Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
  • *ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*
  • *ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ : ರೋಗಿಗಳ ಪಾಲಿಗೆ ತಜ್ಞರ ಸೇವೆ ಮರೀಚಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯ ಹಿಂದೂಸ್ತಾನಿ ಶಾಲೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ : ಮಕ್ಕಳಲ್ಲಿ ದೇಶದ ಭವ್ಯ ಭವಿಷ್ಯ ಕಂಡ ನೆಹರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯ ಹಿಂದೂಸ್ತಾನಿ ಶಾಲೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ : ಮಕ್ಕಳಲ್ಲಿ ದೇಶದ ಭವ್ಯ ಭವಿಷ್ಯ ಕಂಡ ನೆಹರು*

ನವೆಂಬರ್ 17, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ನ.17 : ಪುಟ್ಟ ಮಕ್ಕಳಲ್ಲಿ ಭಾರತ ದೇಶದ ಭವಿಷ್ಯವನ್ನು ಕಂಡ ಮಹಾನ್ ನೇತಾರ, ಮುತ್ಸದಿ ಸ್ವತಂತ್ರ ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರು ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಕೊಡಗು ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಬಣ್ಣಿಸಿದ್ದಾರೆ. ಮಡಿಕೇರಿಯ ಹಿಂದೂಸ್ತಾನಿ ಶಾಲೆಯ ಅಂಗನವಾಡಿಯಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ನೆಹರೂ ಅವರು ದೂರದೃಷ್ಟಿಯುಳ್ಳ ನಾಯಕರಾಗಿದ್ದು, ಸ್ವಾತಂತ್ರ್ಯ ಪಡೆದ ಸಮಯದಲ್ಲಿ ದೇಶದ ಉಜ್ವಲ ಭವಿಷ್ಯಕ್ಕಾಗಿ ಮಕ್ಕಳ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿದರು. ಮಕ್ಕಳ ಶಿಕ್ಷಣ, ಆರೋಗ್ಯ, ಉದ್ಯೋಗಕ್ಕೆ ಮಹತ್ವ ನೀಡಿ ಹಲವು ಯೋಜನೆಗಳನ್ನು ರೂಪಿಸಿದ ಪರಿಣಾಮ ದೇಶದ ಅಭಿವೃದ್ಧಿ ಸಾಧ್ಯವಾಯಿತು ಎಂದರು. ಮಕ್ಕಳ ಬಗ್ಗೆ ನೆಹರು ಅವರಿಗೆ ಇದ್ದ ಅತೀ ಕಾಳಜಿಯನ್ನು ಗಮನಿಸಿ ದೇಶ ಅವರ ಜನ್ಮ ದಿನಾಚರಣೆಯನ್ನು ಮಕ್ಕಳ ದಿನಾಚರಣೆ ಎಂದು ಆಚರಿಸುವ ಮೂಲಕ ಗೌರವಿಸುತ್ತಿದೆ. ಇಂತಹ ಗೌರವ ಜಗತ್ತಿನ ಯಾವ ನಾಯಕರಿಗೂ ಲಭಿಸಿಲ್ಲ. ನೆಹರು ಅವರ ಆದರ್ಶಗಳನ್ನು ಮಕ್ಕಳಿಗೆ ಮನದಟ್ಟು ಮಾಡುವ ಜವಾಬ್ದಾರಿ ಪೋಷಕರು ಹಾಗೂ ಶಿಕ್ಷಕರ ಮೇಲಿದೆ ಎಂದು ತಿಳಿಸಿದರು.
