್ರವಾಸಿ ಮಂದಿರ (ಐ.ಬಿ.) ರಸ್ತೆಯಲ್ಲಿ ಎಲ್ಲರೂ ಜತೆಗೂಡಿ ಕಂಠ ಗಾಯನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಸಂಘಟಿಸುವ ಕುರಿತು ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಒಕ್ಕೊರಲಿನಿಂದ ನಿರ್ಧಾರ ಕೈಗೊಂಡು ಕಂಠ ಗಾಯನವನ್ನು ಯಶಸ್ವಿಗೊಳಿಸುವಂತೆ ತೀರ್ಮಾನ ಕೈಗೊಳ್ಳಲಾಯಿತು. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕುಶಾಲನಗರದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ ಐದು ಸಹಸ್ರ ಮಂದಿ ಒಂದೆಡೆ ಸೇರಿ ಕಂಠ ಗಾಯನ ಹಾಡುವ ಇಂತಹ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸುವ ಮೂಲಕ ಕನ್ನಡದ ಕಹಳೆಯನ್ನು ಮೊಳಗಿಸಬೇಕು ಎಂದು ಮನವಿ ಮಾಡಿದರು. ಕನ್ನಡ ಭಾಷೆ, ನಾಡು- ನುಡಿ, ಕಲೆ, ಸಂಸ್ಕೃತಿ, ಸಾಹಿತ್ಯ-ಪರಂಪರೆಯನ್ನು ಎತ್ತಿಹಿಡಿಯುವ ಕೆಲಸಕ್ಕೆ ಎಲ್ಲರೂ ಪ್ರೋತ್ಸಾಹಿಸಬೇಕು. ತಾವು ಈ ಕಾರ್ಯಕ್ರಮದ ಯಶಸ್ಸಿಗೆ ಸಹಕರಿವುದಾಗಿ ತಿಳಿಸಿದರು. ಕಂಠ ಗಾಯನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸಲು ಎಲ್ಲಾ ಸಂಘ- ಸಂಸ್ಥೆಗಳು,ಪೊಲೀಸ್ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳು ಮತ್ತು ನಾಗರಿಕರು ಕೈಜೋಡಿಸಬೇಕು. ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರನ್ನು ಆಹ್ವಾನಿಸಲಾಗುವುದು. ಈ ಸಂಬಂಧ ತಕ್ಷಣದಲ್ಲೇ ಅಧಿಕಾರಿಗಳು ಹಾಗೂ ಸಂಘ- ಸಂಸ್ಥೆಗಳ ಸಭೆ ನಡೆಸಿ ಕಾರ್ಯಕ್ರಮದ ಅಂತಿಮ ರೂಪುರೇಷೆ ಕುರಿತು ಚರ್ಚಿಸಲಾಗುವುದು ಎಂದು ಶಾಸಕ ಡಾ ಮಂತರ್ ಗೌಡ ಹೇಳಿದರು. ಕಂಠ ಗಾಯನ ಕಾರ್ಯಕ್ರಮದ ಸಂಘಟನೆ ಹಾಗೂ ರೂಪುರೇಷೆ ಕುರಿತು ವಿಷಯ ಮಂಡಿಸಿದ ಕುಶಾಲನಗರ ತಾಲ್ಲೂಕು ಕ.ಸಾ.ಪ.ಅಧ್ಯಕ್ಷ ಕೆ.ಎಸ್.ನಾಗೇಶ್, ಕ.ಸಾ.ಪ.ವತಿಯಿಂದ ನ.11 ರಂದು ಹಮ್ಮಿಕೊಂಡಿರುವ ಕಂಠ ಗಾಯನವನ್ನು ಯಶಸ್ವಿಗೊಳಿಸಲು ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಮಾತನಾಡಿ, ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಎಲ್ಲೆಡೆ ಕನ್ನಡದ ಕಂಪು ಹರಡಿಸುವ ಮೂಲಕ ಎಲ್ಲರೂ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಕ.ಸಾ.ಪ.ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಎಲ್ಲರೂ ಶಿಸ್ತುಬದ್ಧವಾಗಿ ಕನ್ನಡ ಬಾವುಟ ಹಿಡಿದು ಕನ್ನಡದ ಕಂಪನ್ನು ಮೂಡಿಸುವ ಮೂಲಕ ಕಾರ್ಯಕ್ರಮದ ಯಶಸ್ವಿ ಸಂಘಟನೆಗೆ ವಿವಿಧ ಉಪ ಸಮಿತಿಗಳಿಗೆ ಜವಾಬ್ದಾರಿ ಕೆಲಸ ಹಂಚಿಕೆ ಮಾಡಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದರೆ ಕಾರ್ಯಕ್ರಮದ ಯಶಸ್ಸು ಸಾಧ್ಯ ಎಂದರು. ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಕಂಠ ಗಾಯನ ಕಾರ್ಯಕ್ರಮವು ವಿನೂತನ ಪ್ರಯೋಗವಾಗಿದ್ದು, ಇದೊಂದು ಸಂಗೀತ ಕ್ಷೇತ್ರದಲ್ಲಿ ಕ್ರಾಂತಿಕಾರಿ ಮೈಲಿಗಲ್ಲಾಗಲಿದೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದರು. ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸುವ ಕುರಿತು ತಹಶೀಲ್ದಾರ್ ಕಿರಣ್ ಗೌರಯ್ಯ ಹಾಗೂ ಉದ್ಯಮಿ ಎಂ.ಕೆ.ದಿನೇಶ್ ಮಾಹಿತಿ ನೀಡಿದರು. ಜಿಲ್ಲಾ ಕ.ಸಾ.ಪ. ಸಮಿತಿಯ ಸದಸ್ಯೆ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ, ತಾಲ್ಲೂಕು ಕ.ಸಾ.ಪ.ಕಾರ್ಯದರ್ಶಿಗಳಾದ ಟಿ.ವಿ.ಶೈಲಾ, ಎಸ್.ನಾಗರಾಜ್, ಕೋಶಾಧಿಕಾರಿ ಕೆ.ವಿ.ಉಮೇಶ್, ಸಮಿತಿಯ ಪ್ರಮುಖರಾದ ಎಂ.ಎನ್.ಕಾಳಪ್ಪ, ಬಿ.ಎಸ್.ಪರಮೇಶ್, ಡಿ.ಎಸ್.ಸೋಮಶೇಖರ್, ಟಿ.ಬಿ.ಮಂಜುನಾಥ್, ವಿವಿಧ ಸಂಸ್ಥೆಗಳ ಪ್ರಮುಖರಾದ ದೀಪಾ ಪೂಜಾರಿ, ಟಿ.ಜಿ.ಪ್ರೇಮಕುಮಾರ್, ಜಕ್ರಿಯಾ, ಎಂ.ಡಿ.ಕೃಷ್ಣಪ್ಪ, ಎಸ್.ಶಾಂಭಶಿವಮೂರ್ತಿ, ಡಿ.ವಿ.ರಾಜೇಶ್, ನಾಸೀರ್, ಲತಾ ರಮೇಶ್, ಚಿತ್ರ ರಮೇಶ್, ರೋಶನ್ ಹಾಗೂ ಮುಂತಾದ ಸಂಸ್ಥೆಗಳ ಪ್ರಮುಖರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 19, 2026

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.19 : ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ವಿಧಾನಸಭೆಯ ಕಲಾಪ ವೀಕ್ಷಿಸಿದರು.…

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026

*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*

ಆಗಷ್ಟ್ 18, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026

*ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*

ಆಗಷ್ಟ್ 18, 2026

*ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*

ಆಗಷ್ಟ್ 18, 2026

*ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*

ಆಗಷ್ಟ್ 18, 2026

*ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*

ಆಗಷ್ಟ್ 18, 2026

*ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.