Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಹೋರಾಟ : ನ.6 ರಂದು ಬುಟ್ಟಂಗಾಲದಲ್ಲಿ ಸಿಎನ್‌ಸಿಯಿಂದ ಜನಜಾಗೃತಿ ಮಾನವ ಸರಪಳಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಹೋರಾಟ : ನ.6 ರಂದು ಬುಟ್ಟಂಗಾಲದಲ್ಲಿ ಸಿಎನ್‌ಸಿಯಿಂದ ಜನಜಾಗೃತಿ ಮಾನವ ಸರಪಳಿ*

ನವೆಂಬರ್ 2, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ನ.2 : ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ತಕ್ಷಣ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ನ.6 ರಂದು ಬುಟ್ಟಂಗಾಲದಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮವನ್ನು ಆಯೋಜಿಸಿರುವುದಾಗಿ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಬುಧವಾರ ಬೆಳಿಗ್ಗೆ 10.30 ಗಂಟೆಗೆ ಬುಟ್ಟಂಗಾಲ ಜಂಕ್ಷನ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೊಡವ ಲ್ಯಾಂಡ್ ನ ಸಂರಕ್ಷಣೆಗಾಗಿ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಪ್ರತಿಜ್ಞಾವಿಧಿ ಸ್ವೀಕರಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕೊಡಗಿನಲ್ಲಿ ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯ್ದೆ ವ್ಯಾಪಕವಾಗಿ ದುರುಪಯೋಗವಾಗುತ್ತಿದೆ. ಬೃಹತ್ ನಗರ ನಿರ್ಮಿಸುವ ಹುನ್ನಾರದೊಂದಿಗೆ ಬರಪೊಳೆ, ಕೊಂಗಣಪೊಳೆ ಸೇರಿದಂತೆ ಕಾವೇರಿ ನದಿಯ ಹಲವು ಉಪ ನದಿಗಳಿಗೆ ಜೀವ ಸೆಲೆಯಾಗಿರುವ ಪೆರುಂಬಾಡಿ, ಬಾಳುಗೋಡು, ನಾಂಗಾಲ, ಬುಟ್ಟಂಗಾಲ ಭಾಗದಲ್ಲಿ ಭೂಮಿ ಕಬಳಿಸಲು ಬಂಡವಾಳಶಾಹಿಗಳು ಹವಣಿಸುತ್ತಿದ್ದಾರೆ. ಬಂಡವಾಳಶಾಹಿ ಆರ್ಥಿಕ ಅಪರಾಧಿಗಳು, ರೆಸಾರ್ಟ್ ಮಾಫಿಯಾ, ಟೌನ್‌ಶಿಪ್ ಧಣಿಗಳು, ಹವಾಲ ದಂಧೆಕೋರರು ತಮ್ಮ ಕರಾಳ ವಿಷ ವರ್ತುಲಗಳ ಮೂಲಕ ಇಡೀ ಪ್ರದೇಶದ ಕೃಷಿ ಭೂಮಿಯನ್ನು ಕಬ್ಜ ಮಾಡಿ ಜಲಮೂಲ ಬಸಿದು ಗುಡ್ಡ-ಬೆಟ್ಟ ಕೊರೆದು ಕಾಡು, ಪ್ರಾಕೃತಿಕ ಸಂಪನ್ಮೂಲ ಲೂಟಿಮಾಡಿ ಕೊಡವ ಜನಪದ ಸಂಸ್ಕೃತಿಯ ಗರ್ಭಗುಡಿಯಾದ “ಮಂದ್”, ಗ್ರಾಮದೇವತೆ – ನಾಡ್ ದೇವತೆಗಳ ನೆಲೆಗಳನ್ನು ಧ್ವಂಸ ಮಾಡಿ ಕೊಡವ ಜನಸಂಖ್ಯಾ ಶಾಸ್ತ್ರದ ನರಮಂಡಲವಾಗಿರುವ ಪೆರವನಾಡ್, ಬೇರಳಿನಾಡ್ ಮತ್ತು ಕುತ್ತ್ನಾಡ್ ಪ್ರದೇಶದ ಜನಸಂಖ್ಯಾ ಪಲ್ಲಟಕ್ಕೆ ಹೊಂಚು ಹಾಕುತ್ತಿವೆ ಎಂದು ಎನ್.ಯು.ನಾಚಪ್ಪ ಆರೋಪಿಸಿದ್ದಾರೆ. ಕರಾಳ ಭೂ ಸುಧಾರಣಾ ಕಾಯ್ದೆ ಅಡಿಯಲ್ಲಿ ಹೊರ ರಾಜ್ಯ ಹೊರದೇಶದ ಉದ್ಯಮಪತಿಗಳು ಎಗ್ಗಿಲ್ಲದೆ ಕೊಡವ ಲ್ಯಾಂಡ್‌ನಲ್ಲಿ ಭೂ ಕಬ್ಜದಲ್ಲಿ ತೊಡಗಿದ್ದರೆ ಅವರು ಕರೆದು ತಂದ ಹೊರಗಿನ ಕಾರ್ಮಿಕರು ಇಲ್ಲಿ ಆಧಾರ್ ಮತ್ತು ಓಟರ್ ಐಡಿ ಪಡೆದು ಭೂರಹಿತ ಶೋಷಿತರೆಂದು ಬಿಂಬಿಸುವ ಮೂಲಕ ಅಕ್ರಮ-ಸಕ್ರಮ ಮತ್ತು ಆಶ್ರಯ ಯೋಜನೆಯ ಫಲಾನುಭವಿಗಳಾಗಿ ಇಲ್ಲಿನ ಜನಸಂಖ್ಯಾ ಶಾಸ್ತçದ ಪಲ್ಲಟಕ್ಕೆ ಕಾರಣವಾಗಿ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಮೂಲಕ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳುಗೆಡುವುತ್ತಿದ್ದಾರೆ. ಹಬ್ಬ, ಸಾಂಸ್ಕೃತಿಕ ಕಾರ್ಯಕ್ರಮ, ಧಾರ್ಮಿಕ ಕೇಂದ್ರಗಳು ಮತ್ತು ಕ್ರೀಡೋತ್ಸವಗಳಿಗೆ ದೇಣಿಗೆ ನೀಡಿ ಜನರ ಗಮನವನ್ನು ಬೇರೆಡೆಗೆ ಸೆಳೆದು ಕರ್ನಾಟಕ ಭೂಸುಧಾರಣಾ ಕಾಯ್ದೆಯನ್ನು ಉಲ್ಲಂಘಿಸುತ್ತಿದ್ದಾರೆ. ಪರಿಸರದ ಮೇಲೆ ದಾಳಿ ಮಾಡಿ ಅನಾರೋಗ್ಯಕರ ಪರಿಸ್ಥಿತಿಯನ್ನು ಸೃಷ್ಟಿಸಿ, ತಮ್ಮ ತಪ್ಪನ್ನು ಮುಚ್ಚಿ ಹಾಕಲು ವೈದ್ಯಕೀಯ ಸೇವೆ ನೀಡಿದಂತೆ ಮಾಡಿ ಸಾಮಾಜಿಕ ಕಳಕಳಿಯ ನಾಟಕವಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕೊಡವರ ಸ್ವಾಧೀನದಲ್ಲಿರುವ ಭೂಮಿಯನ್ನು ಕೊಡವರಿಗೆ 30 ವರ್ಷಗಳ ಗುತ್ತಿಗೆಗೆ ನೀಡುವ ಸರ್ಕಾರದ ಯೋಜನೆಯನ್ನು ದುಷ್ಟಕೂಟ ವಿಫಲಗೊಳಿಸಲು ಯತ್ನಿಸುವ ಮೂಲಕ ಕೊಡವರನ್ನು ಸಂಕಷ್ಟ ಮತ್ತು ಆತಂಕಕ್ಕೆ ತಳ್ಳಿದ್ದಾರೆ. ಸಿದ್ದಾಪುರ ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‌ಸಿ ವತಿಯಿಂದ ನಿರಂತರ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ಕಪ್ಪು ಹಣ ಹೊಂದಿರುವವರು ವಿಲ್ಲಾ, ಟೌನ್ ಶಿಪ್ ಗಳ ನಿರ್ಮಾಣದಲ್ಲಿ ತೊಡಗಿರುವ ಉದ್ಯಮಪತಿಗಳು ಹಾಗೂ ಬಂಡವಾಳಶಾಹಿಗಳು ಇಡೀ ಕೊಡಗಿನಲ್ಲಿ ವ್ಯಾಪಿಸಿದ್ದು, ಪಾಕೃತಿಕ ಕೊಡುಗೆಗಳನ್ನು ಆವರಿಸಿಕೊಂಡಿದ್ದಾರೆ. ಸರ್ಕಾರ ಆದಾಯವನ್ನಷ್ಟೇ ಗುರಿ ಮಾಡಿಕೊಂಡು ಪವಿತ್ರ ಕೊಡವಲ್ಯಾಂಡ್ ನ್ನು ಮೋಜು, ಮಸ್ತಿಗಾಗಿ ಬಿಟ್ಟುಕೊಡುತ್ತಿದೆ ಎಂದು ಆರೋಪಿಸಿದ್ದಾರೆ. ಕೊಡಗಿನಲ್ಲಿ ಪ್ರವಾಸೋದ್ಯಮವನ್ನು ಬೂಸ್ಟ್ ಮಾಡುವುದಾಗಿ ಜಿಲ್ಲಾಡಳಿತ ಹೇಳಿಕೆ ನೀಡುತ್ತಿದೆ. ಪ್ರವಾಸೋದ್ಯಮದ ಬೆಳವಣಿಗೆ ಎಂದರೆ ಹಸಿರ ಬೆಟ್ಟಗುಡ್ಡಗಳನ್ನು ಕಡಿದು ಜಲನಾಳಗಳನ್ನು ನಾಶಪಡಿಸುವುದೇ ಎನ್ನುವುದನ್ನು ಶ್ವೇತಪತ್ರದ ಮೂಲಕ ಸ್ಪಷ್ಟಪಡಿಸಬೇಕು ಎಂದು ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.9: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ…

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.