ಮಡಿಕೇರಿ NEWS DESK ನ.12: ಕುಶಾಲನಗರ ಸಾಮಿಲ್ ಮಾಲೀಕರ ಸಂಘದ ನೂತನ ಅಧ್ಯಕ್ಷರಾಗಿ ಕರ್ನಾಟಕ ಸಾಮಿಲ್ ಮಾಲೀಕ ಎಂ.ಎಚ್.ಮಹಮ್ಮದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕುಶಾಲನಗರ ಸಮೀಪದ ಗಂಧದ ಕೋಟೆ ಬಳಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಎಂ.ಎಚ್. ಮಹಮ್ಮದ್, ಉಪಾಧ್ಯಕ್ಷರಾಗಿ ಬಿ.ಪಿ. ವಿಜಯ, ಎಂ.ಎಂ.ಶಾಹಿರ್, ಕಾರ್ಯದರ್ಶಿಯಾಗಿ ಕೆ.ಲೋಹಿತ್, ಖಜಾಂಚಿಯಾಗಿ ರಮೇಶ್ ಆಯ್ಕೆಗೊಂಡರು. ಕುಶಾಲನಗರ ವ್ಯಾಪ್ತಿಯ ಎಲ್ಲಾ ಸಾಮಿಲ್ ಮಾಲೀಕರನ್ನು ಸಂಘದ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ನೂತನ ಅಧ್ಯಕ್ಷ ಎಂ.ಎಚ್.ಮಹಮ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









