ವಿರಾಜಪೇಟೆ NEWS DESK ಅ.26 : ಕೊಡಗು ಜಿಲ್ಲಾ ಬಂಟರ ಭವನ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿಯಾಗಿ ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಬಿ.ಡಿ.ಜಗದೀಶ್ ರೈ ಅವರು ಆಯ್ಕೆಯಾಗಿದ್ದಾರೆ. ಮಡಿಕೇರಿಯಲ್ಲಿ ಶುಕ್ರವಾರ ನಡೆದ ಟ್ರಸ್ಟ್ ನ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದು, ಟ್ರಸ್ಟ್ ನ ಹಾಲಿ ಮ್ಯಾನೇಜಿಂಗ್ ಟ್ರಸ್ಟಿ ಬಿ.ಕೆ.ರವೀಂದ್ರ ರೈ ಅವರು ಟ್ರಸ್ಟ್ ನ ಅಧಿಕಾರ ಮತ್ತು ದಾಖಲೆಗಳನ್ನು ಟ್ರಸ್ಟಿ ಗಳ ಸಮ್ಮುಖದಲ್ಲಿ ಹಸ್ತಾಂತರಿಸಿದರು. ಟ್ರಸ್ಟ್ ನ ನೂತನ ಕಾರ್ಯದರ್ಶಿಯಾಗಿ ಬಿ.ಕೆ.ಸತೀಶ್ ರೈ ಹಾಗೂ ಖಜಾಂಚಿಯಾಗಿ ಅಪ್ಪು ಬಾಲಕೃಷ್ಣ ರೈ ಆಯ್ಕೆಯಾಗಿದ್ದಾರೆ. ಸಭೆಯಲ್ಲಿ ಜಿಲ್ಲಾ ಬಂಟರ ಭವನದ ಟ್ರಸ್ಟಿಗಳು ಉಪಸ್ಥಿತರಿದ್ದರು.