ಅಂಗನವಾಡಿ ಆಹಾರ ರಾಜ್ಯಾದ್ಯಂತ ಏಕ ಪ್ರಕಾರವಾಗಿದ್ದು ಪ್ರಸ್ತುತ ನೀಡುತ್ತಿರುವ ಆಹಾರ ಇಲ್ಲಿನ ಮಕ್ಕಳಿಗೆ ಸೇರುತ್ತಿಲ್ಲ ಎಂಬ ಪೋಷಕರ ಮನವಿಗೆ ಉತ್ತರಿಸಿದ ತೆನ್ನಿರ ಮೈನಾ ಅವರು, ಈ ವಿಚಾರವನ್ನು ಶಾಸಕದ್ವಯರಾದ ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರ ಗಮನಕ್ಕೆ ತಂದು ಪ್ರಾದೇಶಿಕವಾಗಿ ಬಳಕೆ ಮಾಡುವ ಆಹಾರ ವಿತರಣೆಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಉದ್ಯಮಿ ಕಲೀಲ್ ಬಾಷ ಅಂಗನವಾಡಿಯ ಮಕ್ಕಳು ವಿದ್ಯೆಯ ಜೊತೆ ಉತ್ತಮ ಸಂಸ್ಕಾರವನ್ನು ಕಲಿಯುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಮತ್ತೋರ್ವ ಅತಿಥಿ ಸ್ಥಳೀಯ ಯುವ ಮುಖಂಡ ರವೂಫ್ ಶೇಖ್ ಮಾತನಾಡಿ ಈ ಅಂಗನವಾಡಿಯ ಅಭಿವೃದ್ದಿಗೆ ಶಾಸಕ ಡಾ.ಮಂತರ್ ಗೌಡ ಅವರು ಅನುದಾನದ ಭರವಸೆ ನೀಡಿದ್ದು, ಸದ್ಯದಲ್ಲಿಯೇ ಅಭಿವೃದ್ಧಿ ಕಾಮಗಾರಿ ನಡೆಸಲಾಗುವುದು ಎಂದು ತಿಳಿಸಿದರು.
::: ಛದ್ಮವೇಷದಲ್ಲಿ ಮಿಂಚಿದ ಮಕ್ಕಳು ::: ಅಂಗನವಾಡಿ ಮಕ್ಕಳು ಡಾ.ಬಿ.ಆರ್.ಅಂಬೇಡ್ಕರ್, ಮಹಾತ್ಮ ಗಾಂಧಿ, ಡಾಕ್ಟರ್, ಕಿತ್ತೂರ ರಾಣಿ ಚೆನ್ನಮ್ಮ, ಕೊಡಗಿನ ಬೆಡಗಿ, ನ್ಯೂಸ್ ಪೇಪರ್ ಗರ್ಲ್ ಸೇರಿದಂತೆ ವಿವಿಧ ವೇಷಗಳಲ್ಲಿ ಮಿಂಚಿ ಸಂಭ್ರಮಿಸಿದರು.
ಕೆ.ನಿಡುಗಣೆ ಗ್ರಾಮ ಪಂಚಾಯತ್ ಸದಸ್ಯ ಜಾನ್ಸನ್ ಪಿಂಟೋ, ಸ್ಥಳೀಯ ಪ್ರಮುಖರಾದ ಮೀನಾಕ್ಷಿ, ಪೂರ್ಣಿಮಾ ವಿಮಲ ರೈ, ರಮೀಝಾ ಸೇರಿದಂತೆ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಸುಮತಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಸೆ. 9: ಕೊಡಗಿನಲ್ಲಿ ಗದ್ಯ ಹಾಗೂ ಕಾವ್ಯ ರಚನೆಯ ಮೂಲಕ ಸಾಹಿತ್ಯ ಕೃಷಿ ಮಾಡಿರುವ ತ್ರಿಭಾಷಾ…

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026

*ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ : ರೋಗಿಗಳ ಪಾಲಿಗೆ ತಜ್ಞರ ಸೇವೆ ಮರೀಚಿಕೆ*

ಸೆಪ್ಟೆಂಬರ್ 9, 2026

*ಮೂರ್ನಾಡಿನಲ್ಲಿ 102ನೇ ವರ್ಷದ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.