Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಶ್ರೀಲಂಕಾದಿಂದ ಕಾಳು ಮೆಣಸು ಆಮದು : ಐದು ವಾರಗಳಲ್ಲಿ ಕಿಲೋಗೆ 35 ರೂಪಾಯಿ ಕುಸಿತ*
ಇತ್ತೀಚಿನ ಸುದ್ದಿಗಳು

*ಶ್ರೀಲಂಕಾದಿಂದ ಕಾಳು ಮೆಣಸು ಆಮದು : ಐದು ವಾರಗಳಲ್ಲಿ ಕಿಲೋಗೆ 35 ರೂಪಾಯಿ ಕುಸಿತ*

October 25, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕೊಚ್ಚಿನ್‌ ಅ.25 NEWS DESK : ದೇಶೀ ಮಾರುಕಟ್ಟೆಯಲ್ಲಿ ಕಾಳು ಮೆಣಸಿನ ದರವು ಎರಡು ವಾರಗಳಲಿ ಕಿಲೋಗೆ 19 ರೂಪಾಯಿಗಳಷ್ಟು ಕುಸಿತ ಕಂಡಿದೆ. ಕಳೆದ ವಾರದಲ್ಲಿಯೇ ಕಿಲೋಗೆ ₹ 11 ಕುಸಿತವಾಗಿದೆ, ಕಳೆದ ಐದು ವಾರಗಳಲ್ಲಿ ಒಟ್ಟು ಕುಸಿತವು ಕೆಜಿಗೆ ₹ 35ರಷ್ಟು ಕುಸಿದಿದೆ. (South Asian Free Trade Area ) SAFTA ಅಡಿಯಲ್ಲಿ 8 ಶೇಕಡಾ ಸುಂಕದ ಅಡಿಯಲ್ಲಿ ಶ್ರೀಲಂಕಾದಿಂದ ಆಮದು ಮಾಡಿದ ಉತ್ಪನ್ನಗಳ ಬೃಹತ್ ಆಗಮನವು ಬೆಲೆ ಕುಸಿತಕ್ಕೆ ಕಾರಣವೆಂದು ಬೆಳೆಗಾರ ಸಂಘಟನೆಗಳು ಆರೋಪಿಸಿದೆ. ಕೊಚ್ಚಿ ಟರ್ಮಿನಲ್ ಮಾರುಕಟ್ಟೆಯಲ್ಲಿ ಅನ್‌ಗಾರ್ಬಲ್ಡ್‌ ಕಿಲೋಗೆ ₹ 627 ಮತ್ತು ಗಾರ್ಬಲ್ಡ್‌ಗೆ ₹ 647 ರಂತೆ ಬೆಲೆಗಳು ಇವೆ. ಕೊಚ್ಚಿಯ ಕಾಳುಮೆಣಸಿನ ವ್ಯಾಪಾರಿ ಕಿಶೋರ್ ಶಾಮ್‌ಜಿ, ಮುಂಬೈನಿಂದ ಬಂದಿರುವ ಶ್ರೀಲಂಕಾದ ಕಾಳುಮೆಣಸು ಲಭ್ಯತೆಯೊಂದಿಗೆ ಬಹುತೇಕ ಎಲ್ಲಾ ಮಾರುಕಟ್ಟೆಗಳು ತುಂಬಿವೆ ಮತ್ತು ದಕ್ಷಿಣದ ಮಾರುಕಟ್ಟೆಗಳಲ್ಲಿಯೂ ಮಾರಾಟವಾಗುತ್ತಿದೆ ಎಂದು ಹೇಳಿದರು. ಶ್ರೀಲಂಕಾದ ಆಮದಿನ ಕಾರಣದಿಂದ ಸ್ಥಳೀಯವಾಗಿ ಬೆಳೆದ ಕಾಳುಮೆಣಸಿನ ಬೆಲೆ ಮೇಲೆ ಮತ್ತಷ್ಟು ಒತ್ತಡವನ್ನು ಹಾಕಿದ್ದು ಇದು ದರ ಕುಸಿತಕ್ಕೆ ಕಾರಣವಾಗುತ್ತದೆ ಮತ್ತು ದಕ್ಷಿಣದ ಎಲ್ಲಾ ರಾಜ್ಯಗಳಲ್ಲಿ ಕಾಳು ಮೆಣಸು ಬೆಳೆಯುತ್ತಿರುವ ಬೆಳೆಗಾರರು ತಮ್ಮ ಸ್ಟಾಕ್ ಅನ್ನು ಮಾರಾಟ ಮಾಡಲು ಮುಂದಾಗುತಿದ್ದಾರೆ. ಬೆಲೆ ಚೇತರಿಕೆಯ ನಿರೀಕ್ಷೆಯಲ್ಲಿ ಕಾಳುಮೆಣಸು ದಾಸ್ತಾನು ಇಟ್ಟಿದ್ದ ರೈತರ ಸಂಘಗಳು ಸಹ ತಮ್ಮ ದಾಸ್ತಾನುಗಳನ್ನು ಖಾಲಿ ಮಾಡಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ ಎಂದು ಅವರು ಹೇಳಿದರು. ಅಂಕಿಅಂಶಗಳನ್ನು ಉಲ್ಲೇಖಿಸಿ, ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ಶ್ರೀಲಂಕಾದಿಂದ ಒಟ್ಟು 10,433 ಟನ್‌ ಆಮದು ಆಗಿದ್ದು ಇತರ ಉತ್ಪಾದಕ ದೇಶಗಳಿಂದ ಒಟ್ಟು 12,606 ಟನ್‌ ಆಮದಾಗಿದೆ. ಶ್ರೀಲಂಕಾ ವಾರ್ಷಿಕವಾಗಿ 25 ಸಾವಿರ ಟನ್‌ ಉತ್ಪಾದನೆ ಮಾಡುತಿದ್ದು ಇದರಲ್ಲಿ ಅರ್ದಕ್ಕಿಂತ ಹೆಚ್ಚು ಕಾಳು ಮೆಣಸನ್ನು ರಫ್ತು ಮಾಡಲೇ ಬೇಕಿದೆ. ಏಕೆಂದರೆ ಅಲ್ಲಿನ ಆಂತರಿಕ ಬಳಕೆ ಕಡಿಮೆ ಇದೆ. ತಮ್ಮ ಹೆಚ್ಚುವರಿ ದಾಸ್ತಾನುಗಳನ್ನು ಮಾರಾಟ ಮಾಡಲು ಭಾರತದತ್ತ ನೋಡುತ್ತಿದ್ದಾರೆ ಎಂದು ಭಾರತೀಯ ಮೆಣಸು ಮತ್ತು ಮಸಾಲೆಗಳ ವ್ಯಾಪಾರ ಸಂಘದ ನಿರ್ದೇಶಕರೂ ಆಗಿರುವ ಶಾಮ್‌ ಜಿ ಹೇಳಿದ್ದಾರೆ. ಆದರೆ ಆಮದು ಮಾಡಲಾದ ವಸ್ತುವು ಕಡಿಮೆ ಪ್ರಮಾಣದ ಸಾಂದ್ರತೆ, ಹೆಚ್ಚಿನ ಶೇಕಡಾವಾರು ತೇವಾಂಶ ಮತ್ತು ಶಿಲೀಂಧ್ರದ ಉಪಸ್ಥಿತಿಯನ್ನು ಹೊಂದಿದೆ ಎಂದು ಅವರು ಆರೋಪಿಸಿದರು ಮತ್ತು ಇದು ಭಾರತದಲ್ಲಿ ಉತ್ಪಾದಿಸಿದ ಮೆಣಸಿಗೆ ಬೆಲೆಗಳು ಕುಸಿಯಲು ಕಾರಣವಾಗುವ ಅಂಶವಾಗಿದೆ ಎಂದು ಅವರು ಆರೋಪಿಸಿದರು. ಭಾರತದ ಒಟ್ಟು ಉತ್ಪಾದನೆ 70 ಸಾವಿರ ಟನ್‌ಗಳಷ್ಟಿದ್ದು ಇದರಲ್ಲಿ ಶೇಕಡಾ 45 ರಷ್ಟು ಕರ್ನಾಟಕದ ಪಾಲು ಆಗಿದೆ. ಭಾರತೀಯ ಕಾಳುಮೆಣಸು ಮತ್ತು