
ಚೆಟ್ಟಳ್ಳಿ NEWS DESK ಅ.31 : ಚೆಟ್ಟಳ್ಳಿಯ ವೀರಾಂಜನೇಯ ಯುವಕ ಸಂಘದ ವತಿಯಿಂದ ಶ್ರೀ ನರೇಂದ್ರ ಮೋದಿ ಸಹಕಾರ ಭವನದಲ್ಲಿ ದೀಫಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಗಣಪತಿ, ಮಹಾವಿಷ್ಣು, ವೀರಾಂಜನೇಯ, ಪಶುಪತಿನಾಥ ಹಾಗೂ ಕಾವೇರಿ ಮಾತೆಯ ಪ್ರತಿಮೆ ಎದುರು ಭಕ್ತರು ಹಣತೆ ಬೆಳಗುವ ಮೂಲಕ ದೀಪಾವಳಿ ಆಚರಿಸಿದರು. ಕಳೆದ ಹಲವು ವರ್ಷಗಳಿಂದ ಸಂಘದ ಕಾರ್ಯಕರ್ತರು ಗ್ರಾಮದ ಭಕ್ತಾಧಿಗಳೆಲ್ಲ ಸೇರಿ ದೀಪಾವಳಿಯಂದು ಹಣತೆ ಬೆಳಗಿ ಸಾಂಪ್ರದಾಯಿಕವಾಗಿ ದೀಪಾವಳಿ ಆಚರಿಸಲಾಗುತ್ತದೆ. ಈ ಬಾರಿಯೂ ಸಂಘದ ವತಿಯಿಂದ ನೂರಾರು ದೀಪ ಬೆಳಗಿ ದೀಪಾವಳಿಯನ್ನು ಆಚರಿಸಿದ್ದೇವೆ ಎಂದು ವೀರಾಂಜನೆಯ ಯುವಕ ಸಂಘದ ಅಧ್ಯಕ್ಷ ಬಲ್ಲಾರಂಡ ಕಂಠಿಕಾರ್ಯಪ್ಪ ತಿಳಿಸಿದರು.