ಮಸಾಲೆ ವ್ಯಾಪಾರಿಗಳ ಒಕ್ಕೂಟದ ಕೇರಳ ಘಟಕವು ದೇಶೀಯ ರೈತರ ಹಿತಾಸಕ್ತಿಗಳಿಗೆ ಮಾರಕ ಆಗಿರುವ ಇಂತಹ ಆಮದುಗಳನ್ನು ತಡೆಯಬೇಕೆಂದು ಸರ್ಕಾರವನ್ನು ಒತ್ತಾಯಿಸಿದೆ. ಆಮದು ನೀತಿಯಲ್ಲಿನ ಲೋಪದೋಷಗಳು ಮರು-ರಫ್ತು ಮಾಡಲು ಉದ್ದೇಶಿಸಿರುವ ಆಮದು ಮಾಡಿದ ಕಾಳುಮೆಣಸನ್ನು ದೇಶೀಯ ಮಾರುಕಟ್ಟೆಗೆ ಪ್ರವೇಶಿಸಲು ಅನುವು ಮಾಡಿಕೊಡುತ್ತದೆ ಎಂದು ಒಕ್ಕೂಟವು ಆರೋಪಿಸಿದೆ. ಭಾರತದೊಳಗೆ ಮೆಣಸನ್ನು ಆಮದು ಮಾಡಿಕೊಂಡು ಅದನ್ನು ಮರು-ರಫ್ತು ಮಾಡಲು ( Director General of Foreign Trade) ಡಿಜಿಎಫ್‌ಟಿ ಆರು ತಿಂಗಳ ಅವಧಿಯನ್ನು ನೀಡಿದೆ, ಇದು ಕಾಳುಮೆಣಸಿನಂತಹ ಸೂಕ್ಷ್ಮ ವಸ್ತುವಿನ ಆಮದು-ರಫ್ತು ನೀತಿಯಲ್ಲಿನ ಪ್ರಮುಖ ವೈಪರೀತ್ಯಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದರು. ಈ ಆರು ತಿಂಗಳು ದಾಸ್ತಾನು ಇಡುವ ಅನುಮತಿಯಿಂದಾಗಿ ಮರು ರಫ್ತು ಮಾಡಲು ಆಮದು ಮಾಡಿಕೊಂಡ ವ್ಯಾಪಾರಿಗಳು ಅದನ್ನು ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ಲಾಭ ಗಳಿಸುತಿದ್ದಾರೆ. ಇದನ್ನು ತಡೆಯಲು ಸರ್ಕಾರ ಗಂಭೀರ ಕ್ರಮ ತೆಗೆದುಕೊಳ್ಳುವಂತೆ ಸಂಘಟನೆಗಳು ಒತ್ತಾಯಿಸಿವೆ.

ವರದಿ : ಕೋವರ್‌ ಕೊಲ್ಲಿ ಇಂದ್ರೇಶ್‌  

Share. Facebook Twitter Pinterest LinkedIn Tumblr Email WhatsApp
Previous Article*ಅ.26 ರಂದು ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಮಹಾಸಭೆ*
Next Article *ದಸಂಸಯಿಂದ ಶಾಸಕ ಡಾ.ಮಂತರ್ ಗೌಡಗೆ “ಕೊಡಗು ಭೂಷಣ” ಪ್ರಶಸ್ತಿ ಪ್ರದಾನ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.